ಅರವಿಂದ್ ಕೇಜ್ರಿವಾಲ್ 
ದೇಶ

ಮಣಿಪುರ ಹಿಂಸಾಚಾರ: ನಾಳೆ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಎಎಪಿ ಕರೆ

ಮಣಿಪುರ ಹಿಂಸಾಚಾರ ಮತ್ತು ಅನಿಶ್ಚಿತ ಪರಿಸ್ಥಿತಿಯನ್ನು ಖಂಡಿಸಿ ಆಮ್ ಆದ್ಮಿ ಪಕ್ಷ ಮಂಗಳವಾರ ದೇಶಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ಮುಖಂಡರು ಸೋಮವಾರ ತಿಳಿಸಿದ್ದಾರೆ.

ನವದೆಹಲಿ: ಮಣಿಪುರ ಹಿಂಸಾಚಾರ ಮತ್ತು ಅನಿಶ್ಚಿತ ಪರಿಸ್ಥಿತಿಯನ್ನು ಖಂಡಿಸಿ ಆಮ್ ಆದ್ಮಿ ಪಕ್ಷ ಮಂಗಳವಾರ ದೇಶಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ಮುಖಂಡರು ಸೋಮವಾರ ತಿಳಿಸಿದ್ದಾರೆ.

ಮಣಿಪುರ ಹಿಂಸಾಚಾರ ಖಂಡಿಸಿ ದೆಹಲಿಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಪಕ್ಷದ ಉನ್ನತ ನಾಯಕರು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಮಣಿಪುರ ವಿಷಯದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಸದನದಲ್ಲಿ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ ಹಲವು ವಿರೋಧ ಪಕ್ಷಗಳ ನಾಯಕರು ಸೋಮವಾರ ಸಂಸತ್ತಿನ ಒಳಗೆ ಮತ್ತು ಹೊರಗೆ ಪ್ರತಿಭಟನೆ ನಡೆಸಿದರು.

ಮೇ 3 ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ 160ಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.

ಮೇ 4 ರಂದು ಚಿತ್ರೀಕರಿಸಲಾಗಿದೆ ಎಂದು ಹೇಳಲಾದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ವಿಡಿಯೋವೊಂದು ಕಳೆದ ವಾರ  ಆನ್‌ಲೈನ್‌ನಲ್ಲಿ ಕಾಣಿಸಿಕೊಂಡ ನಂತರ ಮಣಿಪುರದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT