ಬಸ್ ಚಕ್ರದಡಿ ಸಿಲುಕಿ ವ್ಯಕ್ತಿ ಸಾವು 
ದೇಶ

ವೇಗವಾಗಿ ಬರುತ್ತಿದ್ದ ಬಸ್ ಚಕ್ರದಡಿ ಸಿಲುಕಿ ವ್ಯಕ್ತಿ ಆತ್ಮಹತ್ಯೆ! ಭಯಾನಕ ವಿಡಿಯೋ

ವೇಗವಾಗಿ ಬರುತ್ತಿದ್ದ ಬಸ್ ಚಕ್ರದಡಿ ತಾನಾಗಿಯೇ ಸಿಲುಕಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಹೈದ್ರಾಬಾದ್ ನ ಗಚ್ಚಿಬೌಲಿಯಲ್ಲಿ ನಡೆದಿದೆ.

ಹೈದ್ರಾಬಾದ್: ವೇಗವಾಗಿ ಬರುತ್ತಿದ್ದ ಬಸ್ ಚಕ್ರದಡಿ ತಾನಾಗಿಯೇ ಸಿಲುಕಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಹೈದ್ರಾಬಾದ್ ನ ಗಚ್ಚಿಬೌಲಿಯಲ್ಲಿ ನಡೆದಿದೆ.

ವೇಗವಾಗಿ ಬರುತ್ತಿದ್ದ ಆರ್ ಟಿಸಿ ಬಸ್  ಕೊಂಡಾಪುರ ಕ್ರಾಸ್‌ರೋಡ್ಸ್‌ನಲ್ಲಿ ಸ್ವಲ್ವ ವೇಗವನ್ನು ಕಡಿಮೆ ಮಾಡುತ್ತಿದ್ದಂತೆಯೇ ಹಠಾತ್ತನೇ ಬಂದ ವ್ಯಕ್ತಿಯೊಬ್ಬ ತಾನಾಗಿಯೇ ಬಸ್ ನ ಚಕ್ರದಡಿ ಮಲಗಿಕೊಂಡಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಆತನನ್ನು ಹೊರಗೆಳೆದು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಅಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗಲೇ ಆತ ಸಾವನ್ನಪ್ಪಿದ್ದಾನೆ.

ಮೃತನನ್ನು ಪಶ್ಚಿಮ ಬಂಗಾಳ ಮೂಲದ ಬಿಸು ರಜಬ್ ಎಂದು ಗುರುತಿಸಲಾಗಿದ್ದು, ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇಂತಹ ಜೀವ ತೆಗೆದುಕೊಳ್ಳುವ ಹಿಂದಿನ ಕಾರಣ ಇನ್ನೂ ತಿಳಿದಿಲ್ಲ. ಆದರೆ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 

ಘಟನೆ ಕುರಿತು ವಿಡಿಯೋವನ್ನು ಐಪಿಎಸ್ ಅಧಿಕಾರಿ ವಿ. ಸಿ. ಸಜ್ಜನರ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಯಾರೂ ಕೂಡಾ ಇಂತಹ ಕ್ರಮಕ್ಕೆ ಮುಂದಾಗದಂತೆ ಜನರಲ್ಲಿ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!