ಸಾಂದರ್ಭಿಕ ಚಿತ್ರ 
ದೇಶ

ಗೋಹತ್ಯೆ ಕಾಯ್ದೆ: ಕೇವಲ ಮಾಂಸವನ್ನು ಹೊಂದುವುದು ಅಪರಾಧವಲ್ಲ ಎಂದ ಅಲಹಾಬಾದ್ ಹೈಕೋರ್ಟ್

ಮಾಂಸವನ್ನು ಹೊಂದುವುದು ಅಥವಾ ಸಾಗಿಸುವುದು, ಗೋಮಾಂಸ ಅಥವಾ ಗೋಮಾಂಸ ಉತ್ಪನ್ನಗಳ ಮಾರಾಟ ಅಥವಾ ಸಾಗಣೆಯನ್ನು ಗೋಹತ್ಯೆ ಕಾಯಿದೆಯಡಿಯಲ್ಲಿ ಶಿಕ್ಷಾರ್ಹವೆಂದು ಪರಿಗಣಿಸಲಾಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.

ಲಖನೌ: ಮಾಂಸವನ್ನು ಹೊಂದುವುದು ಅಥವಾ ಸಾಗಿಸುವುದು, ಗೋಮಾಂಸ ಅಥವಾ ಗೋಮಾಂಸ ಉತ್ಪನ್ನಗಳ ಮಾರಾಟ ಅಥವಾ ಸಾಗಣೆಯನ್ನು ಗೋಹತ್ಯೆ ಕಾಯಿದೆಯಡಿಯಲ್ಲಿ ಶಿಕ್ಷಾರ್ಹವೆಂದು ಪರಿಗಣಿಸಲಾಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.

ಪಿಲಿಭಿತ್‌ನ ಪುರನ್‌ಪುರ ಪ್ರದೇಶದ ಇಬ್ರಾನ್ ಅಲಿಯಾಸ್ ಶೇರು ಜಾಮೀನು ಅರ್ಜಿ ಕುರಿತಂತೆ ನ್ಯಾಯಮೂರ್ತಿ ವಿಕ್ರಮ್ ಡಿ ಚೌಹಾಣ್ ಈ ಆದೇಶ ನೀಡಿದ್ದಾರೆ. ಅಲ್ಲದೆ ವಶಪಡಿಸಿಕೊಂಡ ವಸ್ತು ಗೋಮಾಂಸ ಎಂದು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಈತ ಪೇಂಟರ್ ಆಗಿದ್ದು, ದಾಳಿ ನಡೆಸಿದಾಗ ಮನೆಯಲ್ಲಿ ಪೇಂಟಿಂಗ್ ಕೆಲಸ ಮಾಡುತ್ತಿದ್ದ ಎಂದು ಅರ್ಜಿದಾರರ ಪರವಾಗಿ ತಿಳಿಸಲಾಗಿತ್ತು. ಅವರ ಮೇಲಿನ ಆರೋಪಕ್ಕೆ ಬೇರೆ ಯಾವುದೇ ಪುರಾವೆಗಳಿಲ್ಲ. ಈ ಪ್ರಕರಣದಲ್ಲಿ ಆತನನ್ನು ತಪ್ಪಾಗಿ ಸಿಲುಕಿಸಲಾಗಿದೆ. ಗೋಮಾಂಸ ಅಥವಾ ಅದರ ಉತ್ಪನ್ನಗಳು ಅಥವಾ ಅದರ ಸಾಗಣೆಗೆ ಯಾವುದೇ ಸಂಬಂಧವಿಲ್ಲ. ಇದನ್ನು ವಿರೋಧಿಸಿದ ಸರ್ಕಾರಿ ವಕೀಲರು, ಪತ್ತೆಯಾದ ಮಾಂಸವು ಗೋವಂಶಕ್ಕೆ ಸೇರಿದ್ದು, ಅರ್ಜಿದಾರರ ಮನೆಯಿಂದ ವಶಪಡಿಸಿಕೊಳ್ಳಲಾಗಿದೆ. ಹೀಗಾಗಿ ಅವರು ಜಾಮೀನು ಪಡೆಯಲು ಅರ್ಹರಲ್ಲ ಎಂದು ವಾದಿಸಿದ್ದರು.

ಸತ್ಯ ಮತ್ತು ಸಂದರ್ಭಗಳನ್ನು ಗಮನದಲ್ಲಿಟ್ಟುಕೊಂಡು ನ್ಯಾಯಾಲಯವು ಅರ್ಜಿದಾರರನ್ನು ಷರತ್ತುಗಳೊಂದಿಗೆ ಜಾಮೀನಿನ ಮೇಲೆ ಬಿಡುಗಡೆ ಮಾಡಲು ಆದೇಶಿಸಿದೆ. ಗೋಹತ್ಯೆ ಕಾಯ್ದೆಯಡಿ ಪಿಲಿಭಿತ್‌ನ ಪುರನ್‌ಪುರ ಪೊಲೀಸ್ ಠಾಣೆಯಲ್ಲಿ ಅರ್ಜಿದಾರರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಕೆಳ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಇದಾದ ಬಳಿಕ ಅರ್ಜಿದಾರರು ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಇಬ್ರಾನ್ ಜಾಮೀನು ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಅಂಗೀಕರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT