ಒಡಿಶಾ ರೈಲು ದುರಂತದ ಫೋಟೋ 
ದೇಶ

ಒಡಿಶಾ ರೈಲು ದುರಂತ: ಎಂಜಿನ್ ಬದಲಾಗಿದ್ದರಿಂದ ನಾವು ಬದುಕಿದ್ದೇವೆ; ನಟ ಪ್ರೀತಮ್ ಬಿಚ್ಚಿಟ್ಟ ದುರಂತದ ಕ್ಷಣ

ಒಡಿಶಾದ ಬಾಲಸೋರ್‌ನಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ಅಪಘಾತದಲ್ಲಿ ಸಿಲುಕಿದ್ದವು.

ಒಡಿಶಾದ ಬಾಲಸೋರ್‌ನಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ಅಪಘಾತದಲ್ಲಿ ಸಿಲುಕಿದ್ದವು. 

ಕರ್ನಾಟಕದ ಅದರಲ್ಲೂ ಚಿಕ್ಕಮಗಳೂರಿನ ಜೈನ ಸಮುದಾಯದವರು ಜಾರ್ಖಂಡ್​​ನಲ್ಲಿರುವ ಶಿಕರ್ಜಿಗೆ ಯಾತ್ರೆ ಹೊರಟಿದ್ದರು. ಇನ್ನು ದುರಂತದಲ್ಲಿ ಅದೃಷ್ಟವಶಾತ್ ಅವರೆಲ್ಲೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. 

ಈ ರೈಲು ದುರಂತದಲ್ಲಿ ಕೂದಲೆಳೆ ಅಂತರದಲ್ಲಿ ಪಾರಾದವರ ಪೈಕಿ ಕಿರುತೆರೆ ಚಿತ್ರನಟ ಪ್ರೀತಮ್ ಮಕ್ಕಿಹಾಳಿ​ ಕೂಡ ಸೇರಿದ್ದಾರೆ. ಮಾಂಗಲ್ಯಂ ತಂತುನಾನೇನ ಎಂಬ ಧಾರಾವಾಹಿಯಲ್ಲಿ ನಟಿಸಿದ್ದ ಪ್ರೀತಮ್ ಅವರ ನೋಡದ ಪುಟಗಳು ಸಿನಿಮಾ ಇತ್ತೀಚೆಗಷ್ಟೇ ತೆರೆ ಕಂಡಿತ್ತು. ಇನ್ನು ರೈಲು ದುರಂತ ಹೇಗೆ ಸಂಭವಿಸಿತು ಎಂದು ಪ್ರೀತಮ್ ಬಿಚ್ಚಿಟ್ಟಿದ್ದಾರೆ.

ಜಾರ್ಖಂಡ್ ನಲ್ಲಿರುವ ಶಿಕರ್ಜಿಗೆ ಜೈನ ಮುನಿಗಳಾದ ಮಹಿಮಾ ಸಾಗರ್ ಅವರು ಯಾತ್ರೆಯನ್ನು ಆಯೋಜಿಸಿದ್ದರು. ನಾನು ಸೇರಿದಂತೆ 110 ಯಾತ್ರಾರ್ಥಿಗಳು ಬೆಂಗಳೂರು-ಹೌರಾ ರೈಲಿನಲ್ಲಿ ಪ್ರಯಾಣ ಬೆಳೆಸಿದ್ದೇವು. ಒಡಿಶಾ ಮೂಲಕ ಕೋಲ್ಕತ್ತಾಗೆ ತೆರಳಿ ಅಲ್ಲಿಂದ ಜಾರ್ಖಂಡ್ ಗೆ ಹೋಗಬೇಕಿತ್ತು. ಆದರೆ ಒಡಿಶಾದಲ್ಲಿ ದುರಂತ ಸಂಭವಿಸಿದೆ. 

ಬೆಂಗಳೂರು-ಹೌರಾ ರೈಲಿನಲ್ಲಿ ಪ್ರೀತಮ್ ಹಾಗೂ ಒಟ್ಟಾರೆ ಯಾತಾರ್ಥಿಗಳಿದ್ದ ಬೋಗಿಗಳು ರೈಲಿನ ಕೊನೆಯ ಮೂರು ಬೋಗಿಗಳಾಗಿದ್ದವು. ಇನ್ನು ವಿಶಾಖಪಟ್ಟಣದಲ್ಲಿ ರೈಲು ನಿಲ್ಲಿಸಿ, ಎಂಜಿನ್ ಬದಲಿಸಲಾಯಿತು. ಈ ವೇಳೆ ನಮ್ಮ ಬೋಗಿಗಳು ರೈಲಿನ ಮುಂಭಾಗಕ್ಕೆ ಬಂದವು. ಹೀಗಾಗಿ ನಾವು ಇಂದು ಸುರಕ್ಷಿತರಾಗಿದ್ದೇವೆ ಎಂದು ಪ್ರೀತಮ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ