ಉದಯನಿಧಿ ಸ್ಟಾಲಿನ್ 
ದೇಶ

ನಿಮ್ಮ ಪುತ್ರ ಎಷ್ಟು ಕ್ರಿಕೆಟ್ ಪಂದ್ಯ ಆಡಿದ್ದಾರೆ, ಎಷ್ಟು ರನ್ ಗಳಿಸಿದ್ದಾರೆ: ಅಮಿತ್ ಶಾ ಕಾಲೆಳೆದ ಉದಯನಿಧಿ ಸ್ಟಾಲಿನ್!

ನಿಮ್ಮ ಮಗ ಬಿಸಿಸಿಐ ಕಾರ್ಯದರ್ಶಿಯಾದದ್ದು ಹೇಗೆ? ಎಷ್ಟು ಕ್ರಿಕೆಟ್ ಪಂದ್ಯಗಳನ್ನು ಆಡಿದ್ದಾರೆ, ಎಷ್ಟು ರನ್ ಗಳಿಸಿದ್ದಾರೆ ಎಂದು ತಮಿಳುನಾಡು ಕ್ರೀಡಾ ಸಚಿವ ಉದಯಾನಿಧಿ ಸ್ಟಾಲಿನ್ ಅವರು ಗೃಹ ಸಚಿವ ಅಮಿತ್ ಷಾ ಅವರನ್ನು ಪ್ರಶ್ನಿಸಿದ್ದಾರೆ.

ಚೆನ್ನೈ: ನಿಮ್ಮ ಮಗ ಬಿಸಿಸಿಐ ಕಾರ್ಯದರ್ಶಿಯಾದದ್ದು ಹೇಗೆ? ಎಷ್ಟು ಕ್ರಿಕೆಟ್ ಪಂದ್ಯಗಳನ್ನು ಆಡಿದ್ದಾರೆ, ಎಷ್ಟು ರನ್ ಗಳಿಸಿದ್ದಾರೆ ಎಂದು ತಮಿಳುನಾಡು ಕ್ರೀಡಾ ಸಚಿವ ಉದಯಾನಿಧಿ ಸ್ಟಾಲಿನ್ ಅವರು ಗೃಹ ಸಚಿವ ಅಮಿತ್ ಷಾ ಅವರನ್ನು ಪ್ರಶ್ನಿಸಿದ್ದಾರೆ.

ಡಿಎಂಕೆಯನ್ನು ರಾಜವಂಶದ ಪಕ್ಷ ಎಂದು ಕರೆದಿದ್ದಕ್ಕಾಗಿ ತಮಿಳುನಾಡು ಕ್ರೀಡಾ ಸಚಿವ ಉದಯಾನಿಧಿ ಸ್ಟಾಲಿನ್ ಅವರು ಗೃಹ ಸಚಿವ ಅಮಿತ್ ಷಾ ಅವರನ್ನು ಟೀಕಿಸಿದ್ದಾರೆ. ಗೃಹ ಸಚಿವರ ಮಗ ಜಯ್ ಶಾ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಕಾರ್ಯದರ್ಶಿಯಾಗಿ (ಬಿಸಿಸಿಐ) ಆಯ್ಕೆ ಆಗಿದ್ದು ಹೇಗೆ ಎಂದು ಪ್ರಶ್ನಿಸಿದ್ದಾರೆ.

ಅಮಿತ್ ಶಾ ಅವರು ಶುಕ್ರವಾರ ರಾಮೇಶ್ವರಂನಲ್ಲಿ ರಾಜ್ಯ ಬಿಜೆಪಿ ಮುಖ್ಯಸ್ಥ ಕೆ.ಅಣ್ಣಾಮಲೈ ಅವರ ಪಾದಾಯಾತ್ರೆಗೆ ಚಾಲನೆ ನೀಡಿ, ವಂಶ ರಾಜಕೀಯದ ಕುರಿತು ಮಾತನಾಡಿದ್ದರು. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹಾಗೂ ಡಿಎಂಕೆ ಮಿತ್ರ ಪಕ್ಷಗಳು ರಾಜವಂಶದ ರಾಜಕಾರಣವನ್ನು ಉತ್ತೇಜಿಸುತ್ತಿವೆ ಎಂದು ಅವರು ಆರೋಪಿಸಿದ್ದರು ಹಾಗೂ ಡಿಎಂಕೆಯನ್ನು ರಾಜವಂಶದ ಪಕ್ಷ ಎಂದು ಕರೆದಿದ್ದರು.

ಚೆನ್ನೈನಲ್ಲಿ ಡಿಎಂಕೆ ಯೂತ್ ವಿಂಗ್ನ ಹೊಸ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಉದಯಾನಿಧಿ, "ಚುನಾವಣೆಯಲ್ಲಿ ಸ್ಪರ್ಧಿಸಿದ ನಂತರ ನಾನು ಶಾಸಕನಾಗಿದ್ದೇನೆ. ಆ ನಂತರ ನನ್ನನ್ನು ಮಂತ್ರಿಯನ್ನಾಗಿ ಮಾಡಲಾಯಿತು'' ಎಂದು ಹೇಳಿದರು.

ನಮ್ಮ ಪಕ್ಷದ ನಾಯಕರು ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಗುರಿಯನ್ನು ಹೊಂದಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ. ಆದರೆ, ನಾನು ಅಮಿತ್ ಶಾರನ್ನು ಕೇಳಲು ಬಯಸುತ್ತೇನೆ, ನಿಮ್ಮ ಮಗ ಬಿಸಿಸಿಐ ಕಾರ್ಯದರ್ಶಿ ಆಗಿದ್ದು ಹೇಗೆ? ಜಯ ಶಾ ಅವರು ಎಷ್ಟು ಕ್ರಿಕೆಟ್ ಪಂದ್ಯಗಳನ್ನು ಆಡಿದ್ದಾರೆ ಹಾಗೂ ಅವರು ಎಷ್ಟು ರನ್ ಗಳಿಸಿದ್ದಾರೆ? ಎಂದು ಉತ್ತರಿಸುವಂತೆ ಉದಯನಿಧಿ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT