ಶರದ್ ಪವಾರ್ 
ದೇಶ

ಪ್ರಧಾನಿ ಮೋದಿ ಜೊತೆಗೆ ವೇದಿಕೆ ಹಂಚಿಕೊಳ್ಳಲಿರುವ ಶರದ್ ಪವಾರ್: INDIA ನಾಯಕರ ಅಸಮಾಧಾನ

ಆಗಸ್ಟ್ 1 ರಂದು ಪುಣೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಎನ್ ಸಿಪಿ ವರಿಷ್ಠ ಶರದ್ ಪವಾರ್ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಳ್ಳುತ್ತಿರುವುದಕ್ಕೆ ವಿಪಕ್ಷಗಳ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಒಗ್ಗಟ್ಟಾಗಿರುವ ಕಾಂಗ್ರೆಸ್ ನೇತೃತ್ವದ INDIA ಒಕ್ಕೂಟ (ಇಂಡಿಯನ್ ನ್ಯಾಷನಲ್ ಡೆವಲಪ್ ಮೆಂಟ್ ಇನ್ ಕ್ಲೂಸಿವ್ ಅಲಯನ್ಸ್ ) ಆಗಸ್ಟ್ 25 ಮತ್ತು 25 ರಂದು ಮುಂಬೈನಲ್ಲಿ ಮುಂದಿನ ಸಭೆ ನಡೆಸಲು ತೀರ್ಮಾನಿಸಿವೆ. ಆದರೆ, ಆಗಸ್ಟ್ 1 ರಂದು ಪುಣೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಎನ್ ಸಿಪಿ ವರಿಷ್ಠ ಶರದ್ ಪವಾರ್ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಳ್ಳುತ್ತಿರುವುದಕ್ಕೆ ವಿಪಕ್ಷಗಳ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಶುಕ್ರವಾರ ನಡೆದ ಇಂಡಿಯಾ ಒಕ್ಕೂಟದ ನಾಯಕರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮೋದಿಗೆ ಲೋಕಮಾನ್ಯ ತಿಲಕ್ ಪ್ರಶಸ್ತಿ ನೀಡಿ ಗೌರವಿಸುವ ಸಮಾರಂಭಕ್ಕೆ ಪವಾರ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುತ್ತಿರುವ  ಬಗ್ಗೆ ಕೆಲವು ಸದಸ್ಯರು ಕಳವಳ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎನ್‌ಸಿಪಿ ಹಿರಿಯ ನಾಯಕನೊಂದಿಗೆ ಮಾತನಾಡಿ ಸಮಾರಂಭಕ್ಕೆ ಹಾಜರಾಗದಂತೆ ಒತ್ತಾಯಿಸುವಂತೆ ಸಲಹೆ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. 

2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಸಮಾನ ಮನಸ್ಕ ವಿರೋಧ ಪಕ್ಷಗಳು ಒಗ್ಗೂಡುತ್ತಿರುವಾಗ ಇಂಡಿಯಾ ಒಕ್ಕೂಟವನ್ನು ಈಸ್ಟ್ ಇಂಡಿಯಾ ಕಂಪನಿ ಮತ್ತು ಭಯೋತ್ಪಾದಕ ಸಂಘಟನೆ ಇಂಡಿಯನ್ ಮುಜಾಹಿದೀನ್‌ಗೆ ಹೋಲಿಸಿರುವ ಮೋದಿಯವರೊಂದಿಗೆ ಶರದ್ ಪವಾರ್ ವೇದಿಕೆ ಹಂಚಿಕೊಳ್ಳುವುದು  ಜನರಲ್ಲಿ ತಪ್ಪು ಸಂದೇಶ ರವಾನಿಸಲು ಕಾರಣವಾಗುತ್ತದೆ ಎಂದು ವಿಪಕ್ಷಗಳ ನಾಯಕರು ಹೇಳಿರುವುದಾಗಿ ಮೂಲಗಳು ಹೇಳಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT