ರೈಲುಗಳ ಸಂಚಾರ ಪುನರಾರಂಭ 
ದೇಶ

ಒಡಿಶಾ: ಭೀಕರ ಅಪಘಾತ ಸಂಭವಿಸಿದ 51 ಗಂಟೆ ಬಳಿಕ ರೈಲು ಸಂಚಾರ ಪುನರಾರಂಭ

ಮೂರು ರೈಲುಗಳ ನಡುವೆ ಡಿಕ್ಕಿ ಸಂಭವಿಸಿದ್ದರಿಂದ 275 ಜನರು ಮೃತಪಟ್ಟಿದ್ದ ಒಡಿಶಾದ ಬಾಲಾಸೋರ್ ಜಿಲ್ಲೆಯ ಬಹನಾಗ ರೈಲು ನಿಲ್ದಾಣದ ಬಳಿಯ ಹಳಿ ಮೇಲಿನ ಅವಶೇಷಗಳ ತೆರವು ಹಾಗೂ ದುರಸ್ಥಿ  ಕಾರ್ಯ ಪೂರ್ಣಗೊಂಡಿದ್ದು, ಇದೀಗ ರೈಲುಗಳ ಸಂಚಾರ ಪುನಾರಾರಂಭವಾಗಿದೆ.

ಬಾಲಾಸೋರ್: ಮೂರು ರೈಲುಗಳ ನಡುವೆ ಡಿಕ್ಕಿ ಸಂಭವಿಸಿದ್ದರಿಂದ 275 ಜನರು ಮೃತಪಟ್ಟಿದ್ದ ಒಡಿಶಾದ ಬಾಲಾಸೋರ್ ಜಿಲ್ಲೆಯ ಬಹನಾಗ ರೈಲು ನಿಲ್ದಾಣದ ಬಳಿಯ ಹಳಿ ಮೇಲಿನ ಅವಶೇಷಗಳ ತೆರವು ಹಾಗೂ ದುರಸ್ಥಿ  ಕಾರ್ಯ ಪೂರ್ಣಗೊಂಡಿದ್ದು, ಇದೀಗ ರೈಲುಗಳ ಸಂಚಾರ ಪುನಾರಾರಂಭವಾಗಿದೆ.

ಹಳಿಗಳು ಹಾಳಾಗಿದ್ದರಿಂದ ಸಂಚಾರ ಸ್ಥಗಿತವಾಗಿತ್ತು. ಈ ಹಳಿ ದುರಸ್ಥಿ ಕಾರ್ಯ ಮುಗಿದಿದ್ದು, ಅಪಘಾತ ಸಂಭವಿಸಿದ 51 ಗಂಟೆಗಳ ಬಳಿಕ ರೈಲುಗಳ ಸಂಚಾರ ಎಂದಿನಂತೆ ಸಾಗಿದೆ. ಎರಡು ಟ್ರ್ಯಾಕ್ ಗಳಲ್ಲಿ  ಎಂದಿನಂತೆ ರೈಲುಗಳು ಸಂಚರಿಸುತ್ತೇವೆ ಎಂದು ದುರಂತ ನಡೆದ ಸ್ಥಳದಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಸುದ್ದಿಗಾರರಿಗೆ ತಿಳಿಸಿದರು.

ಜೂನ್ 2 ರಂದು ಸಂಜೆ 7 ಗಂಟೆ ಸುಮಾರಿನಲ್ಲಿ ಕೋರಮಂಡಲ್ ಎಕ್ಸ್‌ಪ್ರೆಸ್ ನ ಹೆಚ್ಚಿನ ಬೋಗಿಗಳು ಹಳಿ ತಪ್ಪಿ ನಿಂತಿದ್ದ ಗೂಡ್ಸ್ ರೈಲಿಗೆ ಅಪ್ಪಳಿಸಿತ್ತು. ಅದೇ ಸಮಯದಲ್ಲಿ ಹಾದು ಹೋಗುತ್ತಿದ್ದ ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್‌ನ ಕೊನೆಯ ಕೆಲವು ಬೋಗಿಗಳ ಮೇಲೆ ಕೋರಮಂಡಲ್‌ನ ಕೆಲವು ಬೋಗಿಗಳು ಉರುಳಿ ಬಿದ್ದ ಪರಿಣಾಮ ಅಪಾರ ಪ್ರಮಾಣದ ಸಾವು ನೋವು ಉಂಟಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT