ಮಣಿಪುರದಲ್ಲಿ ಬೃಹತ್ ಪ್ರತಿಭಟನೆ 
ದೇಶ

ಮಣಿಪುರದಲ್ಲಿ ಬೃಹತ್ ಪ್ರತಿಭಟನೆ: ಎನ್‌ಆರ್‌ಸಿ, ಚಿನ್-ಕುಕಿ ನಾರ್ಕೋ-ಉಗ್ರರ ವಿರುದ್ಧ ಕ್ರಮಕ್ಕೆ ಆಗ್ರಹ

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಶನಿವಾರ ಸಾವಿರಾರು ಜನ ರಾಜಧಾನಿ ಇಂಫಾಲ್‌ನಲ್ಲಿ "ಚಿನ್-ಕುಕಿ ನಾರ್ಕೋ-ಭಯೋತ್ಪಾದಕರ" ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಸಿದರು.

ಗುವಾಹಟಿ: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಶನಿವಾರ ಸಾವಿರಾರು ಜನ ರಾಜಧಾನಿ ಇಂಫಾಲ್‌ನಲ್ಲಿ "ಚಿನ್-ಕುಕಿ ನಾರ್ಕೋ-ಭಯೋತ್ಪಾದಕರ" ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಸಿದರು.

ಮೈಟೈಸ್ ಮತ್ತು ಕುಕಿಗಳ ನಡುವಿನ ಸುಮಾರು ಮೂರು ತಿಂಗಳಿಂದ ನಡೆಯುತ್ತಿರುವ ಜನಾಂಗೀಯ ಸಂಘರ್ಷದಲ್ಲಿ ಡ್ರಗ್ಸ್ ಅನ್ನು ವ್ಯಾಪಕವಾಗಿ ಬಳಸಲಾಗಿದೆ. ಹಿಂಸಾಚಾರದಿಂದ ಸುಮಾರು 150 ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 50,000 ಕ್ಕೂ ಹೆಚ್ಚು ಜನ ನಿರಾಶ್ರಿತರಾಗಿದ್ದಾರೆ.

"ಚಿನ್-ಕುಕಿ ನಾರ್ಕೋ-ಭಯೋತ್ಪಾದನೆ ವಿರುದ್ಧ ಇಂದು ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಾಯಿತು. ಒಂದು ಲಕ್ಷಕ್ಕೂ ಹೆಚ್ಚು ಜನ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಇಂಫಾಲ್‌ನಲ್ಲಿ ನಡೆದ ಅತಿ ದೊಡ್ಡ ಪ್ರತಿಭಟನೆ ಇದಾಗಿದ್ದು, ಇಷ್ಟು ದೊಡ್ಡ ಪ್ರಮಾಣದ ಜನ ಸೇರಿದ್ದನ್ನು ನಾವು ನೋಡಿರಲಿಲ್ಲ ಎಂದು ಅವರು ಹೇಳಿದ್ದಾರೆ.

ಹಿಂಸಾಚಾರದ ಸ್ಫೋಟದ ನಂತರ "ಚಿನ್-ಕುಕಿ ನಾರ್ಕೋ-ಭಯೋತ್ಪಾದನೆ" ವಿರುದ್ಧ ದನಿಯೆತ್ತಿದ ಮಣಿಪುರ ಸಮಗ್ರತೆ ಸಮನ್ವಯ ಸಮಿತಿ(COCOMI) ಈ ಪ್ರತಿಭಟನಾ ರ್ಯಾಲಿಯನ್ನು ಆಯೋಜಿಸಿತ್ತು. 

ಪ್ರತಿಭಟನಾಕಾರರು ಐದು ನಿರ್ಣಯಗಳನ್ನು ಅಂಗೀಕರಿಸಿದ್ದು,  ಪ್ರಸ್ತುತ ಸಂಘರ್ಷವನ್ನು ಕೊನೆಗೊಳಿಸಬೇಕು. ವಿದೇಶಿ "ಚಿನ್-ಕುಕಿ ನಾರ್ಕೋ-ಭಯೋತ್ಪಾದಕರ" "ನಿರ್ಮೂಲನೆ" ಮಾಡಬೇಕು. ಕುಕಿಗಳ ಪ್ರತ್ಯೇಕ ಆಡಳಿತ ಬೇಡಿಕೆಯನ್ನು ತಿರಸ್ಕರಿಸಬೇಕು ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ ಅಥವಾ NRC ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT