ಶರದ್ ಪವಾರ್ 
ದೇಶ

ಒಡಿಶಾ ತ್ರಿವಳಿ ರೈಲು ದುರಂತ: ಕೇಂದ್ರ ಸಚಿವ ಅಶ್ವಿನ್ ವೈಷ್ಣವ್ ರಾಜೀನಾಮೆಗೆ ಶರದ್ ಪವಾರ್ ಒತ್ತಾಯ

ಒಡಿಶಾದ ಬಾಲಾಸೋರ್ ಜಿಲ್ಲೆಯ ಬಹನಾಗ ನಿಲ್ದಾಣ ಬಳಿ ಸಂಭವಿಸಿದ ತ್ರಿವಳಿ ರೈಲು ಅಪಘಾತಕ್ಕೆ ನೈತಿಕ ಹೊಣೆ ಹೊತ್ತು ಕೇಂದ್ರ ರೈಲ್ವೆ ಸಚಿವ ಸ್ಥಾನಕ್ಕೆ ಅಶ್ವಿನ್ ವೈಷ್ಣವ್ ರಾಜೀನಾಮೆ ನೀಡಬೇಕೆಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಶನಿವಾರ ಒತ್ತಾಯಿಸಿದ್ದಾರೆ.

ಮುಂಬೈ: ಒಡಿಶಾದ ಬಾಲಾಸೋರ್ ಜಿಲ್ಲೆಯ ಬಹನಾಗ ನಿಲ್ದಾಣ ಬಳಿ ಸಂಭವಿಸಿದ ತ್ರಿವಳಿ ರೈಲು ಅಪಘಾತಕ್ಕೆ ನೈತಿಕ ಹೊಣೆ ಹೊತ್ತು ಕೇಂದ್ರ ರೈಲ್ವೆ ಸಚಿವ ಸ್ಥಾನಕ್ಕೆ ಅಶ್ವಿನ್ ವೈಷ್ಣವ್ ರಾಜೀನಾಮೆ ನೀಡಬೇಕೆಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಶನಿವಾರ ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಲ್ ಬಹದ್ದೂರ್ ಶಾಸ್ತ್ರೀ ರೈಲ್ವೆ ಸಚಿವರಾಗಿದ್ದಾಗ ಅಪಘಾತ ಮರುಕಳಿಸಿದಾಗ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಜವಾಹರ್ ಲಾಲ್ ನೆಹರೂ ಅವರ ವಿರೋಧ ಇದ್ದರೂ ನೈತಿಕ ಹೊಣೆ ಹೊತ್ತು ಶಾಸ್ತ್ರೀ ಅವರು ರಾಜೀನಾಮೆ ನೀಡಿದ್ದರು. ಈಗ ದೇಶದಲ್ಲಿ ಅದೇ ರೀತಿಯ ಅಪಘಾತವಾಗಿದ್ದು, ಅಶ್ವಿನ್ ವೈಷ್ಣವ್ ರಾಜೀನಾಮೆ ನೀಡಲು ಮುಂದಾಗಬೇಕು ಎಂದರು.

ರೈಲು ದುರಂತದಲ್ಲಿ 288 ಮೃತದೇಹಗಳು ಪತ್ತೆಯಾಗಿದ್ದು, 1, 000ಕ್ಕೂ ಹೆಚ್ಚು ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಹಳಿ ತಪ್ಪಿದ ರೈಲುಗಳ ಅವಶೇಷಗಳನ್ನು ಹಳಿಯಿಂದ ತೆರವುಗೊಳಿಸುವ ಕಾರ್ಯ ಭರದಿಂದ ನಡೆಯುತ್ತಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT