ರೈತ ನಾಯಕ ರಾಕೇಶ್ ಟಿಕಾಯತ್ 
ದೇಶ

ಡಬ್ಲ್ಯೂ‌ಎಫ್ ಐ ಮುಖ್ಯಸ್ಥನ ಬಂಧನಕ್ಕೆ ಜೂನ್ 9 ರವರೆಗೂ ಗಡುವು, ತಪ್ಪಿದರೆ ಆಂದೋಲನ ಆರಂಭ: ರೈತ ನಾಯಕ ಟಿಕಾಯತ್

ದೇಶದ ಅತ್ಯುನ್ನತ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಆರೋಪಕ್ಕೆ ಗುರಿಯಾಗಿರುವ ಡಬ್ಲ್ಯೂಎಫ್ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಜೂನ್ 9ರೊಳಗೆ ಬಂಧಿಸಬೇಕು, ತಪ್ಪಿದ್ದರೆ ದೇಶಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಭಾರತೀಯ ಕಿಸಾನ್ ಯೂನಿಯನ್ ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಕುರುಕ್ಷೇತ್ರ: ದೇಶದ ಅತ್ಯುನ್ನತ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಆರೋಪಕ್ಕೆ ಗುರಿಯಾಗಿರುವ ಡಬ್ಲ್ಯೂಎಫ್ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಜೂನ್ 9ರೊಳಗೆ ಬಂಧಿಸಬೇಕು, ತಪ್ಪಿದ್ದರೆ ದೇಶಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಭಾರತೀಯ ಕಿಸಾನ್ ಯೂನಿಯನ್ ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.  

ಕುಸ್ತಿಪಟುಗಳಿಗೆ ಬೆಂಬಲ ವ್ಯಕ್ತಪಡಿಸಿದ ನಡೆದ ರೈತರ ಪಂಚಾಯತ್ ನಲ್ಲಿ ಪಾಲ್ಗೊಂಡು ಮಾತನಾಡಿದ ಟಿಕಾಯತ್, ನೀಡಲಾಗಿರುವ ಗಡುವಿನಲ್ಲಿ ತಮ್ಮ ಬೇಡಿಕೆ ಈಡೇರಿಸದಿದ್ದಲ್ಲಿ ದೆಹಲಿಯ ಜಂತರ್ ಮಂತರ್ ಗೆ ತೆರಳುವುದಾಗಿ ಹೇಳಿದರು.

ಕುಸ್ತಿಪಟುಗಳ ಬೇಡಿಕೆಯನ್ನು ಸರ್ಕಾರ ಬಗೆಹರಿಸಬೇಕು, ಬ್ರಿಜ್ ಭೂಷಣ್ ಶರಣ್ ಸಿಂಗ್ ನನ್ನು ಬಂಧಿಸಬೇಕು, ತಪ್ಪಿದರೆ ಜೂನ್ 9 ರಂದು ದೆಹಲಿಯ ಜಂತರ್ ಮಂತರ್ ನಲ್ಲಿ ಕುಸ್ತಿಪಟುಗಳೊಂದಿಗೆ ಪ್ರತಿಭಟನೆ ಹಾಗೂ ದೇಶಾದ್ಯಂತ 'ಪಂಚಾಯತ್ ನಡೆಸಲು ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಒಂದು ವೇಳೆ ಜೂನ್ 9 ರಂದು ಜಂತರ್ ಮಂತರ್ ನಲ್ಲಿ ಪ್ರತಿಭಟನೆಗೆ ಅವಕಾಶ ನೀಡದಿದ್ದರೆ ಆಂದೋಲನಾ ಆರಂಭಿಸಲಾಗುವುದು ಎಂದು ಟಿಕಾಯಕ್ ಎಚ್ಚರಿಕೆ ನೀಡಿದರು.

ಗುರುವಾರ ಕುಸ್ತಿಪಟುಗಳಾದ ಸಾಕ್ಷಿಮಲ್ಲಿಕ್, ಬಜರಂಗ್ ಪೂನಿಯಾ, ವಿನೇಶ್ ಫೂಗಾಟ್ ಮತ್ತಿತರರು ಹರಿದ್ವಾರದಲ್ಲಿನ ಗಂಗಾ ನದಿಯಲ್ಲಿ ಪದಕ ಎಸೆಯಲು ತೆರಳುತ್ತಿದ್ದರು. ಆದರೆ, ಇಂತಹ ನಿರ್ಧಾರ ತೆಗೆದುಕೊಳ್ಳದಂತೆ ರೈತ ನಾಯಕರು ಮನವೊಲಿಸಿದ ನಂತರ ಕುಸ್ತಿಪಟುಗಳು ಪದಕಗಳನ್ನು ನದಿಗೆ ಎಸೆಯದೆ ವಾಪಸ್ಸಾಗಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!