ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ವಿರೋಧ ಪಕ್ಷದ ಸದಸ್ಯರು ರಾಜ್ಯಸಭೆಯಿಂದ ಸಭಾತ್ಯಾಗ ಮಾಡಿದರು. 
ದೇಶ

ಮಣಿಪುರ ವಿಷಯದ ಚರ್ಚೆಗೆ ಒತ್ತಾಯ: ಸರ್ಕಾರದ ನಿಲುವನ್ನು ವಿರೋಧಿಸಿ ರಾಜ್ಯಸಭೆಯಿಂದ ವಿಪಕ್ಷಗಳ ಸಭಾತ್ಯಾಗ

ಮಣಿಪುರದಲ್ಲಿನ ಗಲಭೆ ಕುರಿತು ಚರ್ಚೆ ನಡೆಸಬೇಕೆಂಬ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿಲುವನ್ನು ವಿರೋಧಿಸಿ ಪ್ರತಿಪಕ್ಷಗಳ ಸದಸ್ಯರು ಬುಧವಾರ ರಾಜ್ಯಸಭೆಯಿಂದ ಹೊರನಡೆದರು.

ನವದೆಹಲಿ: ಮಣಿಪುರದಲ್ಲಿನ ಗಲಭೆ ಕುರಿತು ಚರ್ಚೆ ನಡೆಸಬೇಕೆಂಬ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿಲುವನ್ನು ವಿರೋಧಿಸಿ ಪ್ರತಿಪಕ್ಷಗಳ ಸದಸ್ಯರು ಬುಧವಾರ ರಾಜ್ಯಸಭೆಯಿಂದ ಹೊರನಡೆದರು.

ಊಟದ ಅವಧಿಯ ನಂತರ ಸಂಸತ್ತಿನ ಮೇಲ್ಮನೆಯಲ್ಲಿ ಕಲಾಪ ಆರಂಭವಾದಾಗ, ಉಪ ಸಭಾಪತಿ ಹರಿವಂಶ್ ಅವರು ಮಣಿಪುರ ವಿಷಯದ ಚರ್ಚೆಗೆ ವಿರೋಧ ಪಕ್ಷದ ಸದಸ್ಯರ ಬೇಡಿಕೆಯ ನಡುವೆಯೇ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಅವರನ್ನು ಕರೆದು ಸಂವಿಧಾನ (ಪರಿಶಿಷ್ಟ ಪಂಗಡಗಳು) ಆದೇಶ (ಮೂರನೇ ತಿದ್ದುಪಡಿ) ಮಸೂದೆ, 2022 ಅನ್ನು ಮಂಡಿಸುವಂತೆ ಹೇಳಿದರು.

ನಂತರ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತನಾಡಲು ಅವಕಾಶ ನೀಡಲಾಯಿತು. ಆಗ ಖರ್ಗೆ ತಮ್ಮ ಭಾಷಣದ ಸಮಯದಲ್ಲಿ, ಮೈಕ್ರೊಫೋನ್ ಅನ್ನು ಕಡಿತಗೊಳಿಸದಂತೆ ಅಥವಾ ಆಫ್ ಮಾಡದಂತೆ ಉಪಸಭಾಪತಿಗೆ ತಮಾಷೆಯ ರೀತಿಯಲ್ಲಿ ವಿನಂತಿಸಿದರು.

ಸಂಸತ್ತಿನ ಮುಂಗಾರು ಅಧಿವೇಶನದ ವೇಳೆ ರಾಜ್ಯಸಭೆಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ

ಅಲ್ಲದೆ, ಹರಿವಂಶ್ ಅವರು ಖರ್ಗೆ ಅವರಿಗೆ ನೀವು ಮಾತನಾಡಿದ ನಂತರ ತನ್ನ ಮಾತನ್ನೂ ಕೇಳುವಂತೆ ಕೇಳಿಕೊಂಡರು.

ಪ್ರತಿಪಕ್ಷಗಳು ಮಣಿಪುರ ವಿಷಯದ ಬಗ್ಗೆ ಚರ್ಚೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಈ ಸಂಬಂಧ ಹೇಳಿಕೆ ನೀಡಬೇಕೆಂದು ಬಯಸುತ್ತವೆ. ಇದಕ್ಕಾಗಿಯೇ ವಿಪಕ್ಷಗಳ ಸದಸ್ಯರು ಕಾಯುತ್ತಿದ್ದಾರೆ. ಐದು ದಿನ ಕಳೆದರೂ ಪ್ರಧಾನಿಯವರು ಸದನಕ್ಕೆ ಬಂದಿಲ್ಲ. ಅವರು ತಮ್ಮ ಕಚೇರಿಯಿಂದಲೇ ಕಲಾಪವನ್ನು ವೀಕ್ಷಿಸುತ್ತಿದ್ದಾರೆ ಎಂದು ಖರ್ಗೆ ಹೇಳಿದರು.

ಮಣಿಪುರದ ವಿಚಾರವಾಗಿ ಸದನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಏಕೆ ಹೇಳಿಕೆ ನೀಡುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಪ್ರಶ್ನಿಸಿದರು.

ಇದರ ಪರಿಣಾಮವಾಗಿ, ಇಡೀ ದೇಶವು ತಮ್ಮ ಅಭಿಪ್ರಾಯವನ್ನು ಕೇಳಲು ಸಿದ್ಧರಿದ್ದರೂ ವಿರೋಧ ಪಕ್ಷಗಳು ತಮ್ಮ ಅಭಿಪ್ರಾಯಗಳನ್ನು ಮಂಡಿಸಲು ಸಾಧ್ಯವಾಗುತ್ತಿಲ್ಲ. ಪ್ರತಿಪಕ್ಷಗಳ ಅಭಿಪ್ರಾಯಗಳನ್ನು ಮಂಡಿಸಲು ಸರ್ಕಾರ ಅವಕಾಶ ನೀಡುತ್ತಿಲ್ಲ ಮತ್ತು ಅವರ ಬೇಡಿಕೆಗೆ ಕಿವಿಗೊಡುತ್ತಿಲ್ಲ ಎಂದು ಅವರು ಆರೋಪಿಸಿದರು.

ಸರ್ಕಾರದ ನಿಲುವನ್ನು ವಿರೋಧಿಸಿ ‘ನಾವು ಸಭಾತ್ಯಾಗ ನಡೆಸುತ್ತಿದ್ದೇವೆ' ಎಂದು ಖರ್ಗೆ ಹೇಳಿದರು.

ವಿರೋಧ ಪಕ್ಷದ ಸದಸ್ಯರು ಕಲಾಪದಿಂದ ಹೊರನಡೆಯುವ ಮುನ್ನ ತಮ್ಮ ಮಾತನ್ನ ಕೇಳುವಂತೆ ಹರಿವಂಶ್ ಅವರು ಮನವಿ ಮಾಡಿದರೂ, ಅದು ಪ್ರಯೋಜನವಾಗಲಿಲ್ಲ.

ರಾಜ್ಯಸಭೆಯ ಮುಂಗಾರು ಅಧಿವೇಶನ ಕಳೆದ ವಾರ ಆರಂಭವಾದಾಗಿನಿಂದಲೂ ಮಣಿಪುರ ವಿಷಯವು ಸುಗಮ ಕಲಾಪಕ್ಕೆ ಅಡ್ಡಿಯುಂಟು ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

SCROLL FOR NEXT