ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ತರಗತಿಯಲ್ಲಿ ವಿದ್ಯಾರ್ಥಿಗಳ ಮುಂದೆ ನಗ್ನವಾಗಿ ಮಲಗಿದ ಮುಖ್ಯೋಪಾಧ್ಯಾಯನ ಅಮಾನತು!

ಮದ್ಯದ ಅಮಲಿನಲ್ಲಿ ವಿದ್ಯಾರ್ಥಿಗಳ ಮುಂದೆ ನಗ್ನವಾಗಿ ಮಲಗಿಕೊಂಡಿದ್ದ ವಿಶೇಶ್ವರ್‌ಗಂಜ್ ಪ್ರದೇಶದ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನನ್ನು ಅಮಾನತು ಮಾಡಲಾಗಿದೆ.

ಲಖನೌ: ಮದ್ಯದ ಅಮಲಿನಲ್ಲಿ ವಿದ್ಯಾರ್ಥಿಗಳ ಮುಂದೆ ನಗ್ನವಾಗಿ ಮಲಗಿಕೊಂಡಿದ್ದ ವಿಶೇಶ್ವರ್‌ಗಂಜ್ ಪ್ರದೇಶದ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನನ್ನು ಅಮಾನತು ಮಾಡಲಾಗಿದೆ.

ವಿಶೇಶ್ವರ್‌ಗಂಜ್ ಬ್ಲಾಕ್‌ನಲ್ಲಿರುವ ಶಿವಪುರ ಬೈರಾಗಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ದುರ್ಗಾ ಪ್ರಸಾದ್ ಜೈಸ್ವಾಲ್ ಕುಡಿದ ಅಮಲಿನಲ್ಲಿ ಶಾಲೆಯ ತರಗತಿಯಲ್ಲಿ ಬೆತ್ತಲೆಯಾಗಿ ಮಲಗಿರುವುದು ವೀಡಿಯೊದಲ್ಲಿ ಕಾಣಬಹುದು. ಇದರಿಂದ ವಿದ್ಯಾರ್ಥಿಗಳು ಸಾಕಷ್ಟು ಮುಜುಗರ ಎದುರಿಸಬೇಕಾಗಿದೆ.

ವೈರಲ್ ಆಗಿರುವ ವಿಡಿಯೋದ ಸತ್ಯಾಸತ್ಯತೆ ಇನ್ನೂ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೋಪಗೊಂಡ ಪೋಷಕರು ಮತ್ತು ಗ್ರಾಮಸ್ಥರು 'ಜೈಸ್ವಾಲ್ ಆಗಾಗ್ಗೆ ವಿದ್ಯಾರ್ಥಿಗಳ ಮುಂದೆ ಅಶ್ಲೀಲ ಕೃತ್ಯಗಳಲ್ಲಿ ತೊಡಗುತ್ತಾರೆ' ಎಂದು ಆರೋಪಿಸಿದ್ದಾರೆ. ಮುಖ್ಯೋಪಾಧ್ಯಾಯರು ತರಗತಿಯಲ್ಲಿ ತಮ್ಮ ಬಟ್ಟೆಗಳನ್ನು ತೆಗೆದು ವಿಶ್ರಾಂತಿ ಪಡೆಯುತ್ತಾರೆ. ಈ ಚೇಷ್ಟೆಗಳಿಂದ ಮುಜುಗರಕ್ಕೊಳಗಾದ ವಿದ್ಯಾರ್ಥಿನಿಯರು ಶಾಲೆಗೆ ಹೋಗುವುದನ್ನು ನಿಲ್ಲಿಸಿದ್ದಾರೆ ಎಂದು ಹೇಳಿದರು.

ದೂರಿನ ಅನ್ವಯ ಪ್ರಾಥಮಿಕ ಶಿಕ್ಷಣಾಧಿಕಾರಿ (ಬಿಎಸ್‌ಎ) ಶಿಕ್ಷಣಾಧಿಕಾರಿಯಿಂದ ತನಿಖೆಗೆ ಆದೇಶಿಸಿದ್ದಾರೆ. ಬಳಿಕ ಜೈಸ್ವಾಲ್ ಅವರನ್ನು ಅಮಾನತುಗೊಳಿಸಲಾಗಿದೆ.

ಬಿಎಸ್‌ಎ ಅವ್ಯಕ್ತ್ ರಾಮ್ ತಿವಾರಿ, 'ವಿಶೇಶ್ವರಗಂಜ್ ಬ್ಲಾಕ್‌ನ ಪ್ರಾಥಮಿಕ ಶಾಲಾ ಶಿಕ್ಷಕ ಮತ್ತು ಶಿವಪುರ ಬೈರಾಗಿ ಮೂಲ ಶಾಲೆಯ ಮುಖ್ಯೋಪಾಧ್ಯಾಯ ದುರ್ಗಾ ಪ್ರಸಾದ್ ಜೈಸ್ವಾಲ್ ಮದ್ಯದ ಅಮಲಿನಲ್ಲಿ ಶಾಲೆಗೆ ಬರುತ್ತಾರೆ ಎಂದು ನಮಗೆ ದೂರು ಬಂದಿತ್ತು. ಇತ್ತೀಚೆಗೆ ಇದರ ವೀಡಿಯೊ ಕೂಡ ಹೊರಬಿದ್ದಿದೆ. ಆದರೆ, ವೀಡಿಯೋವನ್ನು ಇನ್ನೂ ಪರಿಶೀಲಿಸಲಾಗಿಲ್ಲ. ಜುಲೈ 24ರಂದು ಪ್ರಾಥಮಿಕ ಶಿಕ್ಷಣಾಧಿಕಾರಿ ಅವರನ್ನು ಅಮಾನತುಗೊಳಿಸಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT