ಮಲ್ಲಿಕಾರ್ಜುನ ಖರ್ಗೆ 
ದೇಶ

ಸಂಸತ್ತಿನಲ್ಲಿ ಮಾತನಾಡದ ಪ್ರಧಾನಿ ರಾಜಸ್ಥಾನದಲ್ಲಿ ರಾಜಕೀಯ ಭಾಷಣ ಮಾಡುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ ಟೀಕೆ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು ಮತ್ತು ಅವರು ಸಂಸತ್ತಿನಲ್ಲಿ ಮಾತನಾಡುವುದಿಲ್ಲ ಬದಲಿಗೆ ರಾಜಸ್ಥಾನದಲ್ಲಿ ರಾಜಕೀಯ ಭಾಷಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು ಮತ್ತು ಅವರು ಸಂಸತ್ತಿನಲ್ಲಿ ಮಾತನಾಡುವುದಿಲ್ಲ ಬದಲಿಗೆ ರಾಜಸ್ಥಾನದಲ್ಲಿ ರಾಜಕೀಯ ಭಾಷಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಜನರು ಈಗ ಜಾಗೃತರಾಗಿದ್ದಾರೆ ಮತ್ತು ಈ ರೀತಿಯ ರಾಜಕೀಯದ ವಿರುದ್ಧ ಹೋರಾಡುತ್ತಾರೆ ಎಂದು ಖರ್ಗೆ ಹೇಳಿದರು.

'ಇಂದು, ಜನರು ಜಾಗೃತರಾಗಿದ್ದಾರೆ ಮತ್ತು ಅವರು ಇಂತಹ ನಡೆ ವಿರುದ್ಧ ಹೋರಾಡುತ್ತಾರೆ. ಇದರರ್ಥ ನೀವು ಪ್ರಜಾಪ್ರಭುತ್ವದ ದೇವಾಲಯವಾದ ಸಂಸತ್ತಿನಲ್ಲಿ ಮಾತನಾಡಲು ಬಯಸುವುದಿಲ್ಲ ಮತ್ತು ಹೊಸ ವೈದ್ಯಕೀಯ ಕಾಲೇಜುಗಳ ಉದ್ಘಾಟನೆ ವೇಳೆ ರಾಜಸ್ಥಾನದಲ್ಲಿ ರಾಜಕೀಯ ಭಾಷಣ ಮಾಡಲು ಬಯಸುತ್ತೀರಿ' ಎಂದು ಅವರು ಹೇಳಿದರು. 

ಸಂಸತ್ತಿನ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ಮಣಿಪುರ ಹಿಂಸಾಚಾರದ ಬಗ್ಗೆ ಸಂಸತ್ತಿನಲ್ಲಿ ಮಾತನಾಡದ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದರು.

ಅಧಿವೇಶನದ ಉಳಿದ ಅವಧಿಗೆ ರಾಜ್ಯಸಭೆಯಿಂದ ಅಮಾನತುಗೊಂಡಿರುವ ಎಎಪಿಯ ಸಂಜಯ್‌ ಸಿಂಗ್‌ರನ್ನು ಭೇಟಿ ಮಾಡಿದ ಮಲ್ಲಿಕಾರ್ಜುನ ಖರ್ಗೆ

ಮೇ 3 ರಿಂದ ಹಿಂಸಾಚಾರವನ್ನು ಕಂಡ ಈಶಾನ್ಯ ರಾಜ್ಯದ ಬಗ್ಗೆ ಸಂಸತ್ತಿನಲ್ಲಿ ಪ್ರಧಾನಿ ಹೇಳಿಕೆ ನೀಡಿಲ್ಲ. ಪ್ರಧಾನಿ ಈ ಬಗ್ಗೆ ಹೇಳಿಕೆ ನೀಡಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸುತ್ತಿವೆ.

ಸಂಸತ್ತಿನಲ್ಲಿ ಪ್ರಧಾನಿ ಮೋದಿಯವರು ಹೇಳಿಕೆ ನೀಡಬೇಕು ಮತ್ತು ನಂತರ ಮಣಿಪುರದ ಬಗ್ಗೆ ಚರ್ಚೆ ನಡೆಯಬೇಕು ಎಂದು ವಿಪಕ್ಷಗಳು ಒತ್ತಾಯಿಸುತ್ತಿದ್ದು, ಸಂಸತ್ತಿನ ಉಭಯ ಸದನಗಳಲ್ಲಿ ಸುಗಮ ಕಲಾಪಕ್ಕೆ ಅಡ್ಡಿಯುಂಟಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ