ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ 
ದೇಶ

ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್'ಗೆ ಅನಾರೋಗ್ಯ, ಇಂದು ಯಾವುದೇ ಪ್ರಕರಣ ಕೈಗೆತ್ತಿಕೊಳ್ಳುತ್ತಿಲ್ಲ: ಸುಪ್ರೀಂ ಕೋರ್ಟ್

ಭಾರತದ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್​​ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರು ಇಂದು ಯಾವುದೇ ಪ್ರಕರಣದ ಬಗ್ಗೆ ವಿಚಾರಣೆ ನಡೆಸುವುದಿಲ್ಲ ಎಂದು ಸುಪ್ರೀಂ ಕೋರ್ಟ್​ನಿಂದ ಅಧಿಕೃತ ಪತ್ರವೊಂದನ್ನು ಹೊರಡಿಸಲಾಗಿದೆ.

ನವದೆಹಲಿ: ಭಾರತದ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್​​ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರು ಇಂದು ಯಾವುದೇ ಪ್ರಕರಣದ ಬಗ್ಗೆ ವಿಚಾರಣೆ ನಡೆಸುವುದಿಲ್ಲ ಎಂದು ಸುಪ್ರೀಂ ಕೋರ್ಟ್​ನಿಂದ ಅಧಿಕೃತ ಪತ್ರವೊಂದನ್ನು ಹೊರಡಿಸಲಾಗಿದೆ.

ಈ ಪತ್ರದಲ್ಲಿ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್​​ ಅವರು 28.7.2023ರಂದು ಯಾವುದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುವುದಿಲ್ಲ. ಮುಖ್ಯ ನ್ಯಾಯಮೂರ್ತಿ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠದ ವ್ಯಾಪ್ತಿಗೆ ಬರುವ ಯಾವುದೇ ಪ್ರಕರಣದ ಬಗ್ಗೆ ವಿಚಾರಣೆಯನ್ನು ಕೈಗೆತ್ತಿಕೊಳ್ಳುವುದಿಲ್ಲ. ಇಂದು ನಡೆಯಬೇಕಿದ್ದ ವಿಚಾರಣೆಯನ್ನು ಮುಂದೂಡಲಾಗಿದೆ ಎಂದು ತಿಳಿಸಲಾಗಿದೆ.

ಸುಪ್ರೀಂ ಕೋರ್ಟ್​ನ ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರು, ಏಕಸದಸ್ಯ ಪೀಠದ ವಿಚಾರಣೆಯನ್ನು ಮಾತ್ರ ಕೈಗೆತ್ತಿಕೊಳ್ಳಲಿದ್ದಾರೆ. ಅಂದರೆ 28.07.2023ರಂದು ನ್ಯಾಯಾಲಯದ 10ನೇ ಕೊಠಡಿಯಲ್ಲಿ 11.30ಗೆ ವರ್ಗಾವಣೆ ಅರ್ಜಿಗಳನ್ನು ವಿಚಾರಣೆ ನಡೆಸಲಿದ್ದಾರೆ ಎಂದು ತಿಳಿಸಲಾಗಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್​​ ಅವರು ಇಂದು ಮಣಿಪುರ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದ ಮತ್ತು ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ವೈರಲ್ ವೀಡಿಯೊದ ಪ್ರಕರಣದ ಕುರಿತು ವಿಚಾರಣೆ ನಡೆಸಬೇಕಿತ್ತು.

ಮನಿ ಲಾಂಡರಿಂಗ್ ಪ್ರಕರಣದಲ್ಲಿ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಮತ್ತು ಅವರ ಪತ್ನಿ ರುಜಿರಾ ಅವರ ಮನವಿ, ಇತಹೆ ಹತ್ಯ ಪ್ರಕರಣಗಳ ವಿಚಾರಣೆ ನಡೆಸಬೇಕಿತ್ತು. ಕುಖ್ಯಾತ ನಿಥಾರಿ ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಮೊನೀಂದರ್ ಸಿಂಗ್ ಪಂಧೇರ್ ಅವರ ಮನವಿಯನ್ನು ವಿಚಾರಣೆ ನಡೆಸಬೇಕಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

ಹೊಂದಿಕೊಳ್ಳಲು ಸಾಧ್ಯವಿಲ್ಲ ಎಂದು ಯಾರು ಹೇಳಿದ್ದು?': ಅಮೆರಿಕ ವ್ಯಾಪಾರ ಒಪ್ಪಂದದ ಅನಿಶ್ಚಿತತೆ ನಡುವೆಯೇ ಹೊಸ ಮಾರುಕಟ್ಟೆಗಳತ್ತ ಭಾರತ ಕಣ್ಣು!

SCROLL FOR NEXT