ಒಡಿಶಾದಲ್ಲಿ ಭೀಕರ ರೈಲು ಅಪಘಾತ: ಭಾರತೀಯ ರೈಲ್ವೆ ಇತಿಹಾಸದಲ್ಲಿನ ಮಾರಣಾಂತಿಕ ಅಪಘಾತಗಳಲ್ಲೊಂದು.. 
ದೇಶ

ಒಡಿಶಾದಲ್ಲಿ ಭೀಕರ ರೈಲು ಅಪಘಾತ: ಭಾರತೀಯ ರೈಲ್ವೆ ಇತಿಹಾಸದಲ್ಲಿನ ಮಾರಣಾಂತಿಕ ಅಪಘಾತಗಳಲ್ಲೊಂದು..

ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ಒಳಗೊಂಡಂತೆ ಒಡಿಶಾದಲ್ಲಿ ಶುಕ್ರವಾರ ಸಂಭವಿಸಿದ ರೈಲು ಅಪಘಾತದಲ್ಲಿ ಕನಿಷ್ಠ 233 ಜನರು ಸಾವಿಗೀಡಾಗಿದ್ದಾರೆ ಮತ್ತು 900ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಇದು ಸ್ವಾತಂತ್ರ್ಯಾ ನಂತರದ ಅತ್ಯಂತ ಮಾರಣಾಂತಿಕ ಅಪಘಾತಗಳಲ್ಲಿ ಒಂದಾಗಿದೆ ಎಂದು

ನವದೆಹಲಿ: ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ಒಳಗೊಂಡಂತೆ ಒಡಿಶಾದಲ್ಲಿ ಶುಕ್ರವಾರ ಸಂಭವಿಸಿದ ರೈಲು ಅಪಘಾತದಲ್ಲಿ ಕನಿಷ್ಠ 233 ಜನರು ಸಾವಿಗೀಡಾಗಿದ್ದಾರೆ ಮತ್ತು 900ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಇದು ಸ್ವಾತಂತ್ರ್ಯಾ ನಂತರದ ಅತ್ಯಂತ ಮಾರಣಾಂತಿಕ ಅಪಘಾತಗಳಲ್ಲಿ ಒಂದಾಗಿದೆ ಎಂದು ಅಂಕಿಅಂಶಗಳು ತೋರಿಸುತ್ತಿವೆ.

ಭಾರತದ ಇತಿಹಾಸದಲ್ಲಿ ಅತ್ಯಂತ ಭೀಕರ ರೈಲು ಅಪಘಾತಗಳ ನೋಟ ಇಲ್ಲಿದೆ...

* ಜೂನ್ 6, 1981 ರಂದು ಬಿಹಾರದಲ್ಲಿ ಭೀಕರ ರೈಲು ಅಪಘಾತವೊಂದು ಸಂಭವಿಸಿತು. ಸೇತುವೆ ದಾಟುವಾಗ ರೈಲೊಂದು ಬಗ್ಮತಿ ನದಿಗೆ ಬಿದ್ದು 750ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದರು.

* ಆಗಸ್ಟ್ 20, 1995 ರಂದು, ಪುರುಷೋತ್ತಮ್ ಎಕ್ಸ್‌ಪ್ರೆಸ್ ರೈಲು ಫಿರೋಜಾಬಾದ್ ಬಳಿ ನಿಂತಿದ್ದ ಕಾಳಿಂದಿ ಎಕ್ಸ್‌ಪ್ರೆಸ್‌ ರೈಲಿಗೆ ಡಿಕ್ಕಿ ಹೊಡೆದಿತ್ತು. ಇದರ ಅಧಿಕೃತ ಸಾವಿನ ಸಂಖ್ಯೆ ಸುಮಾರು 305 ಆಗಿತ್ತು.

* 26 ನವೆಂಬರ್ 1998 ರಂದು, ಜಮ್ಮು ತಾವಿ-ಸೀಲ್ದಾಹ್ ಎಕ್ಸ್‌ಪ್ರೆಸ್ ಪಂಜಾಬ್‌ನ ಖನ್ನಾದಲ್ಲಿರುವ ಫ್ರಾಂಟಿಯರ್ ಗೋಲ್ಡನ್ ಟೆಂಪಲ್ ಮೇಲ್‌ನ ಮೂರು ಹಳಿತಪ್ಪಿದ ಕೋಚ್‌ಗಳಿಗೆ ಡಿಕ್ಕಿ ಹೊಡೆದು 212 ಜನರು ಸಾವಿಗೀಡಾಗಿದ್ದರು.

* ಆಗಸ್ಟ್ 2, 1999: ಉತ್ತರ ಫ್ರಾಂಟಿಯರ್ ರೈಲ್ವೆಯ ಕತಿಹಾರ್ ವಿಭಾಗದ ಗೈಸಾಲ್ ನಿಲ್ದಾಣದಲ್ಲಿ ಬ್ರಹ್ಮಪುತ್ರ ಮೇಲ್ ರೈಲು ಅವಧ್ ಅಸ್ಸಾಂ ಎಕ್ಸ್‌ಪ್ರೆಸ್‌ಗೆ ಅಪ್ಪಳಿಸಿದಾಗ ಗೈಸಲ್ ರೈಲು ದುರಂತ ಸಂಭವಿಸಿತು. ಈ ವೇಳೆ 285ಕ್ಕೂ ಹೆಚ್ಚು ಜನರು ಸಾವಿಗೀಡಾದರು ಮತ್ತು 300ಕ್ಕೂ ಹೆಚ್ಚು ಜನರು ಗಾಯಗೊಂಡರು. ಬಲಿಯಾದವರಲ್ಲಿ ಹಲವರು ಸೇನೆ, ಬಿಎಸ್‌ಎಫ್ ಅಥವಾ ಸಿಆರ್‌ಪಿಎಫ್ ಸಿಬ್ಬಂದಿಯಾಗಿದ್ದರು.

* ನವೆಂಬರ್ 20, 2016: ಕಾನ್ಪುರದಿಂದ ಸರಿಸುಮಾರು 60 ಕಿಮೀ ದೂರದಲ್ಲಿರುವ ಪುಖ್ರಾಯನ್‌ನಲ್ಲಿ ಇಂದೋರ್-ರಾಜೇಂದ್ರ ನಗರ ಎಕ್ಸ್‌ಪ್ರೆಸ್‌ನ 14 ಕೋಚ್‌ಗಳು ಹಳಿತಪ್ಪಿ 152 ಜನರು ಸಾವಿಗೀಡಾಗಿದ್ದರು ಮತ್ತು 260 ಮಂದಿ ಗಾಯಗೊಂಡರು.

* ಸೆಪ್ಟೆಂಬರ್ 9, 2002: ಹೌರಾ ರಾಜಧಾನಿ ಎಕ್ಸ್‌ಪ್ರೆಸ್ ರಫಿಗಂಜ್‌ನ ಧಾವೆ ನದಿ ಸೇತುವೆ ಮೇಲೆ ಹಳಿತಪ್ಪಿ 140ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದರು. ಘಟನೆಗೆ ಭಯೋತ್ಪಾದಕರ ವಿಧ್ವಂಸಕ ಕೃತ್ಯ ಕಾರಣ ಎನ್ನಲಾಗಿದೆ.

* ಡಿಸೆಂಬರ್ 23, 1964: ಪಂಬನ್-ಧನುಷ್ಕೋಡಿ ಪ್ಯಾಸೆಂಜರ್ ರೈಲು ರಾಮೇಶ್ವರಂ ಸೈಕ್ಲೋನ್‌ನಿಂದ ಕೊಚ್ಚಿಹೋಗಿ ಅದರಲ್ಲಿದ್ದ 126 ಪ್ರಯಾಣಿಕರು ಮೃತಪಟ್ಟರು.

* ಮೇ 28, 2010: ಜ್ಞಾನೇಶ್ವರಿ ಎಕ್ಸ್‌ಪ್ರೆಸ್ ರೈಲು ಹಳಿತಪ್ಪಿ-ಮುಂಬೈಗೆ ಹೊರಟಿದ್ದ ರೈಲು ಜಾರ್‌ಗ್ರಾಮ್ ಬಳಿ ಹಳಿತಪ್ಪಿ ಮತ್ತು ಮುಂದೆ ಬರುತ್ತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು 148 ಪ್ರಯಾಣಿಕರ ಸಾವಿಗೆ ಕಾರಣವಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT