ಒಡಿಶಾ ತ್ರಿವಳಿ ರೈಲು ಅಪಘಾತದ ಚಿತ್ರ 
ದೇಶ

ರೈಲು ದುರಂತಕ್ಕೆ ಕೋಮು ಬಣ್ಣ: ವದಂತಿ ಹರಡುವವರ ವಿರುದ್ಧ ಕಠಿಣ ಕ್ರಮ- ಒಡಿಶಾ ಪೊಲೀಸರ ಎಚ್ಚರಿಕೆ

275 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 1,110ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಬಾಲಾಸೋರ್ ರೈಲು ದುರಂತ ಕುರಿತ ವದಂತಿ ಹರಡುವುದನ್ನು ನಿಲ್ಲಿಸುವಂತೆ ಒಡಿಶಾ ಪೊಲೀಸರು ಭಾನುವಾರ ಮನವಿ ಮಾಡಿದ್ದಾರೆ.

ಬಾಲಾಸೋರ್: ಇಡೀ ದೇಶವನ್ನು ಬೆಚ್ಚಿ ಬೀಳಿಸಿದ ಭೀಕರ ತ್ರಿವಳಿ ರೈಲು ಅಪಘಾತಕ್ಕೆ ಕೋಮು ಬಣ್ಣ ಹಚ್ಚುವ ವದಂತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. 275 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 1,110ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಬಾಲಾಸೋರ್ ರೈಲು ದುರಂತ ಕುರಿತ ವದಂತಿ ಹರಡುವುದನ್ನು ನಿಲ್ಲಿಸುವಂತೆ ಒಡಿಶಾ ಪೊಲೀಸರು ಭಾನುವಾರ ಮನವಿ ಮಾಡಿದ್ದಾರೆ.

ಯಾವುದೇ ವದಂತಿ ಹಬ್ಬಿಸುವ ಮೂಲಕ ಕೋಮು ಸೌಹಾರ್ದತೆ ಹದಗೆಡಿಸಲು ಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಒಡಿಶಾ ಪೊಲೀಸರು, 
ಕೆಲವು ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಬಾಲಸೋರ್‌ನಲ್ಲಿ ಸಂಭವಿಸಿದ ರೈಲು ಅಪಘಾತಕ್ಕೆ ಕೋಮು ಬಣ್ಣ ನೀಡುತ್ತಿರುವುದು ಗಮನಕ್ಕೆ ಬಂದಿದೆ. ಇದು ಅತ್ಯಂತ ದುರದೃಷ್ಟಕರ’ ಎಂದಿದ್ದಾರೆ. 

 'ಇಂತಹ ಸುಳ್ಳು ಮತ್ತು ದುರುದ್ದೇಶಪೂರಿತ ಪೋಸ್ಟ್‌ ಹಾಕುವುದನ್ನು ನಿಲ್ಲಿಸುವಂತೆ  ಸಂಬಂಧಪಟ್ಟವರಿಗೆ ಮನವಿ ಮಾಡುತ್ತೇವೆ. ವದಂತಿ ಹಬ್ಬಿಸುವ ಮೂಲಕ ಕೋಮು ಸೌಹಾರ್ದತೆ ಹದಗೆಡಿಸಲು ಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಅವರು ಹೇಳಿದ್ದಾರೆ. 

ನಿರ್ದಿಷ್ಟ ಸಮುದಾಯಕ್ಕೆ ಸೇರಿರುವ ಕಟ್ಟಡದ ಬಳಿ ರೈಲು ಅಪಘಾತ ಸಂಭವಿಸಿದೆ ಎಂದು ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಹೇಳುತ್ತಿದ್ದರೆ ಮತ್ತೆ ಕೆಲವರು ಇದನ್ನು ಖಂಡಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

SCROLL FOR NEXT