ಲಾಲು ಪ್ರಸಾದ್ ಯಾದವ್ 
ದೇಶ

ಉದ್ಯೋಗಕ್ಕಾಗಿ ಭೂಮಿ ಹಗರಣ: ಲಾಲು ಯಾದವ್, ಕುಟುಂಬಕ್ಕೆ ಸೇರಿದ 6 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ

ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ  ಲಾಲೂ ಯಾದವ್ ಹಾಗೂ ಕುಟುಂಬಕ್ಕೆ ಸೇರಿದ 6 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ. 

ಪಾಟ್ನ: ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ  ಲಾಲೂ ಯಾದವ್ ಹಾಗೂ ಕುಟುಂಬಕ್ಕೆ ಸೇರಿದ 6 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ. 

ಲಾಲೂ ಯಾದವ್ ಹಾಗೂ ಅವರ ಕುಟುಂಬಕ್ಕೆ ಸೇರಿದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ ಇದು 3 ನೇ ಬಾರಿಗೆ ವಶಕ್ಕೆ ಪಡೆಯುತ್ತಿದೆ. 

ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಕ್ಕೆ ಪಡೆಯುತ್ತಿದ್ದಾಗ ಲಾಲೂ ಪ್ರಸಾದ್ ಯಾದವ್ ಬ್ಯಾಡ್ಮಿಂಟನ್ ಆಡುತ್ತಿದ್ದರು. ಈಗ ಆ ವೀಡಿಯೋ ವೈರಲ್ ಆಗತೊಡಗಿದೆ.
 
ಜಾರಿ ನಿರ್ದೇಶನಾಲಯದ ದಾಳಿ ಬೆನ್ನಲ್ಲೇ ಬಿಹಾರ ಬಿಜೆಪಿ ಮುಖ್ಯಸ್ಥ ಸಮರ್ಥ್ ಚೌಧರಿ ಪ್ರತಿಕ್ರಿಯೆ ನೀಡಿದ್ದು, ಈಗ ಆರ್ ಜೆಡಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಯು ಈ ಹಿಂದೆ, ಮಾಜಿ ರೈಲ್ವೆ ಸಚಿವರನ್ನು ಕ್ರಿಮಿನಲ್ ಎಂದು ಕರೆದಿತ್ತು ಅಷ್ಟೇ ಅಲ್ಲದೇ ಅವರು ರಾಜಕಾರಣ ಬಿಟ್ಟು ವಿಶ್ರಾಂತಿ ಪಡೆಯಬೇಕೆಂದು ಸಲಹೆ ನೀಡಿತ್ತು ಎಂಬುದನ್ನು ನೆನಪಿಸಿಕೊಂಡಿದ್ದಾರೆ
 
ಇದಕ್ಕೂ ಮುನ್ನ ಪಾಟ್ನಾದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಆರ್ ಜೆಡಿ ನಾಯಕ ಲಾಲು ಪ್ರಸಾದ್ ಯಾದವ್, ತಮ್ಮ ಪಕ್ಷ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಿದ್ಧಾಂತದಲ್ಲಿ ನಂಬಿಕೆ ಹೊಂದಿದೆ. ಲೋಕಸಭಾ ಚುನಾವಣೆಗೆ, ಮುಂಬರುವ ಸಮಯದಲ್ಲಿ, ನಾವು ಮಹಾರಾಷ್ಟ್ರದಲ್ಲಿ ಸಭೆ ನಡೆಸಲಿದ್ದೇವೆ, ಅಲ್ಲಿ ನಾವು ಮುಂದಿನ ಕಾರ್ಯತಂತ್ರವನ್ನು ಅಂತಿಮಗೊಳಿಸುತ್ತೇವೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!