ಸಾಂದರ್ಭಿಕ ಚಿತ್ರ 
ದೇಶ

42 ವರ್ಷಗಳ ಹಿಂದೆ 10 ದಲಿತರನ್ನು ಕೊಂದ 90 ವರ್ಷದ ವೃದ್ಧನಿಗೆ ಜೀವಾವಧಿ ಶಿಕ್ಷೆ!

42 ವರ್ಷಗಳ ಹಿಂದೆ 10 ದಲಿತರನ್ನು ಹತ್ಯೆ ಮಾಡಿದ 90 ವರ್ಷದ ವ್ಯಕ್ತಿಯನ್ನು ದೋಷಿ ಎಂದು ಗುರುವಾರ ಘೋಷಿಸಿದ ಫಿರೋಜಾಬಾದ್ ಜಿಲ್ಲಾ ನ್ಯಾಯಾಲಯ, ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಫಿರೋಜಾಬಾದ್: 42 ವರ್ಷಗಳ ಹಿಂದೆ 10 ದಲಿತರನ್ನು ಹತ್ಯೆ ಮಾಡಿದ 90 ವರ್ಷದ ವ್ಯಕ್ತಿಯನ್ನು ದೋಷಿ ಎಂದು ಗುರುವಾರ ಘೋಷಿಸಿದ ಫಿರೋಜಾಬಾದ್ ಜಿಲ್ಲಾ ನ್ಯಾಯಾಲಯ, ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

42 ವರ್ಷಗಳ ಹಿಂದೆ ನಡೆದ ಈ ಹತ್ಯೆಗಳು ದೇಶಾದ್ಯಂತ ತೀವ್ರ ಸಂಚಲನ ಸೃಷ್ಟಿಸಿತ್ತು. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಜಿಲ್ಲಾ ಕೋರ್ಟ್, ಜೀವಂತವಾಗಿರುವ ಏಕೈಕ ಅಪರಾಧಿ ಗಂಗಾ ದಯಾಳ್‌ಗೆ ಜೀವಾವಧಿ ಶಿಕ್ಷೆ ಹಾಗೂ 55,000 ರೂ. ದಂಡ ವಿಧಿಸಿದೆ.

ದಂಡ ಪಾವತಿಸಲು ತಪ್ಪಿದಲ್ಲಿ ಆರೋಪಿ 13 ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ.

1981ರಲ್ಲಿ ಸದುಪುರ ಗ್ರಾಮದಲ್ಲಿ ನಡೆದ ಹಿಂಸಾಚಾರದಲ್ಲಿ 10 ದಲಿತರನ್ನು ನಿರ್ದಯವಾಗಿ ಹತ್ಯೆ ಮಾಡಲಾಗಿತ್ತು. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಹತ್ತು ಮಂದಿಯನ್ನು ಆರೋಪಿಗಳೆಂದು ಗುರುತಿಸಿದ್ದರು. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 ಮತ್ತು 307 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು ಎಂದು ಸರಕಾರಿ ವಕೀಲ ರಾಜೀವ್ ಉಪಾಧ್ಯಾಯ ತಿಳಿಸಿದ್ದಾರೆ.

ಆರಂಭದಲ್ಲಿ, ಮೈನ್‌ಪುರಿಯಲ್ಲಿ ಪ್ರಕರಣದ ವಿಚಾರಣೆ ನಡೆಯಿತು. ನಂತರ, ಫಿರೋಜಾಬಾದ್ ಅನ್ನು ಪ್ರತ್ಯೇಕ ಜಿಲ್ಲೆಯಾಗಿ ಘೋಷಿಸಿದ ನಂತರ ಪ್ರಕರಣವನ್ನು ಫಿರೋಜಾಬಾದ್‌ನ ನ್ಯಾಯಾಲಯಕ್ಕೆ ವರ್ಗಾಯಿಸಲಾಯಿತು ಎಂದು ವಕೀಲ ಉಪಾಧ್ಯಾಯ ಹೇಳಿದ್ದಾರೆ.

''ಹೈಕೋರ್ಟ್ ಆದೇಶದ ಮೇರೆಗೆ ಫಿರೋಜಾಬಾದ್ ಜಿಲ್ಲೆ ರಚನೆಯಾದ ನಂತರ ಪ್ರಕರಣವನ್ನು ಫಿರೋಜಾಬಾದ್‌ಗೆ ವರ್ಗಾಯಿಸಲಾಯಿತು. ಜೀವಂತವಾಗಿರುವ ಏಕೈಕ ಆರೋಪಿ ಗಂಗಾ ಸಹಾಯ್‌ಗೆ ಜೀವಾವಧಿ ಶಿಕ್ಷೆ ಮತ್ತು 55,000 ರೂ. ದಂಡವನ್ನು ವಿಧಿಸಿ ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ ಎಂದು ವಕೀಲರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!