ಮಮತಾ ಬ್ಯಾನರ್ಜಿ 
ದೇಶ

2024ರ ಚುನಾವಣೆಗೂ ಮುನ್ನ ಬಂಗಾಳದಲ್ಲಿ ಗೊಂದಲ ಸೃಷ್ಟಿಸಲು ಬಿಜೆಪಿ ಮುಂದು: ಸಿಎಂ ಮಮತಾ ಬ್ಯಾನರ್ಜಿ

2024ರ ಲೋಕಸಭೆ ಚುನಾವಣೆಗೆ ಮುನ್ನ ರಾಜ್ಯದ ಮಾನಹಾನಿ ಮಾಡಲು ವಿರೋಧ ಪಕ್ಷ ಬಿಜೆಪಿ ಜನರ ನಡುವೆ ಒಡಕು ಮೂಡಿಸಲು ಗಲಭೆ ಸೃಷ್ಟಿಸಲು ಯೋಜಿಸುತ್ತಿದೆ ಎಂದು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿಧಾನಸಭೆಯಲ್ಲಿ ಆರೋಪಿಸಿದ್ದಾರೆ.

ಕೋಲ್ಕತ್ತಾ: 2024ರ ಲೋಕಸಭೆ ಚುನಾವಣೆಗೆ ಮುನ್ನ ರಾಜ್ಯದ ಮಾನಹಾನಿ ಮಾಡಲು ವಿರೋಧ ಪಕ್ಷ ಬಿಜೆಪಿ ಜನರ ನಡುವೆ ಒಡಕು ಮೂಡಿಸಲು ಗಲಭೆ ಸೃಷ್ಟಿಸಲು ಯೋಜಿಸುತ್ತಿದೆ ಎಂದು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿಧಾನಸಭೆಯಲ್ಲಿ ಆರೋಪಿಸಿದ್ದಾರೆ.

ಪಂಚಾಯತ್ ಚುನಾವಣೆಯ ಹಿಂಸಾಚಾರದ ಕುರಿತು ವಿಧಾನಸಭೆಯಲ್ಲಿ ಬಿಜೆಪಿ ಮಂಡಿಸಿದ ಮುಂದೂಡಿಕೆ ನಿರ್ಣಯದ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಮಮತಾ, ಇತ್ತೀಚೆಗೆ ನವದೆಹಲಿಯಲ್ಲಿ ಪಕ್ಷದ ರಾಜ್ಯ ಘಟಕದ ಉನ್ನತ ನಾಯಕರೊಂದಿಗೆ ನಡೆದ ಸಭೆಯಲ್ಲಿ ಬಿಜೆಪಿ ನಾಯಕತ್ವವು ಇದನ್ನು ಯೋಜಿಸಿದೆ ಎಂದು ನನಗೆ ತಿಳಿದಿದೆ. ತೃಣಮೂಲ ಕಾಂಗ್ರೆಸ್‌ನ ಮತಗಳನ್ನು ವಿಭಜಿಸುವ ಕೆಲವು ಪಕ್ಷಗಳಿಗೆ ಇಲ್ಲಿ ಹಣ ನೀಡಲು ಬಿಜೆಪಿ ಯೋಜಿಸಿದೆ ಎಂದು ಮಮತಾ ಹೇಳಿದ್ದಾರೆ.

ಮಣಿಪುರದಂತೆಯೇ ಇಲ್ಲಿಯೂ ಬಿಜೆಪಿ ಪರಸ್ಪರ ಸಮುದಾಯದ ನಡುವೆ ಜಾತಿ ಹಿಂಸಾಚಾರವನ್ನು ಪ್ರಚೋದಿಸುತ್ತದೆ ಎಂದು ಮಮತಾ ಆರೋಪಿಸಿದ್ದಾರೆ. ಪಂಚಾಯತ್ ಚುನಾವಣೆಯಲ್ಲಿ ಹಿಂಸಾಚಾರವನ್ನು ಹರಡುತ್ತಿದೆ ಎಂಬ ತೃಣಮೂಲ ಕಾಂಗ್ರೆಸ್ ಮೇಲಿನ ಬಿಜೆಪಿ ಆರೋಪಗಳನ್ನು ತಳ್ಳಿಹಾಕಿದ ಮಮತಾ, ಕೆಲವು ಸ್ಥಳಗಳಲ್ಲಿ ಹಿಂಸಾಚಾರವನ್ನು ಹೊರತುಪಡಿಸಿ, ಚುನಾವಣೆ ಶಾಂತಿಯುತವಾಗಿ ನಡೆಯಿತು ಎಂದು ಹೇಳಿದರು.

ಈ ದಿನ ವಿಧಾನಸೌಧದಲ್ಲಿ ಬಿಜೆಪಿ ತಂದಿರುವ ಪ್ರಸ್ತಾವನೆ ಕುರಿತು ಪಂಚರಾಜ್ಯ ಚುನಾವಣೆಯಲ್ಲಿ ನಡೆದ ಹಿಂಸಾಚಾರ ಹಾಗೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಚರ್ಚೆ ನಡೆಸಲಾಯಿತು. 2021ರ ವಿಧಾನಸಭಾ ಚುನಾವಣೆಯ ನಂತರ ಪ್ರಮುಖ ಪ್ರತಿಪಕ್ಷವಾಗಿ ಮಾರ್ಪಟ್ಟಿರುವ ಬಿಜೆಪಿಯ ಮುಂದೂಡಿಕೆ ನಿರ್ಣಯವನ್ನು ಅಂಗೀಕರಿಸುವ ಸಂದರ್ಭದಲ್ಲಿ ಸ್ಪೀಕರ್ ಬಿಮನ್ ಬ್ಯಾನರ್ಜಿ ಅವರು ಚರ್ಚೆಗೆ ಅವಕಾಶ ನೀಡಿದ್ದು ಇದೇ ಮೊದಲು.

ಬಿಜೆಪಿ ಶಾಸಕರು ಸಭಾತ್ಯಾಗ
2021ರ ವಿಧಾನಸಭಾ ಚುನಾವಣೆಯ ವೇಳೆ ನಂದಿಗ್ರಾಮ್‌ನ ಮತ ಎಣಿಕೆ ಕೇಂದ್ರದಲ್ಲಿ ಎರಡು ಗಂಟೆ ವಿದ್ಯುತ್ ಕಡಿತಗೊಳಿಸಿದ್ದನ್ನು ಉಲ್ಲೇಖಿಸಿ ಮಮತಾ ಅವರು ಲೈಟ್‌ಗಳನ್ನು ಆಫ್ ಮಾಡುವ ಮೂಲಕ ನೀವು (ಬಿಜೆಪಿ) ಗೆದ್ದಿದ್ದೀರಿ ಎಂದು ಆರೋಪಿಸಿದರು ಇದರಿಂದ ಕೆರಳಿದ ಪ್ರತಿಪಕ್ಷದ ನಾಯಕ ಸುವೇಂದು ಅಧಿಕಾರಿ ಸೇರಿದಂತೆ ಎಲ್ಲಾ ಬಿಜೆಪಿ ಶಾಸಕರನ್ನು ಸಭಾತ್ಯಾಗ ಮಾಡಿದರು.

ಮುಖ್ಯಮಂತ್ರಿಯವರ ಭಾಷಣವನ್ನು ಬಹಿಷ್ಕರಿಸಿದ ಬಿಜೆಪಿ ಶಾಸಕರು ಕಪ್ಪು ಬಟ್ಟೆ ಬೀಸುತ್ತಾ ಘೋಷಣೆಗಳನ್ನು ಕೂಗುತ್ತಾ ಸದನದಿಂದ ಹೊರನಡೆದರು. ಆದರೂ ಮಮತಾ ಮಾತು ಮುಂದುವರೆಸಿದರು. ಮಮತಾ ಅವರು ನಂದಿಗ್ರಾಮದಿಂದ ಸುವೇಂದು ವಿರುದ್ಧ ತೀವ್ರ ಪೈಪೋಟಿಯಿಂದ ಸೋತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT