ಮಣಿಪುರದಲ್ಲಿ ಹಿಂಸಾಚಾರ 
ದೇಶ

ಮಣಿಪುರಕ್ಕೆ ಭೇಟಿ ನೀಡಲು ವಿರೋಧ ಪಕ್ಷಗಳ INDIA ಒಕ್ಕೂಟದ ಸಂಸದರು ಮುಂದು

ಮೇ 3ರಿಂದ ಜನಾಂಗೀಯ ಹಿಂಸಾಚಾರದಿಂದ ನಲುಗುತ್ತಿರುವ ಈಶಾನ್ಯ ರಾಜ್ಯದ ಪರಿಸ್ಥಿತಿಯ ಪರಿಶೀಲನೆ ನಡೆಸಲು ವಿರೋಧ ಪಕ್ಷಗಳ ಮೈತ್ರಿಕೂಟ INDIAದ ಭಾಗವಾದ ಸಂಸದರು ಜುಲೈ 29 ಮತ್ತು 30 ರಂದು ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ.

ನವದೆಹಲಿ: ಮೇ 3ರಿಂದ ಜನಾಂಗೀಯ ಹಿಂಸಾಚಾರದಿಂದ ನಲುಗುತ್ತಿರುವ ಈಶಾನ್ಯ ರಾಜ್ಯದ ಪರಿಸ್ಥಿತಿಯ ಪರಿಶೀಲನೆ ನಡೆಸಲು ವಿರೋಧ ಪಕ್ಷಗಳ ಮೈತ್ರಿಕೂಟ INDIAದ ಭಾಗವಾದ ಸಂಸದರು ಜುಲೈ 29 ಮತ್ತು 30 ರಂದು ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ.

ಸಂಸತ್ತಿನ 20ಕ್ಕೂ ಹೆಚ್ಚು ವಿರೋಧ ಪಕ್ಷದ ಸದಸ್ಯರ ನಿಯೋಗವು ಈ ವಾರಾಂತ್ಯದಲ್ಲಿ ಮಣಿಪುರಕ್ಕೆ ಭೇಟಿ ನೀಡಲಿದ್ದು, ನೇರವಾಗಿ ರಾಜ್ಯದಲ್ಲಿನ ಪರಿಸ್ಥಿತಿಯ ಅವಲೋಕನ ಮಾಡಲಿದೆ ಎಂದು ಲೋಕಸಭೆಯ ಕಾಂಗ್ರೆಸ್ ವಿಪ್ ಮಾಣಿಕಂ ಟ್ಯಾಗೋರ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಹಿಂಸಾಚಾರ ಪೀಡಿತ ರಾಜ್ಯಕ್ಕೆ ಭೇಟಿ ನೀಡಲು ವಿರೋಧ ಪಕ್ಷದ ನಾಯಕರು ಕೆಲವು ಸಮಯದಿಂದ ಪ್ರಯತ್ನಿಸುತ್ತಿದ್ದರು. ಆದರೆ, ಅಲ್ಲಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅನುಮತಿ ನಿರಾಕರಿಸಲಾಗಿತ್ತು.

ಜುಲೈ 27, 2023, ಗುರುವಾರ, ನವದೆಹಲಿಯಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದಲ್ಲಿ ಸಂಸತ್ ಭವನದ ಸಂಕೀರ್ಣದಲ್ಲಿ
ವಿರೋಧ ಪಕ್ಷದ ಸಂಸದರು ಪ್ರತಿಭಟನೆ ನಡೆಸಿದ ದೃಶ್ಯ. (ಫೋಟೋ | ಪಿಟಿಐ)

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಈ ಹಿಂದೆ ಮಣಿಪುರದ ಕೆಲವು ಸ್ಥಳಗಳಿಗೆ ಭೇಟಿ ನೀಡಿದ್ದರು.

26 ವಿರೋಧ ಪಕ್ಷಗಳ ಮೈತ್ರಿಕೂಟದ INDIAದ ಹಲವಾರು ಸಂಸದರು ಈ ನಿಯೋಗದ ಭಾಗವಾಗಲಿದ್ದಾರೆ.

ವಿರೋಧ ಪಕ್ಷಗಳ ಸದಸ್ಯರು ಸಂಸತ್ತಿನ ಉಭಯ ಸದನಗಳಲ್ಲಿ ಮಣಿಪುರದ ವಿಚಾರವಾಗಿ ಚರ್ಚೆ ನಡೆಸಬೇಕೆಂದು ಒತ್ತಾಯಿಸುತ್ತಿದ್ದಾರೆ ಮತ್ತು ಪ್ರಧಾನಿ ಮೋದಿ ಈ ಬಗ್ಗೆ ಹೇಳಿಕೆ ನೀಡಬೇಕು ಎಂದು ಕೇಳುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT