ಭಾರತದಲ್ಲಿ ದ್ವಿಚಕ್ರ ವಾಹನಗಳು 
ದೇಶ

ವಿಶ್ವದಲ್ಲೇ ಗರಿಷ್ಠ ದ್ವಿಚಕ್ರ ವಾಹನ ಹೊಂದಿರುವ ದೇಶ: ಚೀನಾ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಭಾರತ

ವಿಶ್ವದಲ್ಲೇ ಗರಿಷ್ಠ ದ್ವಿಚಕ್ರ ವಾಹನ ಹೊಂದಿರುವ ದೇಶಗಳ ಪಟ್ಟಿಯಲ್ಲಿ ಚೀನಾದೇಶವನ್ನು ಭಾರತ ಹಿಂದಿಕ್ಕಿದ್ದು ಅಗ್ರ ಸ್ಥಾನಕ್ಕೇರಿದೆ.

ನವದೆಹಲಿ: ವಿಶ್ವದಲ್ಲೇ ಗರಿಷ್ಠ ದ್ವಿಚಕ್ರ ವಾಹನ ಹೊಂದಿರುವ ದೇಶಗಳ ಪಟ್ಟಿಯಲ್ಲಿ ಚೀನಾದೇಶವನ್ನು ಭಾರತ ಹಿಂದಿಕ್ಕಿದ್ದು ಅಗ್ರ ಸ್ಥಾನಕ್ಕೇರಿದೆ.

ವಿಶ್ವದಲ್ಲೇ ಗರಿಷ್ಠ ನೋಂದಾಯಿತ ದ್ವಿಚಕ್ರ ವಾಹನಗಳನ್ನು ಹೊಂದಿರುವ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದ್ದು, ಈ ಬಗ್ಗೆ ರೋಡ್ ಟ್ರಾನ್ಸ್ ಪೋರ್ಟ್ ಈಯರ್ ಬುಕ್ ನ ಇತ್ತೀಚಿನ ವರದಿಯ ಪ್ರಕಾರ ಭಾರತದಲ್ಲಿ ವಿಶ್ವದಲ್ಲೇ ಗರಿಷ್ಠ ಪ್ರಮಾಣದ ದ್ವಿಚಕ್ರ ವಾಹನಗಳಿದ್ದು, ಚೀನಾವನ್ನು ಹಿಂದಿಕ್ಕಿದೆ. ಈ ಪಟ್ಟಿಯಲ್ಲಿ ಇಂಡೋನೇಷ್ಯಾ ಎರಡನೇ ಸ್ಥಾನದಲ್ಲಿದೆ. ಪ್ರಯಾಣಿಕರ ಕಾರುಗಳ ಸಂಖ್ಯೆಯಲ್ಲಿ ಭಾರತ ಎಂಟನೇ ಸ್ಥಾನದಲ್ಲಿದ್ದು, ಚೀನಾ, ಅಮೆರಿಕ ಹಾಗೂ ಜಪಾನ್ ಮೊದಲ ಮೂರು ಸ್ಥಾನಗಳನ್ನು ಹಂಚಿಕೊಂಡಿವೆ.

2020ರ ಅಂತಾರಾಷ್ಟ್ರೀಯ ರಸ್ತೆ ಒಕ್ಕೂಟದ ಅಂಕಿ ಅಂಶಗಳ ಆಧಾರದಲ್ಲಿ ಈ ವರದಿ ಸಿದ್ಧಪಡಿಸಲಾಗಿದ್ದು, ಭಾರತದ ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ ನೋಂದಾಯಿತ ವಾಹನಗಳ ಮಾಹಿತಿ ಸಂಗ್ರಹಿಸಲಾಗಿದೆ. ಭಾರತದಲ್ಲಿ ಒಟ್ಟು 32.63 ಕೋಟಿ ವಾಹನಗಳಿದ್ದು, ಈ ಪೈಕಿ ಶೇಕಡ 75ರಷ್ಟು ದ್ವಿಚಕ್ರ ವಾಹನಗಳಿವೆ. ಕಳೆದ ಮೂರು ವರ್ಷಗಳಲ್ಲಿ ಎರಡು ಕೋಟಿಗೂ ಅಧಿಕ ವಾಹನಗಳು ನೋಂದಣಿಯಾಗಿವೆ. ಇದರಿಂದಾಗಿ ಜುಲೈ ಮಧ್ಯದ ವೇಳೆಗೆ ಭಾರತದಲ್ಲಿ ಒಟ್ಟು ವಾಹನಗಳ ಸಂಖ್ಯೆ 34.8 ಕೋಟಿಗೆ ಏರಿಕೆಯಾಗಿವೆ ಎನ್ನುವ ಅಂಶ ಸರ್ಕಾರದ ವಾಹನ್ ಪೋರ್ಟೆಲ್ನಿಂದ ತಿಳಿದು ಬರುತ್ತದೆ.

ಭಾರತದ ರಾಜ್ಯಗಳ ಪೈಕಿ ಮಹಾರಾಷ್ಟ್ರದಲ್ಲಿ ಅತ್ಯಧಿಕ ಎಂದರೆ 3.78 ಕೋಟಿ ವಾಹನಗಳಿವೆ. ಉತ್ತರ ಪ್ರದೇಶ (3.49 ಕೋಟಿ), ತಮಿಳುನಾಡು (3.21 ಕೋಟಿ) ನಂತರದ ಸ್ಥಾನಗಳಲ್ಲಿವೆ. ಹತ್ತು ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ನಗರಗಳ ಪೈಕಿ ದೆಹಲಿಯಲ್ಲಿ ಗರಿಷ್ಠ 1.18 ಕೋಟಿ ವಾಹನಗಳು ನೋಂದಣಿಯಾಗಿವೆ. ಬೆಂಗಳೂರಿನಲ್ಲಿ 96.4 ಲಕ್ಷ ವಾಹನಗಳಿದ್ದು, ರಾಜ್ಯ ರಾಜಧಾನಿ ಎರಡನೇ ಸ್ಥಾನದಲ್ಲಿದೆ. ದೆಹಲಿಯಲ್ಲಿ ಗರಿಷ್ಠ ಅಂದರೆ 96.4 ಲಕ್ಷ ಖಾಸಗಿ ವಾಹನಗಳು ನೋಂದಣಿಯಾಗಿದ್ದು, ಪಕ್ಕದ ಫರೀದಾಬಾದ್ ನಲ್ಲಿ ಗರಿಷ್ಠ ಎಂದರೆ 18.6 ಲಕ್ಷ ಸಾರಿಗೆ ಅಥವಾ ವಾಣಿಜ್ಯ ವಾಹನಗಳಿವೆ.

ದೇಶದಲ್ಲಿ ಇರುವ ಒಟ್ಟು ನೋಂದಾಯಿತ ವಾಹನಗಳ ಪೈಕಿ ಶೇಕಡ 34ರಷ್ಟು ವಾಹನಗಳು, ಹತ್ತು ಲಕ್ಷಕ್ಕಿಂತ ಅಧಿಕ ಜನಸಂಖ್ಯೆ ಹೊಂದಿರುವ 55 ನಗರಗಳಲ್ಲಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT