ದೇಶ

ವಿಕ್ರಮಸಿಂಘೆ ಭಾರತ ಭೇಟಿ ಬೆನ್ನಲ್ಲೇ ಶ್ರೀಲಂಕಾದಿಂದ 15 ಭಾರತೀಯ ಮೀನುಗಾರರ ಬಿಡುಗಡೆ

Nagaraja AB

ಚೆನ್ನೈ: ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ಭಾರತಕ್ಕೆ ಭೇಟಿ ನೀಡಿದ ಬೆನ್ನಲ್ಲೇ, 15 ತಮಿಳುನಾಡು ಮೀನುಗಾರರನ್ನು ಬಿಡುಗಡೆ ಮಾಡಲಾಗಿದೆ. ಶ್ರೀಲಂಕಾದಿಂದ ಬಿಡುಗಡೆಯಾದ ಭಾರತೀಯ ಮೀನುಗಾರರು ಗುರುವಾರ ಕೊಲಂಬೋದಿಂದ ಚೆನ್ನೈ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. 

ಲಂಕಾಕ್ಕೆ ಸೇರಿದ ಜಲ ಪ್ರದೇಶದಲ್ಲಿ ಭೇಟಿಯಾಡಿದ ಆರೋಪದ ಮೇರೆಗೆ ಈ ಮೀನುಗಾರರನ್ನು ಇತ್ತೀಚೆಗೆ ಬಂಧಿಸಿ ಜೈಲಿನಲ್ಲಿ ಇರಿಸಲಾಗಿತ್ತು. ಇಲ್ಲಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಂತರ ಸಾರಿಗೆ ವ್ಯವಸ್ಥೆ ಮಾಡಲಾಗಿದ್ದು, ಮೀನುಗಾರರನ್ನು ಮನೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ಕಳೆದ ವಾರವಷ್ಟೇ ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿ ದ್ವಿಪಕ್ಷೀಯ ಬಾಂಧವ್ಯ ವೃದ್ಧಿ ಕುರಿತು ಚರ್ಚೆ ನಡೆಸಿದ್ದರು.

SCROLL FOR NEXT