ಕೇಂದ್ರ ಸಚಿವ ಅನುರಾಗ್ ಠಾಕೂರ್ 
ದೇಶ

ಇದೆಲ್ಲಾ ನಾಟಕವಷ್ಟೇ: 20 ವಿಪಕ್ಷ ಸಂಸದರ ನಿಯೋಗ ಮಣಿಪುರ ಭೇಟಿ ಕುರಿತು ಬಿಜೆಪಿ ಕಿಡಿ

ಕಳೆದ 3 ತಿಂಗಳಿನಿಂದ ಜನಾಂಗೀಯ ಸಂಘರ್ಷಕ್ಕೆ ತುತ್ತಾಗಿರುವ ಈಶಾನ್ಯ ರಾಜ್ಯ ಮಣಿಪುರಕ್ಕೆ ವಿಪಕ್ಷಗಳ ಹೊಸ ಮೈತ್ರಿ ಕೂಟವಾದ ಇಂಡಿಯಾದ ನಾಯಕರು ಶನಿವಾರ ಭೇಟಿ ನೀಡಿರುವುದರ ವಿರುದ್ಧ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ.

ನವದೆಹಲಿ: ಕಳೆದ 3 ತಿಂಗಳಿನಿಂದ ಜನಾಂಗೀಯ ಸಂಘರ್ಷಕ್ಕೆ ತುತ್ತಾಗಿರುವ ಈಶಾನ್ಯ ರಾಜ್ಯ ಮಣಿಪುರಕ್ಕೆ ವಿಪಕ್ಷಗಳ ಹೊಸ ಮೈತ್ರಿ ಕೂಟವಾದ ಇಂಡಿಯಾದ ನಾಯಕರು ಶನಿವಾರ ಭೇಟಿ ನೀಡಿರುವುದರ ವಿರುದ್ಧ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ.

ವಿಪಕ್ಷ ಸಂಸದರ ಮಣಿಪುರ ಭೇಟಿ ನೀಡಿರುವುದರ ಕುರಿತು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ವಾಗ್ದಾಳಿ ನಡೆಸಿದ್ದಾರೆ. ಇವೆಲ್ಲಾ ಕೇವಲ ನಾಟಕವಷ್ಟೇ ಎಂದು ಹೇಳಿದ್ದಾರೆ.

ರಾಜಸ್ತಾನ, ಪಶ್ಚಿಮ ಬಂಗಾಳದಲ್ಲಿ ಮಹಿಳೆಯರ ವಿರುದ್ಧ ಹೇಯ ಕೃತ್ಯಗಳು ನಡೆದಿದ್ದವು. ಆಗೇಕೆ ಈ ನಾಯಕರು ಆ ರಾಜ್ಯಗಳಿಗೆ ಭೇಟಿ ನೀಡಲಿಲ್ಲ. ವಿಪಕ್ಷಗಳ ಮಣಿಪುರ ಭೇಟಿ ಕೇವಲ ನಾಟಕವಷ್ಟೇ. ವಿಪಕ್ಷಗಳ INDIA ಮೈತ್ರಿಕೂಟ ಮಣಿಪುರದಿಂದ ವಾಪಸ್ಸಾದ ಬಳಿಕ ಅವರನ್ನು ಪಶ್ಚಿಮಬಂಗಾಳಕ್ಕೂ ಕರೆದುಕೊಂಡು ಹೋಗುವಂತೆ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಬಳಿ ಮನವಿ ಮಾಡಿಕೊಳ್ಳುತ್ತಿದ್ದೇನೆ.

ಪಶ್ಚಿಮ ಬಂಗಾಳದಲ್ಲಿ ಮಹಿಳೆಯರ ವಿರುದ್ಧ ನಡೆದ ಕೃತ್ಯಗಳನ್ನು ಅಧೀರ್ ರಂಜನ್ ಚೌಧರಿಯವರು ಸಮರ್ಥಿಸಿಕೊಳ್ಳುತ್ತಾರೆಯೇ? ಈ 20 ಸಂಸದರು ರಾಜಸ್ತಾನ, ಪಶ್ಚಿಮ ಬಂಗಾಳ ರಾಜ್ಯಗಳಿಗೂ ಭೇಟಿ ನೀಡಿ, ವರದಿ ನೀಡುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT