ಸಾಂದರ್ಭಿಕ ಚಿತ್ರ 
ದೇಶ

ಜಾರ್ಖಂಡ್‌: ರಾಷ್ಟ್ರಧ್ವಜ ತಿರುಚಿದ ಆರೋಪದಲ್ಲಿ 18 ಜನರ ವಿರುದ್ಧ ಕೇಸ್ ದಾಖಲು

ಜಾರ್ಖಂಡ್‌ನ ಪಲಾಮು ಜಿಲ್ಲೆಯ ಚೈನ್‌ಪುರ್ ಪೊಲೀಸ್ ಠಾಣೆಯಲ್ಲಿ ಮೊಹರಂ ಮೆರವಣಿಗೆ ವೇಳೆ ರಾಷ್ಟ್ರಧ್ವಜವನ್ನು ತಿರುಚಿದ ಆರೋಪದ ಮೇಲೆ 18 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ...

ರಾಂಚಿ: ಜಾರ್ಖಂಡ್‌ನ ಪಲಾಮು ಜಿಲ್ಲೆಯ ಚೈನ್‌ಪುರ್ ಪೊಲೀಸ್ ಠಾಣೆಯಲ್ಲಿ ಮೊಹರಂ ಮೆರವಣಿಗೆ ವೇಳೆ ರಾಷ್ಟ್ರಧ್ವಜವನ್ನು ತಿರುಚಿದ ಆರೋಪದ ಮೇಲೆ 18 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಸ್ಥಳೀಯರ ಪ್ರಕಾರ, ಕಲ್ಯಾಣಪುರ-ಕಂಕರಿಯಲ್ಲಿ ನಡೆದ ಮೊಹರಂ ಮೆರವಣಿಗೆ ಸಂದರ್ಭದಲ್ಲಿ, "ರಾಷ್ಟ್ರಧ್ವಜ"ವನ್ನು ಪ್ರದರ್ಶಿಸಲಾಯಿತು. ಅದರಲ್ಲಿ ಅಶೋಕ ಚಕ್ರವನ್ನು ಉರ್ದು ಪಠ್ಯದೊಂದಿಗೆ ಕತ್ತಿಯಂತಹ ರೇಖಾಚಿತ್ರದೊಂದಿಗೆ ಬದಲಾಯಿಸಲಾಗಿತ್ತು.

ರಾಷ್ಟ್ರಧ್ವಜ ತಿರುಚಿದ ಚಿತ್ರಗಳು ಮತ್ತು ವೀಡಿಯೊ ತುಣುಕು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ, ಇದನ್ನು ಸ್ಥಳೀಯ ಆಡಳಿತದ ಗಮನಕ್ಕೆ ತರಲಾಗಿದೆ. 

ನಂತರ ಎಫ್‌ಐಆರ್ ದಾಖಲಿಸಿದ ಪೊಲೀಸರು, ವೀಡಿಯೊ ದೃಶ್ಯಗಳ ಆಧಾರದ ಮೇಲೆ ಆರೋಪಿಗಳನ್ನು ಬಂಧನಕ್ಕೆ ತೀವ್ರ ಶೋಧ ನಡೆಸುತ್ತಿದ್ದಾರೆ.

153 (ಎ) (ಬಿ), 120 (ಬಿ) ಮತ್ತು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಐದು ಜನ ಅಪರಿಚಿತರು ಸೇರಿದಂತೆ 18 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಚೈನ್‌ಪುರ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿ ರೂಪೇಶ್ ಕುಮಾರ್ ದುಬೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT