ಕುಸ್ತಿಪಟುಗಳ ಪ್ರತಿಭಟನೆ 
ದೇಶ

ತರಾತುರಿಯಲ್ಲಿ ನಿರ್ಧಾರ ಬೇಡ: ಕಪಿಲ್ ದೇವ್, ಗವಾಸ್ಕರ್ ಸೇರಿದಂತೆ ಹಲವು ಮಾಜಿ ಕ್ರಿಕೆಟಿಗರಿಂದ ಕುಸ್ತಿಪಟುಗಳಿಗೆ ಬೆಂಬಲ!

ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಿಗೆ ಹಲವು ಮಾಜಿ ಕ್ರಿಕೆಟಿಗರು ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. 

ನವದೆಹಲಿ: ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಿಗೆ ಹಲವು ಮಾಜಿ ಕ್ರಿಕೆಟಿಗರು ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. 

1983ರ ವಿಶ್ವಕಪ್ ವಿಜೇತ ತಂಡದ ಆಟಗಾರರಾದ ಸುನಿಲ್ ಗವಾಸ್ಕರ್, ಕಪಿಲ್ ದೇವ್, ದಿಲೀವ್ ವೆಂಗ್‌ಸರ್ಕರ್, ಮದನ್‌ಲಾಲ್ ಮುಂತಾದವರು ಕುಸ್ತಿಪಟುಗಳೊಂದಿಗಿನ ಘಟನೆಯನ್ನು ದುರಂತ ಎಂದು ಬಣ್ಣಿಸಿದ್ದಾರೆ. ಕುಸ್ತಿಪಟುಗಳ ಬೇಡಿಕೆಗೆ ಕಿವಿಯಾಗುವ ನಿರೀಕ್ಷೆ ಇದೆ ಎಂದರು. ತರಾತುರಿಯಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ ಎಂದು ಈ ಆಟಗಾರರು ಕುಸ್ತಿಪಟುಗಳಿಗೆ ಮನವಿ ಮಾಡಿದ್ದಾರೆ. ಇದರೊಂದಿಗೆ ಕಷ್ಟಪಟ್ಟು ಗಳಿಸಿದ ಪದಕಗಳನ್ನು ಗಂಗಾನದಿಯಲ್ಲಿ ಎಸೆಯಬಾರದು ಎಂದೂ ಹೇಳಿದ್ದಾರೆ.

ನಮ್ಮ ಚಾಂಪಿಯನ್ ಕುಸ್ತಿಪಟುಗಳ ಜೊತೆ ಅನುಚಿತವಾಗಿ ವರ್ತಿಸಿರುವುದಕ್ಕೆ ನಾವು ದುಃಖಿತರಾಗಿದ್ದೇವೆ ಮತ್ತು ವಿಚಲಿತರಾಗಿದ್ದೇವೆ. ಅವರು ಕಷ್ಟಪಟ್ಟು ದುಡಿದ ಪದಕವನ್ನು ಎಸೆಯುತ್ತಿದ್ದಾರೆ ಎಂಬ ಅಂಶದ ಬಗ್ಗೆ ನಾವು ಹೆಚ್ಚು ಕಾಳಜಿ ಮಾಡಬೇಕಿದೆ. ಆ ಪದಕಗಳು ವರ್ಷಗಳ ಪ್ರಯತ್ನ, ತ್ಯಾಗ, ಸಂಕಲ್ಪ ಮತ್ತು ಶ್ರದ್ಧೆಗಳನ್ನು ಒಳಗೊಂಡಿವೆ. ಅದು ಅವರ ಸ್ವಂತದ್ದು ಮಾತ್ರವಲ್ಲದೆ ದೇಶದ ಹೆಮ್ಮೆ ಮತ್ತು ಸಂತೋಷವಾಗಿದೆ. ಈ ವಿಷಯದಲ್ಲಿ ಯಾವುದೇ ಆತುರದ ನಿರ್ಧಾರ ತೆಗೆದುಕೊಳ್ಳದಂತೆ ನಾವು ಅವರನ್ನು ಒತ್ತಾಯಿಸುತ್ತೇವೆ. ಅವರ ಕುಂದುಕೊರತೆಗಳನ್ನು ಆಲಿಸಿ ತ್ವರಿತವಾಗಿ ಪರಿಹರಿಸಲಾಗುವುದು ಎಂದು ಭಾವಿಸುತ್ತೇವೆ. ದೇಶದ ಕಾನೂನು ಮೇಲುಗೈ ಸಾಧಿಸಲಿ ಎಂದು ಬರೆದಿದ್ದಾರೆ.

ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಮೇ 30ರಂದು ಹರಿದ್ವಾರಕ್ಕೆ ಹೋಗಿ ಗಂಗಾ ನದಿಗೆ ಎಸೆಯಲು ಮುಂದಾಗಿದ್ದರು. ಆದರೆ ರೈತ ಮುಖಂಡರ ಮನವೊಲಿಕೆಯಿಂದ ಕುಸ್ತಿಪಟುಗಳು ಹಿಂತಿರುಗಿದ್ದರು.

ಸುನಿಲ್ ಗವಾಸ್ಕರ್, ಮೊಹಿದರ್ ಅಮರನಾಥ್, ಕೆ ಶ್ರೀಕಾಂತ್, ಸೈಯದ್ ಕಿರ್ಮಾನಿ, ಯಶಪಾಲ್ ಶರ್ಮಾ, ಮದನ್ ಲಾಲ್, ಬಲ್ವಿಂದರ್ ಸಿಂಗ್ ಸಂಧು, ಸಂದೀಪ್ ಪಾಟೀಲ್, ಕೀರ್ತಿ ಆಜಾದ್, ರೋಜರ್ ಬಿನ್ನಿ ಮತ್ತು ರವಿಶಾಸ್ತ್ರಿ 1983 ರ ವಿಶ್ವಕಪ್ ಗೆದ್ದ ತಂಡದಲ್ಲಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT