ದೇಶ

ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ: ಬಿಆರ್‌ಎಸ್ ಮುಖಂಡ, ಪುತ್ರ ಸಾವು

Manjula VN

ಮೇದಕ್ (ತೆಲಂಗಾಣ): ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮುಖಂಡ ತೌರ್ಯ ನಾಯಕ್ ಮತ್ತು ಅವರ ಪುತ್ರ ಸಾವನ್ನಪ್ಪಿದ್ದಾರೆಂದು ಭಾನುವಾರ ತಿಳಿದುಬಂದಿದೆ.

ನರಸಿಂಗಿಯಿಂದ ಚೇಗುಂಟಾಗೆ ಪ್ರಯಾಣಿಸುತ್ತಿದ್ದಾಗ ರಸ್ತೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನರಸಿಂಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

ತೌರ್ಯ ನಾಯಕ್ ಮತ್ತು ಅವರ ಮಗ ಅಂಕಿತ್ ಅವರು ನರಸಿಂಗಿ ಗ್ರಾಮದಿಂದ ಚೇಗುಂಟಾ ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಕಾರಿನ ಟೈರ್ ಒಡೆದು ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿ ಹೊಡೆದಿದೆ. ಬಳಿಕ ಲಾರಿಯೊಂದಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತದೇಹಗಳನ್ನು ರಾಮಾಯಣಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

SCROLL FOR NEXT