ಶರದ್ ಪವಾರ್ 
ದೇಶ

ಒಡಿಶಾ ತ್ರಿವಳಿ ರೈಲು ದುರಂತ: ಕೇಂದ್ರ ಸಚಿವ ಅಶ್ವಿನ್ ವೈಷ್ಣವ್ ರಾಜೀನಾಮೆಗೆ ಶರದ್ ಪವಾರ್ ಒತ್ತಾಯ

ಒಡಿಶಾದ ಬಾಲಾಸೋರ್ ಜಿಲ್ಲೆಯ ಬಹನಾಗ ನಿಲ್ದಾಣ ಬಳಿ ಸಂಭವಿಸಿದ ತ್ರಿವಳಿ ರೈಲು ಅಪಘಾತಕ್ಕೆ ನೈತಿಕ ಹೊಣೆ ಹೊತ್ತು ಕೇಂದ್ರ ರೈಲ್ವೆ ಸಚಿವ ಸ್ಥಾನಕ್ಕೆ ಅಶ್ವಿನ್ ವೈಷ್ಣವ್ ರಾಜೀನಾಮೆ ನೀಡಬೇಕೆಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಶನಿವಾರ ಒತ್ತಾಯಿಸಿದ್ದಾರೆ.

ಮುಂಬೈ: ಒಡಿಶಾದ ಬಾಲಾಸೋರ್ ಜಿಲ್ಲೆಯ ಬಹನಾಗ ನಿಲ್ದಾಣ ಬಳಿ ಸಂಭವಿಸಿದ ತ್ರಿವಳಿ ರೈಲು ಅಪಘಾತಕ್ಕೆ ನೈತಿಕ ಹೊಣೆ ಹೊತ್ತು ಕೇಂದ್ರ ರೈಲ್ವೆ ಸಚಿವ ಸ್ಥಾನಕ್ಕೆ ಅಶ್ವಿನ್ ವೈಷ್ಣವ್ ರಾಜೀನಾಮೆ ನೀಡಬೇಕೆಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಶನಿವಾರ ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಲ್ ಬಹದ್ದೂರ್ ಶಾಸ್ತ್ರೀ ರೈಲ್ವೆ ಸಚಿವರಾಗಿದ್ದಾಗ ಅಪಘಾತ ಮರುಕಳಿಸಿದಾಗ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಜವಾಹರ್ ಲಾಲ್ ನೆಹರೂ ಅವರ ವಿರೋಧ ಇದ್ದರೂ ನೈತಿಕ ಹೊಣೆ ಹೊತ್ತು ಶಾಸ್ತ್ರೀ ಅವರು ರಾಜೀನಾಮೆ ನೀಡಿದ್ದರು. ಈಗ ದೇಶದಲ್ಲಿ ಅದೇ ರೀತಿಯ ಅಪಘಾತವಾಗಿದ್ದು, ಅಶ್ವಿನ್ ವೈಷ್ಣವ್ ರಾಜೀನಾಮೆ ನೀಡಲು ಮುಂದಾಗಬೇಕು ಎಂದರು.

ರೈಲು ದುರಂತದಲ್ಲಿ 288 ಮೃತದೇಹಗಳು ಪತ್ತೆಯಾಗಿದ್ದು, 1, 000ಕ್ಕೂ ಹೆಚ್ಚು ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಹಳಿ ತಪ್ಪಿದ ರೈಲುಗಳ ಅವಶೇಷಗಳನ್ನು ಹಳಿಯಿಂದ ತೆರವುಗೊಳಿಸುವ ಕಾರ್ಯ ಭರದಿಂದ ನಡೆಯುತ್ತಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ