ಲಂಚದ ಹಣ ನುಂಗಿದ ಅಧಿಕಾರಿ 
ದೇಶ

ದಾಳಿ ವೇಳೆ ಸಿಕ್ಕಿಬೀಳುವ ಭಯದಲ್ಲಿ 5 ಸಾವಿರ ರೂ ಲಂಚದ ಹಣವನ್ನೇ ನುಂಗಿ ಹಾಕಿದ ಅಧಿಕಾರಿ!

ಕಂದಾಯ ಇಲಾಖೆಯ ಅಧಿಕಾರಿಯೊಬ್ಬರು ಅಧಿಕಾರಿಗಳ ದಾಳಿ ವೇಳೆ ಸಿಕ್ಕಿ ಬೀಳುವ ಭಯದಲ್ಲಿ ತಾವು ಪಡೆದಿದ್ದ ಲಂಚದ ಹಣವನ್ನೇ ನುಂಗಿ ಹಾಕಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಜಬಲ್ ಪುರ: ಕಂದಾಯ ಇಲಾಖೆಯ ಅಧಿಕಾರಿಯೊಬ್ಬರು ಅಧಿಕಾರಿಗಳ ದಾಳಿ ವೇಳೆ ಸಿಕ್ಕಿ ಬೀಳುವ ಭಯದಲ್ಲಿ ತಾವು ಪಡೆದಿದ್ದ ಲಂಚದ ಹಣವನ್ನೇ ನುಂಗಿ ಹಾಕಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಮಧ್ಯಪ್ರದೇಶದ ಜಬಲ್ ಪುರದ ಕಟ್ನಿಯಲ್ಲಿ ಕಂದಾಯ ಇಲಾಖೆಯ ಅಧಿಕಾರಿಯೊಬ್ಬರು ಲೋಕಾಯುಕ್ತ ವಿಶೇಷ ಪೊಲೀಸ್ ಘಟಕದ (ಎಸ್‌ಪಿಇ) ತಂಡದ ವೇಳೆ ತಾವು ಪಡೆದಿದ್ದ 5 ಸಾವಿರ ರೂ ಲಂಚದ ಹಣವನ್ನು ನುಂಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಧಿಕಾರಿಗಳು ಬೀಸಿದ ಬಲೆಯಲ್ಲಿ ಪಟ್ವಾರಿ ಗಜೇಂದ್ರ ಸಿಂಗ್ ಅವರು ತಮ್ಮ ಖಾಸಗಿ ಕಚೇರಿಯಲ್ಲಿ 5,000 ರೂ ಲಂಚ ಪಡೆದ ಘಟನೆ ಸೋಮವಾರ ನಡೆದಿದೆ ಎಂದು ಎಸ್‌ಪಿಇ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಸಾಹು ತಿಳಿಸಿದ್ದಾರೆ.

"ಬರ್ಖೇಡಾ ಗ್ರಾಮದ ವ್ಯಕ್ತಿಯೊಬ್ಬರು ಗಜೇಂದ್ರ ಸಿಂಗ್ ಲಂಚ ಕೇಳುತ್ತಿದ್ದಾರೆಂದು ಆರೋಪಿಸಿ ನಮಗೆ ದೂರು ನೀಡಿದ್ದರು. ಹಣವನ್ನು ತೆಗೆದುಕೊಂಡ ನಂತರ, ಗಜೇಂದ್ರ ಸಿಂಗ್ ಎಸ್‌ಪಿಇ ತಂಡವನ್ನು ಗುರುತಿಸಿ ಅದನ್ನು ಅಲ್ಲಿಯೇ ಬಾಯಿಗೆ ಹಾಕಿಕೊಂಡು ನುಂಗಿದ್ದಾರೆ. ಬಳಿಕ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರು ಚೆನ್ನಾಗಿದ್ದಾರೆ ಎಂದು ವೈದ್ಯರು ಹೇಳಿದರು," ಎಂದು ಅಧಿಕಾರಿ ಹೇಳಿದರು.

ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT