ಪ್ರಧಾನಿ ಮೋದಿ, ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಾಲ್ 
ದೇಶ

ಗಡಿ ವಿವಾದ ಬಗೆಹರಿಸಲು ಪ್ರಧಾನಿ ಮೋದಿ, ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಾಲ್ ಒಪ್ಪಿಗೆ

ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತ ಪ್ರವಾಸದಲ್ಲಿರುವ ನೇಪಾಳ ಪ್ರಧಾನಿ ಪುಷ್ಪಕಮಲ್ ದಹಾಲ್ 'ಪ್ರಚಂಡ' ಅವರು ಗುರುವಾರ ವ್ಯಾಪಕ ಮಾತುಕತೆಯ ನಂತರ ಸ್ನೇಹದಿಂದ ಗಡಿ ವಿವಾದ ಪರಿಹರಿಸಲು ಒಪ್ಪಿಕೊಂಡಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತ ಪ್ರವಾಸದಲ್ಲಿರುವ ನೇಪಾಳ ಪ್ರಧಾನಿ ಪುಷ್ಪಕಮಲ್ ದಹಾಲ್ 'ಪ್ರಚಂಡ' ಅವರು ಗುರುವಾರ ವ್ಯಾಪಕ ಮಾತುಕತೆಯ ನಂತರ ಸ್ನೇಹದಿಂದ ಗಡಿ ವಿವಾದ ಪರಿಹರಿಸಲು ಒಪ್ಪಿಕೊಂಡಿದ್ದಾರೆ.

ಮುಂದಿನ 10 ವರ್ಷಗಳಲ್ಲಿ ಭಾರತದ ವಿದ್ಯುತ್ ಆಮದನ್ನು 10,000 ಮೆಗಾವ್ಯಾಟ್‌ಗೆ ಹೆಚ್ಚಿಸುವುದು ಸೇರಿದಂತೆ ಹಲವು ಪ್ರಮುಖ ಒಪ್ಪಂದಗಳಿಗೆ ಉಭಯ ನಾಯಕರು ಸಹಿ ಹಾಕಿದ್ದಾರೆ.

ಪ್ರಸ್ತುತ, ಭಾರತ ನೇಪಾಳದಿಂದ ಕೇವಲ 450 ಮೆಗಾವ್ಯಾಟ್ ವಿದ್ಯುತ್ ಅನ್ನು ಮಾತ್ರ ಆಮದು ಮಾಡಿಕೊಳ್ಳುತ್ತಿದೆ. ಭಾರತದ ಗ್ರಿಡ್ ಮೂಲಕ ನೇಪಾಳದಿಂದ ಬಾಂಗ್ಲಾದೇಶಕ್ಕೆ ಮೊದಲ ತ್ರಿಪಕ್ಷೀಯ ವಿದ್ಯುತ್ ವ್ಯಾಪಾರಕ್ಕೂ ಉಭಯ ನಾಯಕರು ಒಪ್ಪಿಗೆ ನೀಡುವ ಮೂಲಕ ಪ್ರಾದೇಶಿಕ ಸಹಕಾರವನ್ನು ಬಲಪಡಿಸಿದ್ದಾರೆ.

ದ್ವಿಪಕ್ಷೀಯ ಮಾತುಕತೆಯ ನಂತರ ಮಾತನಾಡಿದ ಪ್ರಚಂಡ ಅವರು, “ಸ್ಥಾಪಿತ ದ್ವಿಪಕ್ಷೀಯ ರಾಜತಾಂತ್ರಿಕ ಕಾರ್ಯವಿಧಾನದ ಮೂಲಕ ಗಡಿ ವಿವಾದವನ್ನು ಪರಿಹರಿಸಲು ನಾನು ಪ್ರಧಾನಿ ಮೋದಿ ಜಿ ಅವರನ್ನು ಒತ್ತಾಯಿಸುತ್ತೇನೆ.... ಭಾರತವು ತಮ್ಮ ನೆರೆಹೊರೆಯ ಮೊದಲ ನೀತಿಯಂತೆ ನೇಪಾಳದ ಪರವಾಗಿ ನಿಂತಿದೆ ಮತ್ತು ನಾವು ಸಹ ಅದನ್ನೇ ಆಶಿಸುತ್ತೇವೆ. ಗಡಿ ಸಮಸ್ಯೆಯನ್ನು ರಾಜತಾಂತ್ರಿಕವಾಗಿ ಪರಿಹರಿಸಲಾಗುವುದು ಎಂದರು.

2020ರಲ್ಲಿ ನೇಪಾಳವು ಉತ್ತರಾಖಂಡದ ಲಿಂಪಿಯಾಧುರಾ, ಕಾಲಾಪಾನಿ ಮತ್ತು ಲಿಪುಲೇಖ್ ಎಂಬ ಮೂರು ಪ್ರದೇಶಗಳನ್ನು ತಮ್ಮ ಭೂಮಿಯ ಭಾಗವಾಗಿ ತೋರಿಸುವ ಹೊಸ ರಾಜಕೀಯ ನಕ್ಷೆಯನ್ನು ಪ್ರಕಟಿಸಿದ ನಂತರ ಉಭಯ ದೇಶಗಳ ನಡುವಿನ ಸಂಬಂಧ ಹದಗೆಟ್ಟಿತು.

ಭಾರತ ಮತ್ತು ನೇಪಾಳದ ನಡುವೆ ಗಡಿಗಳು ಅಡೆತಡೆಗಳಾಗಬಾರದು ಮತ್ತು ಭವಿಷ್ಯದಲ್ಲಿ ಪಾಲುದಾರಿಕೆ ಸೂಪರ್‌ಹಿಟ್ ಆಗಬೇಕು ಎಂದು ಪ್ರಧಾನಿ ಮೋದಿ ಪುನರುಚ್ಚರಿಸಿದರು.

ರೈಲು ಸಂಪರ್ಕ, ವಿದ್ಯುತ್ ಖರೀದಿ ಒಪ್ಪಂದಗಳು, ಜಲವಿದ್ಯುತ್ ಶಕ್ತಿ, ಪೆಟ್ರೋಲಿಯಂ ಮೂಲಸೌಕರ್ಯ, ಗಡಿಯಾಚೆಗಿನ ಪಾವತಿ ವ್ಯವಸ್ಥೆಗಳು ಮತ್ತು ವ್ಯಾಪಾರ ಹಾಗೂ ಹೂಡಿಕೆ ಸುಧಾರಿಸುವ ಹಲವು ಒಪ್ಪಂದಗಳಿಗೆ ಭಾರತ ಹಾಗೂ ನೇಪಾಳ ಸಹಿ ಹಾಕಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!