ದೇಶ

ಒಡಿಶಾ ರೈಲು ದುರಂತ: ನೌಕಾಪಡೆಯಿಂದ ವೈದ್ಯಕೀಯ ತಂಡ ನಿಯೋಜನೆ

ಒಡಿಶಾದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ತ್ರಿವಳಿ ರೈಲು ಅಪಘಾತದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಭಾರತೀಯ ನೌಕಾಪಡೆಯು ಬಾಲಸೋರ್ ಜಿಲ್ಲೆಯಲ್ಲಿ ವೈದ್ಯಕೀಯ ತಂಡಗಳನ್ನು ನಿಯೋಜಿಸಿದೆ.

ಬಾಲಾಸೋರ್: ಒಡಿಶಾದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ತ್ರಿವಳಿ ರೈಲು ಅಪಘಾತದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಭಾರತೀಯ ನೌಕಾಪಡೆಯು ಬಾಲಸೋರ್ ಜಿಲ್ಲೆಯಲ್ಲಿ ವೈದ್ಯಕೀಯ ತಂಡಗಳನ್ನು ನಿಯೋಜಿಸಿದೆ. ಗಾಯಾಳುಗಳಿಗೆ ವೈದ್ಯಕೀಯ ನೆರವು ಮತ್ತು ಬೆಂಬಲ ಒದಗಿಸಲು ಭಾರತೀಯ ನೌಕಾಪಡೆ ಒಡಿಶಾದ ರಾಜ್ಯದ ಆಡಳಿತದೊಂದಿಗೆ ನಿಕಟ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುತ್ತಿದೆ ಎಂದು ನೌಕಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ಅಪಘಾತದಲ್ಲಿ ಕನಿಷ್ಠ 288 ಜನರು ಮೃತಪಟ್ಟಿದ್ದು,  803 ಮಂದಿ ಗಾಯಗೊಂಡಿದ್ದಾರೆ. ಇದು ದೇಶದ ಅತ್ಯಂತ ಭೀಕರ ರೈಲು ದುರಂತಗಳಲ್ಲಿ ಒಂದಾಗಿದೆ. ಐಎನ್‌ಎಸ್ ಚಿಲ್ಕಾದಿಂದ ಶಸ್ತ್ರಚಿಕಿತ್ಸಾ ತಜ್ಞರು ಮತ್ತು ವೈದ್ಯಕೀಯ ಸಹಾಯಕರು, ಆಂಬ್ಯುಲೆನ್ಸ್‌ಗಳು ಮತ್ತು ಬೆಂಬಲ ಸೇವೆಗಳು ಸೇರಿದಂತೆ 43 ಸಿಬ್ಬಂದಿಗಳ ವೈದ್ಯಕೀಯ ಮತ್ತು ಬೆಂಬಲ ತಂಡವನ್ನು ಕಳೆದ ರಾತ್ರಿ ಕಳುಹಿಸಲಾಗಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಬಾಲಸೋರ್‌ ನಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿ ತಕ್ಷಣದ ವೈದ್ಯಕೀಯ ಪರಿಹಾರ ಮತ್ತು ಆಪರೇಷನ್ ಥಿಯೇಟರ್ ಸೌಲಭ್ಯಗಳನ್ನು ವಿಸ್ತರಿಸಲಾಗಿದೆ ಎಂದು  ನೌಕಾಪಡೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಒಡಿಶಾದ INS ಚಿಲ್ಕಾ ಭಾರತೀಯ ನೌಕಾಪಡೆಯ ಪ್ರಮುಖ ತರಬೇತಿ ಸಂಸ್ಥೆಯಾಗಿದೆ.

ಗಂಭೀರವಲ್ಲದ ರೋಗಿಗಳಿಗೆ ಚಿಕಿತ್ಸೆ ನೀಡಲು ಬಾಲಸೋರ್‌ನ ಗಂಗಾಧರ ಕಲ್ಯಾಣ ಮಂಟಪದಲ್ಲಿ ನೌಕಾಪಡೆಯ ವೈದ್ಯಕೀಯ ಪರಿಹಾರ ತಂಡದಿಂದ ವೈದ್ಯಕೀಯ ಕ್ಯಾಂಪ್ ತೆರೆಯಲಾಗಿದೆ. ನೌಕಾಪಡೆ ತಂಡ  ಗಾಯಾಳುಗಳನ್ನು ಸ್ಥಳಾಂತರಿಸಲು ಮತ್ತು ರಕ್ಷಿಸಲು ಒಡಿಶಾ ನಾಗರಿಕ ಆಡಳಿತಕ್ಕೆ ಸಹಾಯ ಮತ್ತು ಬೆಂಬಲವನ್ನು ನೀಡುತ್ತಿದೆ  ಅಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

ಚಾಮುಂಡೇಶ್ವರಿ ದೇವಿ ಸುತ್ತ ನಡೆಯುತ್ತಿರುವ ರಾಜಕೀಯ ತೀವ್ರ ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

Techie Kidnap case: Lakshmi Menonಗೆ ಬಿಗ್ ರಿಲೀಫ್, ನಿರೀಕ್ಷಣಾ ಜಾಮೀನು ಮಂಜೂರು, ಏನಿದು ಪ್ರಕರಣ? ನಟಿ ಹೇಳಿದ್ದೇನು?

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

SCROLL FOR NEXT