ಪ್ರಾತಿನಿಧಿಕ ಚಿತ್ರ 
ದೇಶ

ಕರ್ನಾಟಕ, ಆಂಧ್ರ ಪ್ರದೇಶದಲ್ಲಿ ಮಳೆಯಿಂದಾಗಿ ಬೆಳೆ ಹಾನಿ; ತಮಿಳುನಾಡಿನಲ್ಲಿ ಕೆಜಿ ಟೊಮೇಟೊಗೆ 200 ರೂ.!

ತಮಿಳುನಾಡಿನಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಟೊಮೇಟೊ ಬೆಲೆಯಿಂದ ಜನರ ಜೇಬಿಗೆ ನಿರಂತರವಾಗಿ ಕತ್ತರಿ ಬೀಳುತ್ತಿದ್ದು, ಭಾನುವಾರದಂದು ರಾಜ್ಯ ರಾಜಧಾನಿ ಹಾಗೂ ಹಲವು ಪಟ್ಟಣಗಳಲ್ಲಿ ಟೊಮೇಟೊ ಸಗಟು ಬೆಲೆ ಕಿಲೋಗ್ರಾಂಗೆ 200 ರೂ. ಆಗಿತ್ತು.

ಚೆನ್ನೈ: ತಮಿಳುನಾಡಿನಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಟೊಮೇಟೊ ಬೆಲೆಯಿಂದ ಜನರ ಜೇಬಿಗೆ ನಿರಂತರವಾಗಿ ಕತ್ತರಿ ಬೀಳುತ್ತಿದ್ದು, ಭಾನುವಾರದಂದು ರಾಜ್ಯ ರಾಜಧಾನಿ ಹಾಗೂ ಹಲವು ಪಟ್ಟಣಗಳಲ್ಲಿ ಟೊಮೇಟೊ ಸಗಟು ಬೆಲೆ ಕಿಲೋಗ್ರಾಂಗೆ 200 ರೂ. ಆಗಿತ್ತು.

ಚೆನ್ನೈನ ಕೊಯಂಬೆಡು ಸಗಟು ಮಾರುಕಟ್ಟೆಯಲ್ಲಿ ಉತ್ಪನ್ನದ ಕೊರತೆಯು ಟೊಮೇಟೊ ಬೆಲೆ ಏರಿಕೆಗೆ ಕಾರಣವಾಗಿದೆ.

ಪಿ.ವಿ. ಕೊಯಂಬೆಡು ಮಾರುಕಟ್ಟೆಯ ಸಗಟು ತರಕಾರಿ ವ್ಯಾಪಾರಿ ಅಹ್ಮದ್ ಐಎಎನ್‌ಎಸ್‌ನೊಂದಿಗೆ ಮಾತನಾಡುತ್ತಾ, 'ಮಧ್ಯಂತರ ಮಳೆಯಿಂದಾಗಿ ಬೆಳೆ ನಷ್ಟವಾದ ಕಾರಣ ಕರ್ನಾಟಕ ಮತ್ತು ಆಂಧ್ರಪ್ರದೇಶದಿಂದ ಟೊಮೇಟೊ ಆಗಮನದಲ್ಲಿ ಕೊರತೆಯಾಗಿದೆ. ಭಾರಿ ಮಳೆಯಿಂದಾಗಿ ಸಂಪೂರ್ಣ ಬೆಳೆ ನಷ್ಟವಾಗಿದ್ದು, ಟೊಮೇಟೊ ಬರುವಿಕೆಯಲ್ಲಿ ಕೊರತೆ ಉಂಟಾಗಿದೆ. ಇದರಿಂದಾಗಿ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯಾಗಿದೆ' ಎನ್ನುತ್ತಾರೆ.

ಇನ್ನು ಒಂದು ವಾರದಲ್ಲಿ ಕೆಜಿಗೆ 250 ರೂ.ಗೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನುತ್ತಾರೆ ವ್ಯಾಪಾರಿಗಳು.

ಕೊಯಂಬೆಡು ಸಗಟು ವ್ಯಾಪಾರಿಗಳ ಸಂಘದ ಕಾರ್ಯದರ್ಶಿ ಪಿ. ಸುಕುಮಾರನ್ ಮಾತನಾಡಿ, 'ಈ ಮಾರುಕಟ್ಟೆ ಪ್ರಾರಂಭವಾದ ನಂತರ ಇದೇ ಮೊದಲ ಬಾರಿಗೆ ಟೊಮೇಟೊ ಬೆಲೆ ಕೆಜಿಗೆ 200 ರೂ.ಗೆ ತಲುಪಿದೆ' ಎಂದರು. 

'ನಾವು ಜುಲೈ 20ರ ವೇಳೆಗೆ ದರಗಳು ಸ್ಥಿರವಾಗಿರುತ್ತವೆ ಎಂದು ನಿರೀಕ್ಷಿಸಿದ್ದೇವೆ. ಆದರೆ, ಹಠಾತ್ ಮಳೆಯು ಬೆಳೆ ಹಾನಿಗೆ ಕಾರಣವಾಗಿದೆ. ಆಂಧ್ರ ಮತ್ತು ಕರ್ನಾಟಕದಲ್ಲಿ ಬೆಳೆಯಲಾದ ಶೇ 50ಕ್ಕಿಂತ ಹೆಚ್ಚು ಟೊಮೇಟೊಗಳು ಮಳೆಯಿಂದಾಗಿ ನಷ್ಟವಾಗಿವೆ' ಎಂದು ಹೇಳಿದರು.

ಸಗಟು ಮಾರುಕಟ್ಟೆಯಲ್ಲಿ ಟೊಮೇಟೊ ಕೆಜಿಗೆ 200 ರೂ.ಗೆ ಮಾರಾಟವಾಗುತ್ತಿದ್ದರೆ, ಕೆಲವು ಚಿಲ್ಲರೆ ಅಂಗಡಿಗಳಲ್ಲಿ ಟೊಮೇಟೊ ಕೆಜಿಗೆ 185 ರೂ.ಗೆ ಮಾರಾಟವಾಗುತ್ತಿವೆ.

ಚೆನ್ನೈನ ಪಮ್ಮಲ್‌ನಲ್ಲಿ ತರಕಾರಿ ಮಾರಾಟಗಾರ ಕುಪ್ಪುಸಾಮಿ ಮಾತನಾಡಿ, ನಾವು ಟೊಮೇಟೊವನ್ನು ಖರೀದಿಸುವ ದರಕ್ಕಿಂತ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದೇವೆ. ಏಕೆಂದರೆ, ನಾವು ವ್ಯರ್ಥವಾಗುವುದನ್ನು ತಪ್ಪಿಸಲು ಬಯಸುತ್ತೇವೆ ಎಂದು ಹೇಳಿದರು.

ಟೊಮೇಟೊ ಮಾರಾಟದ ಪ್ರಮಾಣವೂ ತೀವ್ರವಾಗಿ ಕಡಿಮೆಯಾಗಿದೆ ಮತ್ತು ಜನರು ಟೊಮೇಟೊಗಳನ್ನು ಖರೀದಿಸದೆ ಇತರ ತರಕಾರಿಗಳತ್ತ ಗಮನ ಹರಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT