ಲಾಲು ಪ್ರಸಾದ್ ಯಾದವ್ 
ದೇಶ

ಪ್ರಧಾನಿ ಮೋದಿ ಲೋಕಸಭೆ ಚುನಾವಣೆಯಲ್ಲಿ ಸೋತ ನಂತರ ವಿದೇಶದಲ್ಲಿ ಸೆಟಲ್ ಆಗುತ್ತಾರೆ: ಲಾಲು

ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಸೋತ ನಂತರ ವಿದೇಶದಲ್ಲಿ ಆಶ್ರಯ ಪಡೆಯುವ ಬಗ್ಗೆ ಯೋಚಿಸುತ್ತಿದ್ದಾರೆ ಎಂದು ರಾಷ್ಟ್ರೀಯ ಜನತಾ ದಳ(ಆರ್ ಜೆಡಿ) ಅಧ್ಯಕ್ಷ ಲಾಲು ಪ್ರಸಾದ್...

ಪಾಟ್ನಾ: ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಸೋತ ನಂತರ ವಿದೇಶದಲ್ಲಿ ಆಶ್ರಯ ಪಡೆಯುವ ಬಗ್ಗೆ ಯೋಚಿಸುತ್ತಿದ್ದಾರೆ ಎಂದು ರಾಷ್ಟ್ರೀಯ ಜನತಾ ದಳ(ಆರ್ ಜೆಡಿ) ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರು ಭಾನುವಾರ ಹೇಳಿದ್ದಾರೆ.

ಕೆಲವು ದಿನಗಳ ಹಿಂದೆ ಪ್ರಧಾನಿ ಮೋದಿಯವರ “ಕ್ವಿಟ್ ಇಂಡಿಯಾ” ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಕೇಂದ್ರ ಸಚಿವ ಲಾಲು ಪ್ರಸಾದ್ ಅವರು, "ಮೋದಿ ಅವರು ಅಧಿಕಾರ ತ್ಯಜಿಸುವ ಬಗ್ಗೆ ಯೋಚಿಸುತ್ತಿದ್ದಾರೆ... ಅವರು ಹಲವಾರು ದೇಶಗಳಿಗೆ ಭೇಟಿ ನೀಡಲು ಇದೇ ಕಾರಣ. ಅವರು ವಿದೇಶಗಳಲ್ಲಿ ತಮಗೆ ಇಷ್ಟವಾಗುವ  ಪಿಜ್ಜಾ, ಮೊಮೊಸ್ ಮತ್ತು ಚೌ ಮೇನ್ ಅನ್ನು ಆನಂದಿಸಲು ಕೂಲ್ ಆಗಿರುವ ಜಾಗ ಹುಡುಕುತ್ತಿದ್ದಾರೆ ” ಎಂದು ತಿರುಗೇಟು ನೀಡಿದರು.

ಮುಂದಿನ ತಿಂಗಳು ಮುಂಬೈನಲ್ಲಿ ನಡೆಯಲಿರುವ “INDIA” ಸಭೆಯನ್ನು ತಾವು ಎದುರು ನೋಡುತ್ತಿರುವುದಾಗಿ ತಿಳಿಸಿದ ಲಾಲು, “ನಾವು ಒಗ್ಗಟ್ಟನ್ನು ಉಳಿಸಿಕೊಳ್ಳಬೇಕು ಮತ್ತು ಬಿಜೆಪಿಯನ್ನು ಸೋಲಿಸಬೇಕು ಎಂದರು.

ನರೇಂದ್ರ ಮೋದಿಯವರು ಸಂವಿಧಾನವನ್ನು ಬುಡಮೇಲು ಮಾಡಲು ಪ್ರಯತ್ನಿಸುತ್ತಿದ್ದಾರೆ, ಆದರೆ ನಾವು ಅವರ ಪ್ರಯತ್ನವನ್ನು ವಿಫಲಗೊಳಿಸುತ್ತೇವೆ ಎಂದು ಲಾಲು ಪ್ರಸಾದ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ