ನುಹ್ ಜಿಲ್ಲೆಯಲ್ಲಿ ಹಿಂಸಾಚಾರ 
ದೇಶ

ಹರಿಯಾಣ: ವಿಎಚ್‌ಪಿ ಮೆರವಣಿಗೆ ಮೇಲೆ ಕಲ್ಲು ತೂರಾಟ; ಇಬ್ಬರು ಹೋಮ್ ಗಾರ್ಡ್‌ ಸಾವು

ಹರ್ಯಾಣದ ನುಹ್ ಜಿಲ್ಲೆಯಲ್ಲಿ ಸೋಮವಾರ ನಡೆದ ವಿಶ್ವ ಹಿಂದೂ ಪರಿಷತ್ತಿನ ಮೆರವಣಿಗೆ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಹೋಮ್ ಗಾರ್ಡ್‌ಗಳು ಸಾವನ್ನಪ್ಪಿದ್ದಾರೆ ಮತ್ತು ಹಲವು ಪೊಲೀಸರು...

ಗುರುಗ್ರಾಮ್/ಚಂಡೀಗಢ: ಹರಿಯಾಣದ ನುಹ್ ಜಿಲ್ಲೆಯಲ್ಲಿ ಸೋಮವಾರ ನಡೆದ ವಿಶ್ವ ಹಿಂದೂ ಪರಿಷತ್ತಿನ ಮೆರವಣಿಗೆ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಹೋಮ್ ಗಾರ್ಡ್‌ಗಳು ಸಾವನ್ನಪ್ಪಿದ್ದಾರೆ ಮತ್ತು ಹಲವು ಪೊಲೀಸರು ಸೇರಿದಂತೆ ಕನಿಷ್ಠ 15 ಮಂದಿ ಗಾಯಗೊಂಡಿದ್ದಾರೆ.

ದುಷ್ಕರ್ಮಿಗಳು ವಿಎಚ್‌ಪಿ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿ, ಕಾರುಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುರುಗ್ರಾಮ್ ಜಿಲ್ಲೆಯ ಸೋಹ್ನಾದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದರಿಂದ 15 ಹೆಚ್ಚುವರಿ ಕೇಂದ್ರೀಯ ಪಡೆಗಳನ್ನು ಹರಿಯಾಣಕ್ಕೆ ಕಳುಹಿಸುತ್ತಿರುವುದಾಗಿ ಕೇಂದ್ರ ಗೃಹ ಸಚಿವಾಲಯವು ಹೇಳಿದೆ.

ಮುಸ್ಲಿಂ ಪ್ರಾಬಲ್ಯದ ನುಹ್‌ನಲ್ಲಿ ಹಿಂಸಾಚಾರದ ಸುದ್ದಿ ಹರಡುತ್ತಿದ್ದಂತೆ, ಸೊಹ್ನಾದಲ್ಲಿ ದುಷ್ಕರ್ಮಿಗಳ ಗುಂಪು, ನಾಲ್ಕು ವಾಹನಗಳು ಮತ್ತು ಅಂಗಡಿಗೆ ಬೆಂಕಿ ಹಚ್ಚಿ ಸುಟ್ಟು ಹಾಕಿವೆ.

ನುಹ್‌ನಲ್ಲಿರುವ ಶಿವ ದೇವಾಲಯದಲ್ಲಿ ಆಶ್ರಯ ಪಡೆದಿದ್ದ ಸುಮಾರು 2,500 ಪುರುಷರು, ಮಹಿಳೆಯರು ಮತ್ತು ಮಕ್ಕಳನ್ನು ಪೊಲೀಸರು ಸುರಕ್ಷಿತವಾಗಿ ಸ್ಥಳಾಂತರಿಸಿದ್ದಾರೆ ಎಂದು ಹರಿಯಾಣ ಗೃಹ ಸಚಿವ ಅನಿಲ್ ವಿಜ್ ಅವರು ಹೇಳಿದ್ದಾರೆ.

ನುಹ್ ಮತ್ತು ಗುರುಗ್ರಾಮ್ ಜಿಲ್ಲೆಗಳಲ್ಲಿ ಜನ ಗುಂಪು ಸೇರುವುದನ್ನು ನಿಷೇಧಿಸುವ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನುಹ್ ಮತ್ತು ಫರಿದಾಬಾದ್‌ನಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಬುಧವಾರದವರೆಗೆ ಸ್ಥಗಿತಗೊಳಿಸಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಫರಿದಾಬಾದ್ ಮತ್ತು ಪಲ್ವಾಲ್ ಜಿಲ್ಲೆಗಳಲ್ಲಿ ಮಂಗಳವಾರ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ