ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ 
ದೇಶ

ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್'ಗೆ ಅನಾರೋಗ್ಯ, ಇಂದು ಯಾವುದೇ ಪ್ರಕರಣ ಕೈಗೆತ್ತಿಕೊಳ್ಳುತ್ತಿಲ್ಲ: ಸುಪ್ರೀಂ ಕೋರ್ಟ್

ಭಾರತದ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್​​ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರು ಇಂದು ಯಾವುದೇ ಪ್ರಕರಣದ ಬಗ್ಗೆ ವಿಚಾರಣೆ ನಡೆಸುವುದಿಲ್ಲ ಎಂದು ಸುಪ್ರೀಂ ಕೋರ್ಟ್​ನಿಂದ ಅಧಿಕೃತ ಪತ್ರವೊಂದನ್ನು ಹೊರಡಿಸಲಾಗಿದೆ.

ನವದೆಹಲಿ: ಭಾರತದ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್​​ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರು ಇಂದು ಯಾವುದೇ ಪ್ರಕರಣದ ಬಗ್ಗೆ ವಿಚಾರಣೆ ನಡೆಸುವುದಿಲ್ಲ ಎಂದು ಸುಪ್ರೀಂ ಕೋರ್ಟ್​ನಿಂದ ಅಧಿಕೃತ ಪತ್ರವೊಂದನ್ನು ಹೊರಡಿಸಲಾಗಿದೆ.

ಈ ಪತ್ರದಲ್ಲಿ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್​​ ಅವರು 28.7.2023ರಂದು ಯಾವುದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುವುದಿಲ್ಲ. ಮುಖ್ಯ ನ್ಯಾಯಮೂರ್ತಿ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠದ ವ್ಯಾಪ್ತಿಗೆ ಬರುವ ಯಾವುದೇ ಪ್ರಕರಣದ ಬಗ್ಗೆ ವಿಚಾರಣೆಯನ್ನು ಕೈಗೆತ್ತಿಕೊಳ್ಳುವುದಿಲ್ಲ. ಇಂದು ನಡೆಯಬೇಕಿದ್ದ ವಿಚಾರಣೆಯನ್ನು ಮುಂದೂಡಲಾಗಿದೆ ಎಂದು ತಿಳಿಸಲಾಗಿದೆ.

ಸುಪ್ರೀಂ ಕೋರ್ಟ್​ನ ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರು, ಏಕಸದಸ್ಯ ಪೀಠದ ವಿಚಾರಣೆಯನ್ನು ಮಾತ್ರ ಕೈಗೆತ್ತಿಕೊಳ್ಳಲಿದ್ದಾರೆ. ಅಂದರೆ 28.07.2023ರಂದು ನ್ಯಾಯಾಲಯದ 10ನೇ ಕೊಠಡಿಯಲ್ಲಿ 11.30ಗೆ ವರ್ಗಾವಣೆ ಅರ್ಜಿಗಳನ್ನು ವಿಚಾರಣೆ ನಡೆಸಲಿದ್ದಾರೆ ಎಂದು ತಿಳಿಸಲಾಗಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್​​ ಅವರು ಇಂದು ಮಣಿಪುರ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದ ಮತ್ತು ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ವೈರಲ್ ವೀಡಿಯೊದ ಪ್ರಕರಣದ ಕುರಿತು ವಿಚಾರಣೆ ನಡೆಸಬೇಕಿತ್ತು.

ಮನಿ ಲಾಂಡರಿಂಗ್ ಪ್ರಕರಣದಲ್ಲಿ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಮತ್ತು ಅವರ ಪತ್ನಿ ರುಜಿರಾ ಅವರ ಮನವಿ, ಇತಹೆ ಹತ್ಯ ಪ್ರಕರಣಗಳ ವಿಚಾರಣೆ ನಡೆಸಬೇಕಿತ್ತು. ಕುಖ್ಯಾತ ನಿಥಾರಿ ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಮೊನೀಂದರ್ ಸಿಂಗ್ ಪಂಧೇರ್ ಅವರ ಮನವಿಯನ್ನು ವಿಚಾರಣೆ ನಡೆಸಬೇಕಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ತೆರೆಯಲು ಇರಾನ್ ಪರದಾಟ: ಜಲಸಂಧಿ ನಿರ್ಬಂಧಿಸಲು ತಾನೇ ನೆಟ್ಟ ಮೈನ್ಸ್ ಹುಡುಕಲು ವಿಫಲ; ಹಾಗಾದ್ರೆ ಮುಂದೇನು?

ಮಾತುಕತೆಗೆ ವ್ಯಾನ್ಸ್ ನೇತೃತ್ವದ ಅಮೆರಿಕಾ ತಂಡ ಇಸ್ಲಾಮಾಬಾದ್ ಗೆ ಆಗಮನ, ಲೆಬನಾನ್ ಕದನ ವಿರಾಮ, ಆಸ್ತಿ ಬಿಡುಗಡೆ ಪ್ರಮುಖ ಅಜೆಂಡಾ-Video

ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಮುಖ ವಿರೂಪಗೊಂಡಿದೆ, ಕಾಲುಗಳಿಗೆ ತೀವ್ರ ಗಾಯವಾಗಿದೆ: ವರದಿ

IPL 2026: RCB ಸೋಲಿಸಿದ RRಗೆ ಬಿಗ್ ಶಾಕ್, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿಬ್ಬಂದಿ, BCCI ಶಿಕ್ಷೆ..! Video

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

SCROLL FOR NEXT