ಸಾಂದರ್ಭಿಕ ಚಿತ್ರ 
ದೇಶ

23 ಕೆಜಿ ಗಾಂಜಾ ಸಾಗಿಸುತ್ತಿದ್ದ ಆಂಧ್ರದ ಮಾಜಿ ರಣಜಿ ಆಟಗಾರನ ಬಂಧನ

23 ಕೆಜಿ ಗಾಂಜಾ ಸಾಗಿಸುತ್ತಿದ್ದ ಶ್ರೀಕಾಕುಳಂ ಜಿಲ್ಲೆಯ ಮಾಜಿ ರಣಜಿ ಕ್ರಿಕೆಟಿಗನನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಶ್ರೀಕಾಕುಳಂ: 23 ಕೆಜಿ ಗಾಂಜಾ ಸಾಗಿಸುತ್ತಿದ್ದ ಶ್ರೀಕಾಕುಳಂ ಜಿಲ್ಲೆಯ ಮಾಜಿ ರಣಜಿ ಕ್ರಿಕೆಟಿಗನನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಮಾಜಿ ರಣಜಿ ಕ್ರಿಕೆಟಿಗನನ್ನು ಬುಡುಮೂರು ನಾಗರಾಜು ಎಂದು ಗುರುತಿಸಲಾಗಿದೆ ಎಂದು ಇನ್ಸ್ ಪೆಕ್ಟರ್ ಲಕ್ಷ್ಮಣರಾವ್ ಅವರು ಹೇಳಿದ್ದಾರೆ.

ಖಚಿತ ಮಾಹಿತಿ ಮೇರೆಗೆ ರಾಷ್ಟ್ರೀಯ ಹೆದ್ದಾರಿಯ ವಿಜಯಾದಿತ್ಯ ಪಾರ್ಕ್‌ನಲ್ಲಿ ಸಿಬ್ಬಂದಿಯೊಂದಿಗೆ ಗಸ್ತು ತಿರುಗುತ್ತಿದ್ದಾಗ ಎರಡು ಚೀಲಗಳಲ್ಲಿ ಒಂಬತ್ತು ಪ್ಯಾಕೆಟ್‌ಗಳಲ್ಲಿ 23.475 ಕೆಜಿ ಗಾಂಜಾ ಹೊಂದಿದ್ದ ಆರೋಪಿಯನ್ನು ಬಂಧಿಸಲಾಯಿತು ಎಂದು ಇನ್ಸ್‌ಪೆಕ್ಟರ್ ರಾವ್ ತಿಳಿಸಿದ್ದಾರೆ.

ನಾಗರಾಜು ವಿರುದ್ಧ 25 ವಂಚನೆ ಪ್ರಕರಣಗಳು, ಎರಡು ಅಬಕಾರಿ ಪ್ರಕರಣಗಳು ಮತ್ತು ಎರಡು ಗಾಂಜಾ ಪ್ರಕರಣಗಳು ಇರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ರಾವ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT