ಒಡಿಶಾ ತ್ರಿವಳಿ ರೈಲು ಅಪಘಾತದ ಚಿತ್ರ 
ದೇಶ

ರೈಲು ದುರಂತಕ್ಕೆ ಕೋಮು ಬಣ್ಣ: ವದಂತಿ ಹರಡುವವರ ವಿರುದ್ಧ ಕಠಿಣ ಕ್ರಮ- ಒಡಿಶಾ ಪೊಲೀಸರ ಎಚ್ಚರಿಕೆ

275 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 1,110ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಬಾಲಾಸೋರ್ ರೈಲು ದುರಂತ ಕುರಿತ ವದಂತಿ ಹರಡುವುದನ್ನು ನಿಲ್ಲಿಸುವಂತೆ ಒಡಿಶಾ ಪೊಲೀಸರು ಭಾನುವಾರ ಮನವಿ ಮಾಡಿದ್ದಾರೆ.

ಬಾಲಾಸೋರ್: ಇಡೀ ದೇಶವನ್ನು ಬೆಚ್ಚಿ ಬೀಳಿಸಿದ ಭೀಕರ ತ್ರಿವಳಿ ರೈಲು ಅಪಘಾತಕ್ಕೆ ಕೋಮು ಬಣ್ಣ ಹಚ್ಚುವ ವದಂತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. 275 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 1,110ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಬಾಲಾಸೋರ್ ರೈಲು ದುರಂತ ಕುರಿತ ವದಂತಿ ಹರಡುವುದನ್ನು ನಿಲ್ಲಿಸುವಂತೆ ಒಡಿಶಾ ಪೊಲೀಸರು ಭಾನುವಾರ ಮನವಿ ಮಾಡಿದ್ದಾರೆ.

ಯಾವುದೇ ವದಂತಿ ಹಬ್ಬಿಸುವ ಮೂಲಕ ಕೋಮು ಸೌಹಾರ್ದತೆ ಹದಗೆಡಿಸಲು ಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಒಡಿಶಾ ಪೊಲೀಸರು, 
ಕೆಲವು ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಬಾಲಸೋರ್‌ನಲ್ಲಿ ಸಂಭವಿಸಿದ ರೈಲು ಅಪಘಾತಕ್ಕೆ ಕೋಮು ಬಣ್ಣ ನೀಡುತ್ತಿರುವುದು ಗಮನಕ್ಕೆ ಬಂದಿದೆ. ಇದು ಅತ್ಯಂತ ದುರದೃಷ್ಟಕರ’ ಎಂದಿದ್ದಾರೆ. 

 'ಇಂತಹ ಸುಳ್ಳು ಮತ್ತು ದುರುದ್ದೇಶಪೂರಿತ ಪೋಸ್ಟ್‌ ಹಾಕುವುದನ್ನು ನಿಲ್ಲಿಸುವಂತೆ  ಸಂಬಂಧಪಟ್ಟವರಿಗೆ ಮನವಿ ಮಾಡುತ್ತೇವೆ. ವದಂತಿ ಹಬ್ಬಿಸುವ ಮೂಲಕ ಕೋಮು ಸೌಹಾರ್ದತೆ ಹದಗೆಡಿಸಲು ಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಅವರು ಹೇಳಿದ್ದಾರೆ. 

ನಿರ್ದಿಷ್ಟ ಸಮುದಾಯಕ್ಕೆ ಸೇರಿರುವ ಕಟ್ಟಡದ ಬಳಿ ರೈಲು ಅಪಘಾತ ಸಂಭವಿಸಿದೆ ಎಂದು ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಹೇಳುತ್ತಿದ್ದರೆ ಮತ್ತೆ ಕೆಲವರು ಇದನ್ನು ಖಂಡಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT