ಸಿ.ಟಿ ರವಿ 
ದೇಶ

ಬಿಜೆಪಿ ರಾಷ್ಟ್ರೀಯ ಮಂಡಳಿ ಪುನರ್‌ ರಚನೆ: ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಗೆ ಕೊಕ್; ರಾಜ್ಯಾಧ್ಯಕ್ಷ ಸ್ಥಾನ ಫಿಕ್ಸ್?

ಲೋಕಸಭೆ ಮತ್ತು ಹಲವು ರಾಜ್ಯಗಳ ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಭಾರತೀಯ ಜನತಾ ಪಕ್ಷವು ಆಡಳಿತಾತ್ಮಕ ಬದಲಾವಣೆ ಮಾಡಿದೆ. ಪಕ್ಷವು ಕೇಂದ್ರ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಕರ್ನಾಟಕದ ಸಿ.ಟಿ ರವಿ ಅವರಿಗೆ ಕೊಕ್ ನೀಡಿದೆ.

ನವದೆಹಲಿ: ಲೋಕಸಭೆ ಮತ್ತು ಹಲವು ರಾಜ್ಯಗಳ ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಭಾರತೀಯ ಜನತಾ ಪಕ್ಷವು ಆಡಳಿತಾತ್ಮಕ ಬದಲಾವಣೆ ಮಾಡಿದೆ. ಪಕ್ಷವು ಕೇಂದ್ರ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಕರ್ನಾಟಕದ ಸಿ.ಟಿ ರವಿ ಅವರಿಗೆ ಕೊಕ್ ನೀಡಿದೆ.

13 ನಾಯಕರನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯನ್ನಾಗಿ ಬಿ.ಎಲ್. ಸಂತೋಷ್ ಅವರನ್ನು ಮುಂದುವರೆಸಲಾಗಿದೆ.

ತೆಲಂಗಾಣದ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಬಂಡಿ ಸಂಜಯ್ ಅವರನ್ನು ಇತ್ತೀಚೆಗೆ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಲಾಗಿತ್ತು.

ಇತರ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳೆಂದರೆ ಅರುಣ್ ಸಿಂಗ್, ಕೈಲಾಶ್ ವಿಜಯ್ ವರ್ಗೀಯ, ದುಷ್ಯಂತ ಕುಮಾರ್ ಗೌತಮ್, ತರುಣ್ ಚುಗ್, ವಿನೋದ್ ತಾವ್ಡೆ, ಸುನಿಲ್ ಬನ್ಸಲ್, ರಾಧಾಮೋಹನ್ ಅಗರ್ವಾಲ್. ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಹುದ್ದೆಯಲ್ಲಿ ಶಿವ ಪ್ರಕಾಶ್ ಅವರನ್ನು ಮುಂದುವರಿಸಲಾಗಿದೆ. ಸಂಘಟನಾ ಕಾರ್ಯದರ್ಶಿಗಳು, ಸಹ ಸಂಘಟನಾ ಕಾರ್ಯದರ್ಶಿಗಳು ಕೊಶಾಧ್ಯಕ್ಷರನ್ನು ನೇಮಕ ಮಾಡಲಾಗಿದೆ.

ಕೇಂದ್ರೀಯ ಪದಾಧಿಕಾರಿ ಹುದ್ದೆಯಿಂದ ರವಿ ಅವರನ್ನು ಕೆಳಗಿಳಿಸಿದ ಹಿಂದೆ ರಾಜ್ಯಾಧ್ಯಕ್ಷ ಹುದ್ದೆ ಕೊಡುವ ಉದ್ದೇಶವಿದೆ ಎನ್ನಲಾಗಿದೆ. ಕಳೆದೆರಡು ತಿಂಗಳಿನಿಂದ ಚರ್ಚೆಯ ವಿಷಯವಾಗಿರುವ ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕ ಹುದ್ದೆ ಸಮಸ್ಯೆ ಸದ್ಯದಲ್ಲೇ ಬಗೆಹರಿಯುವ ಲಕ್ಷಣ ಗೋಚರಿಸುತ್ತಿದೆ. ಸದ್ಯದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಅಧಿಕೃತ ಅವಧಿ ಕಳೆದ ಸಪ್ಟೆಂಬರ್ ಗೆ ಅಂತ್ಯವಾಗಿದೆ. ಆದರೆ ಚುನಾವಣೆಯ ಹಿನ್ನೆಲೆಯಲ್ಲಿ ಅವರನ್ನೇ ಮುಂದುವರಿಸಲಾಗಿತ್ತು.

13 ಉಪಾಧ್ಯಕ್ಷರು, ಒಂಬತ್ತು ಪ್ರಧಾನ ಕಾರ್ಯದರ್ಶಿಗಳು, ಸಂಘಟನೆಯ ಉಸ್ತುವಾರಿ ಬಿ ಎಲ್ ಸಂತೋಷ್ ಸೇರಿದಂತೆ 13 ಕಾರ್ಯದರ್ಶಿಗಳು ಪಟ್ಟಿಯಲ್ಲಿದ್ದಾರೆ. ಬಿಹಾರದ ಲೋಕಸಭಾ ಸಂಸದ, ಮಾಜಿ ಕೇಂದ್ರ ಸಚಿವ ರಾಧಾ ಮೋಹನ್ ಸಿಂಗ್ ಅವರನ್ನು ಪಕ್ಷದ ಉಪಾಧ್ಯಕ್ಷ ಸ್ಥಾನದಿಂದ ಕೈಬಿಡಲಾಗಿದೆ. ಹಿರಿಯ ಕಾಂಗ್ರೆಸ್ ನಾಯಕ ಎಕೆ ಆಂಟನಿ ಅವರ ಪುತ್ರ ಅನಿಲ್ ಆಂಟೋನಿ ಅವರನ್ನು ರಾಷ್ಟ್ರೀಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT