ಪ್ರಹ್ಲಾದ್ ಜೋಶಿ 
ದೇಶ

ವಿಪಕ್ಷಗಳ ನಡವಳಿಕೆ ಶಾಶ್ವತವಾಗಿ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳುವಂತೆ ಮಾಡುತ್ತದೆ: ಪ್ರಧಾನಿ ಹೇಳಿಕೆ ಉಲ್ಲೇಖಿಸಿದ ಪ್ರಹ್ಲಾದ್ ಜೋಶಿ

ಸಂಸತ್ತು ಕಲಾಪ ವೇಳೆ ಪ್ರತಿಪಕ್ಷಗಳ ನಡವಳಿಕೆಯು ಅವರು ಮುಂಬರುವ ವರ್ಷಗಳಲ್ಲಿ ಶಾಶ್ವತವಾಗಿ ವಿರೋಧ ಪಕ್ಷದಲ್ಲಿ ಉಳಿಯಲು ಬಯಸುತ್ತಾರೆ ಎಂಬುದನ್ನು ತೋರಿಸುತ್ತದೆ. ಇಡೀ ಜಗತ್ತು ನಮ್ಮ ಸರ್ಕಾರದ ಮೇಲೆ ನಂಬಿಕೆಯನ್ನು ಹೊಂದಿದೆ.

ನವದೆಹಲಿ: ಸಂಸತ್ತು ಕಲಾಪ ವೇಳೆ ಪ್ರತಿಪಕ್ಷಗಳ ನಡವಳಿಕೆಯು ಅವರು ಮುಂಬರುವ ವರ್ಷಗಳಲ್ಲಿ ಶಾಶ್ವತವಾಗಿ ವಿರೋಧ ಪಕ್ಷದಲ್ಲಿ ಉಳಿಯಲು ಬಯಸುತ್ತಾರೆ ಎಂಬುದನ್ನು ತೋರಿಸುತ್ತದೆ. ಇಡೀ ಜಗತ್ತು ನಮ್ಮ ಸರ್ಕಾರದ ಮೇಲೆ ನಂಬಿಕೆಯನ್ನು ಹೊಂದಿದೆ. ಮೂರನೇ ಅವಧಿಗೆ ಮತ್ತೊಮ್ಮೆ ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವುದರಲ್ಲಿ ಸಂಶಯವಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಹೇಳಿದ್ದಾರೆ ಎಂದು ಸಭೆಯ ಬಳಿಕ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮಾಧ್ಯಮಗಳಿಗೆ ತಿಳಿಸಿದರು.

ಎನ್ ಡಿಎ ಮೈತ್ರಿಕೂಟಕ್ಕೆ 25 ವರ್ಷವಾಗುತ್ತಿದೆ. ಈ ಸಂದರ್ಭದಲ್ಲಿ ಪಕ್ಷದ ದೃಷ್ಟಿಯಿಂದ ಮತ್ತು ದೇಶದ ಹಿತದೃಷ್ಟಿಯಿಂದ ಮುಖ್ಯವಾಗಿದೆ. ಮೈತ್ರಿಕೂಟವನ್ನು ಮತ್ತಷ್ಟು ಮುನ್ನಡೆಸಲು ಹಲವು ಕಾರ್ಯಕ್ರಮಗಳ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಗೆದ್ದು ಭಾರತವನ್ನು ಮತ್ತಷ್ಟು ಪ್ರಬಲ ಆರ್ಥಿಕತೆ ದೇಶವನ್ನಾಗಿ ಪರಿವರ್ತಿಸಲಿದೆ ಎಂದು ಪ್ರಧಾನಿಯವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದರು. 

2019ರ ಮೊದಲ ಅವಧಿಯಲ್ಲಿ ವಿರೋಧ ಪಕ್ಷಗಳು ನಮ್ಮ ವಿರುದ್ಧ ಅವಿಶ್ವಾಸ ಗೊತ್ತುವಳಿಯನ್ನು ತಂದವು, ಆಗ ನಮ್ಮ ಸ್ಥಾನ 282ರಿಂದ 303ಕ್ಕೆ ಏರಿಕೆಯಾಯಿತು. ಈ ಬಾರಿ ಕೂಡ ಅವಿಶ್ವಾಸ ಗೊತ್ತುವಳಿ ತರಲಿ, ನಾವು ಮುಂದಿನ ಲೋಕಸಭೆ ಚುನಾವಣೆಯಲ್ಲಿ 350ಕ್ಕಿಂತ ಹೆಚ್ಚಿನ ಸೀಟು ಗೆಲ್ಲುತ್ತೇವೆ ಎಂಬ ನಂಬಿಕೆ, ವಿಶ್ವಾಸವಿದೆ ಎಂದರು.

ಈ ವರ್ಷ ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಪ್ರತಿ ಮನೆ ತಿರಂಗ(Har Ghar Tirang) ಕಾರ್ಯಕ್ರಮವನ್ನು ಆಯೋಜಿಸಬೇಕು. ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಇದು ನಡೆಯಬೇಕು ಎಂದು ಪ್ರಧಾನಿ ಸೂಚಿಸಿದ್ದಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

SCROLL FOR NEXT