ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ 
ದೇಶ

ತೆಲಂಗಾಣ ಸಂಸ್ಥಾಪನಾ ದಿನ: ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್'ಗೆ ಆಹ್ವಾನ ನೀಡದ ಸರ್ಕಾರ!

ಪ್ರತ್ಯೇಕ ರಾಜ್ಯವಾಗಿ ಉದಯಿಸಿದ ತೆಲಂಗಾಣ 10ನೇ ವರ್ಷಕ್ಕೆ ಕಾಲಿಟ್ಟಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ನೇತೃತ್ವದ ಸರ್ಕಾರ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಆದರೆ ಈ ಕಾರ್ಯಕ್ರಮಗಳಿಗೆ ರಾಜ್ಯಪಾಲೆ ಡಾ.ತಮಿಳಿಸೈ ಸೌಂದರರಾಜನ್ ಅವರಿಗೆ ಆಹ್ವಾನವನ್ನೇ ನೀಡಿಲ್ಲ ಎಂದು ವರದಿಗಳಿಂದ ತಿಳಿದುಬಂದಿದೆ.

ಹೈದರಾಬಾದ್: ಪ್ರತ್ಯೇಕ ರಾಜ್ಯವಾಗಿ ಉದಯಿಸಿದ ತೆಲಂಗಾಣ 10ನೇ ವರ್ಷಕ್ಕೆ ಕಾಲಿಟ್ಟಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ನೇತೃತ್ವದ ಸರ್ಕಾರ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಆದರೆ ಈ ಕಾರ್ಯಕ್ರಮಗಳಿಗೆ ರಾಜ್ಯಪಾಲೆ ಡಾ.ತಮಿಳಿಸೈ ಸೌಂದರರಾಜನ್ ಅವರಿಗೆ ಆಹ್ವಾನವನ್ನೇ ನೀಡಿಲ್ಲ ಎಂದು ವರದಿಗಳಿಂದ ತಿಳಿದುಬಂದಿದೆ.

1969 ರಿಂದಲೂ ಪ್ರತ್ಯೇಕ ತೆಲಂಗಾಣ ರಾಜ್ಯಕ್ಕಾಗಿ ಅನೇಕ ಹೋರಾಟಗಳು ನಡೆಯುತ್ತಿದ್ದವು. ನಿರಂತರ ಹೋರಾಟದಲ್ಲಿ ಅನೇಕರು ಪ್ರಾಣತೆತ್ತಿದ್ದರು. ಕೊನೆಗೂ ಜೂನ್​ 2, 2014 ರಲ್ಲಿ ಭಾರತದ 29 ನೇ ರಾಜ್ಯವಾಗಿ ತೆಲಂಗಾಣ ಉದಯಿಸಿತು.

2014 ರಲ್ಲಿ ಆಂಧ್ರಪ್ರದೇಶವನ್ನು ರಾಜ್ಯ ಎರಡು ಭಾಗಗಳಾಗಿ ವಿಂಗಡಿಸಲಾಯಿತು. ಈ ವೇಳೆ ತೆಲಂಗಾಣ ಪ್ರತ್ಯೇಕ ರಾಜ್ಯವಾಗಿ ರಚನೆಯಾಯಿತು. ಈ ಹಿನ್ನೆಲೆಯಲ್ಲಿ ಪ್ರತಿ ವರ್ಷ ಜೂನ್ 2 ರಂದು ತೆಲಂಗಾಣ ರಾಜ್ಯ ರಚನೆ ದಿನವಾಗಿ ಆಚರಿಸಲಾಗುತ್ತಿದೆ.

9 ದಶಕಗಳನ್ನು ಪೂರೈಸಿರುವ ರಾಜ್ಯ ಇದೀಗ ಹತ್ತನೇ ವರ್ಷಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಅದ್ಧೂರಿ ದಶಮಾನೋತ್ಸವ ಕಾರ್ಯಕ್ರಮಗಳನ್ನು ಆರಂಭಿಸಲಾಗಿದೆ. ಮೂರು ವಾರಗಳ ಕಾಲ ವಿಶೇಷ ಆಚರಣೆಗೆ ಸರ್ಕಾರ ನಿರ್ಧರಿಸಿದ್ದು, ಇದಕ್ಕಾಗಿ ಅನುದಾನವನ್ನೂ ಬಿಡುಗಡೆ ಮಾಡಿದೆ.

ಇದರ ನಡುವೆ ದಶಮಾನೋತ್ಸವ ದಿನಾಚರಣೆಗೆ ರಾಜ್ಯಪಾಲರಿಗೆ ಆಹ್ವಾನ ನೀಡದಿರುವುದು ಭಾರಿ ಚರ್ಚೆಗೆ ಕಾರಣವಾಗಿದೆ.

ಈ ಮೂಲಕ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರ ನಡುವಿನ ಸಂಘರ್ಷ ಮತ್ತೆ ಮುನ್ನೆಲೆಗೆ ಬಂದಿದೆ. ಈ ಬಗ್ಗೆ ಅಸಮಧಾನಗೊಂಡಿರುವ ಸೌಂದರರಾಜನ್ ಅವರು, ಕೇವಲ ರಾಜ್ಯಪಾಲರ ಭವನದ ಕಾರ್ಯಕ್ರಮಗಳಲ್ಲಿ ಮಾತ್ರ ಭಾಗವಹಿಸಲು ಮುಂದಾಗಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT