ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ತರಗತಿಯಲ್ಲಿ ವಿದ್ಯಾರ್ಥಿಗಳ ಮುಂದೆ ನಗ್ನವಾಗಿ ಮಲಗಿದ ಮುಖ್ಯೋಪಾಧ್ಯಾಯನ ಅಮಾನತು!

ಮದ್ಯದ ಅಮಲಿನಲ್ಲಿ ವಿದ್ಯಾರ್ಥಿಗಳ ಮುಂದೆ ನಗ್ನವಾಗಿ ಮಲಗಿಕೊಂಡಿದ್ದ ವಿಶೇಶ್ವರ್‌ಗಂಜ್ ಪ್ರದೇಶದ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನನ್ನು ಅಮಾನತು ಮಾಡಲಾಗಿದೆ.

ಲಖನೌ: ಮದ್ಯದ ಅಮಲಿನಲ್ಲಿ ವಿದ್ಯಾರ್ಥಿಗಳ ಮುಂದೆ ನಗ್ನವಾಗಿ ಮಲಗಿಕೊಂಡಿದ್ದ ವಿಶೇಶ್ವರ್‌ಗಂಜ್ ಪ್ರದೇಶದ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನನ್ನು ಅಮಾನತು ಮಾಡಲಾಗಿದೆ.

ವಿಶೇಶ್ವರ್‌ಗಂಜ್ ಬ್ಲಾಕ್‌ನಲ್ಲಿರುವ ಶಿವಪುರ ಬೈರಾಗಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ದುರ್ಗಾ ಪ್ರಸಾದ್ ಜೈಸ್ವಾಲ್ ಕುಡಿದ ಅಮಲಿನಲ್ಲಿ ಶಾಲೆಯ ತರಗತಿಯಲ್ಲಿ ಬೆತ್ತಲೆಯಾಗಿ ಮಲಗಿರುವುದು ವೀಡಿಯೊದಲ್ಲಿ ಕಾಣಬಹುದು. ಇದರಿಂದ ವಿದ್ಯಾರ್ಥಿಗಳು ಸಾಕಷ್ಟು ಮುಜುಗರ ಎದುರಿಸಬೇಕಾಗಿದೆ.

ವೈರಲ್ ಆಗಿರುವ ವಿಡಿಯೋದ ಸತ್ಯಾಸತ್ಯತೆ ಇನ್ನೂ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೋಪಗೊಂಡ ಪೋಷಕರು ಮತ್ತು ಗ್ರಾಮಸ್ಥರು 'ಜೈಸ್ವಾಲ್ ಆಗಾಗ್ಗೆ ವಿದ್ಯಾರ್ಥಿಗಳ ಮುಂದೆ ಅಶ್ಲೀಲ ಕೃತ್ಯಗಳಲ್ಲಿ ತೊಡಗುತ್ತಾರೆ' ಎಂದು ಆರೋಪಿಸಿದ್ದಾರೆ. ಮುಖ್ಯೋಪಾಧ್ಯಾಯರು ತರಗತಿಯಲ್ಲಿ ತಮ್ಮ ಬಟ್ಟೆಗಳನ್ನು ತೆಗೆದು ವಿಶ್ರಾಂತಿ ಪಡೆಯುತ್ತಾರೆ. ಈ ಚೇಷ್ಟೆಗಳಿಂದ ಮುಜುಗರಕ್ಕೊಳಗಾದ ವಿದ್ಯಾರ್ಥಿನಿಯರು ಶಾಲೆಗೆ ಹೋಗುವುದನ್ನು ನಿಲ್ಲಿಸಿದ್ದಾರೆ ಎಂದು ಹೇಳಿದರು.

ದೂರಿನ ಅನ್ವಯ ಪ್ರಾಥಮಿಕ ಶಿಕ್ಷಣಾಧಿಕಾರಿ (ಬಿಎಸ್‌ಎ) ಶಿಕ್ಷಣಾಧಿಕಾರಿಯಿಂದ ತನಿಖೆಗೆ ಆದೇಶಿಸಿದ್ದಾರೆ. ಬಳಿಕ ಜೈಸ್ವಾಲ್ ಅವರನ್ನು ಅಮಾನತುಗೊಳಿಸಲಾಗಿದೆ.

ಬಿಎಸ್‌ಎ ಅವ್ಯಕ್ತ್ ರಾಮ್ ತಿವಾರಿ, 'ವಿಶೇಶ್ವರಗಂಜ್ ಬ್ಲಾಕ್‌ನ ಪ್ರಾಥಮಿಕ ಶಾಲಾ ಶಿಕ್ಷಕ ಮತ್ತು ಶಿವಪುರ ಬೈರಾಗಿ ಮೂಲ ಶಾಲೆಯ ಮುಖ್ಯೋಪಾಧ್ಯಾಯ ದುರ್ಗಾ ಪ್ರಸಾದ್ ಜೈಸ್ವಾಲ್ ಮದ್ಯದ ಅಮಲಿನಲ್ಲಿ ಶಾಲೆಗೆ ಬರುತ್ತಾರೆ ಎಂದು ನಮಗೆ ದೂರು ಬಂದಿತ್ತು. ಇತ್ತೀಚೆಗೆ ಇದರ ವೀಡಿಯೊ ಕೂಡ ಹೊರಬಿದ್ದಿದೆ. ಆದರೆ, ವೀಡಿಯೋವನ್ನು ಇನ್ನೂ ಪರಿಶೀಲಿಸಲಾಗಿಲ್ಲ. ಜುಲೈ 24ರಂದು ಪ್ರಾಥಮಿಕ ಶಿಕ್ಷಣಾಧಿಕಾರಿ ಅವರನ್ನು ಅಮಾನತುಗೊಳಿಸಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

SCROLL FOR NEXT