ಪ್ರಹ್ಲಾದ್ ಜೋಶಿ 
ದೇಶ

ವಿಪಕ್ಷಗಳ ನಡವಳಿಕೆ ಶಾಶ್ವತವಾಗಿ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳುವಂತೆ ಮಾಡುತ್ತದೆ: ಪ್ರಧಾನಿ ಹೇಳಿಕೆ ಉಲ್ಲೇಖಿಸಿದ ಪ್ರಹ್ಲಾದ್ ಜೋಶಿ

ಸಂಸತ್ತು ಕಲಾಪ ವೇಳೆ ಪ್ರತಿಪಕ್ಷಗಳ ನಡವಳಿಕೆಯು ಅವರು ಮುಂಬರುವ ವರ್ಷಗಳಲ್ಲಿ ಶಾಶ್ವತವಾಗಿ ವಿರೋಧ ಪಕ್ಷದಲ್ಲಿ ಉಳಿಯಲು ಬಯಸುತ್ತಾರೆ ಎಂಬುದನ್ನು ತೋರಿಸುತ್ತದೆ. ಇಡೀ ಜಗತ್ತು ನಮ್ಮ ಸರ್ಕಾರದ ಮೇಲೆ ನಂಬಿಕೆಯನ್ನು ಹೊಂದಿದೆ.

ನವದೆಹಲಿ: ಸಂಸತ್ತು ಕಲಾಪ ವೇಳೆ ಪ್ರತಿಪಕ್ಷಗಳ ನಡವಳಿಕೆಯು ಅವರು ಮುಂಬರುವ ವರ್ಷಗಳಲ್ಲಿ ಶಾಶ್ವತವಾಗಿ ವಿರೋಧ ಪಕ್ಷದಲ್ಲಿ ಉಳಿಯಲು ಬಯಸುತ್ತಾರೆ ಎಂಬುದನ್ನು ತೋರಿಸುತ್ತದೆ. ಇಡೀ ಜಗತ್ತು ನಮ್ಮ ಸರ್ಕಾರದ ಮೇಲೆ ನಂಬಿಕೆಯನ್ನು ಹೊಂದಿದೆ. ಮೂರನೇ ಅವಧಿಗೆ ಮತ್ತೊಮ್ಮೆ ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವುದರಲ್ಲಿ ಸಂಶಯವಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಹೇಳಿದ್ದಾರೆ ಎಂದು ಸಭೆಯ ಬಳಿಕ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮಾಧ್ಯಮಗಳಿಗೆ ತಿಳಿಸಿದರು.

ಎನ್ ಡಿಎ ಮೈತ್ರಿಕೂಟಕ್ಕೆ 25 ವರ್ಷವಾಗುತ್ತಿದೆ. ಈ ಸಂದರ್ಭದಲ್ಲಿ ಪಕ್ಷದ ದೃಷ್ಟಿಯಿಂದ ಮತ್ತು ದೇಶದ ಹಿತದೃಷ್ಟಿಯಿಂದ ಮುಖ್ಯವಾಗಿದೆ. ಮೈತ್ರಿಕೂಟವನ್ನು ಮತ್ತಷ್ಟು ಮುನ್ನಡೆಸಲು ಹಲವು ಕಾರ್ಯಕ್ರಮಗಳ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಗೆದ್ದು ಭಾರತವನ್ನು ಮತ್ತಷ್ಟು ಪ್ರಬಲ ಆರ್ಥಿಕತೆ ದೇಶವನ್ನಾಗಿ ಪರಿವರ್ತಿಸಲಿದೆ ಎಂದು ಪ್ರಧಾನಿಯವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದರು. 

2019ರ ಮೊದಲ ಅವಧಿಯಲ್ಲಿ ವಿರೋಧ ಪಕ್ಷಗಳು ನಮ್ಮ ವಿರುದ್ಧ ಅವಿಶ್ವಾಸ ಗೊತ್ತುವಳಿಯನ್ನು ತಂದವು, ಆಗ ನಮ್ಮ ಸ್ಥಾನ 282ರಿಂದ 303ಕ್ಕೆ ಏರಿಕೆಯಾಯಿತು. ಈ ಬಾರಿ ಕೂಡ ಅವಿಶ್ವಾಸ ಗೊತ್ತುವಳಿ ತರಲಿ, ನಾವು ಮುಂದಿನ ಲೋಕಸಭೆ ಚುನಾವಣೆಯಲ್ಲಿ 350ಕ್ಕಿಂತ ಹೆಚ್ಚಿನ ಸೀಟು ಗೆಲ್ಲುತ್ತೇವೆ ಎಂಬ ನಂಬಿಕೆ, ವಿಶ್ವಾಸವಿದೆ ಎಂದರು.

ಈ ವರ್ಷ ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಪ್ರತಿ ಮನೆ ತಿರಂಗ(Har Ghar Tirang) ಕಾರ್ಯಕ್ರಮವನ್ನು ಆಯೋಜಿಸಬೇಕು. ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಇದು ನಡೆಯಬೇಕು ಎಂದು ಪ್ರಧಾನಿ ಸೂಚಿಸಿದ್ದಾರೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ