ಸೇತುವೆ ಕುಸಿತ 
ದೇಶ

ವಿಡಿಯೋ: ಬಿಹಾರದಲ್ಲಿ 1,700 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದ ಸೇತುವೆ ಕುಸಿತ, ತನಿಖೆಗೆ ಆದೇಶ!

ಬಿಹಾರದ ಭಾಗಲ್‌ಪುರದಲ್ಲಿ ನಿರ್ಮಾಣ ಹಂತದ ಸೇತುವೆಯೊಂದು ಭಾನುವಾರ ಕುಸಿದು ಬಿದ್ದಿದೆ. ಈ ಅಪಘಾತದ ಭಯಾನಕ ವಿಡಿಯೋವೊಂದು ವೈರಲ್ ಆಗಿದೆ.

ಬಿಹಾರದ ಭಾಗಲ್‌ಪುರದಲ್ಲಿ ನಿರ್ಮಾಣ ಹಂತದ ಸೇತುವೆಯೊಂದು ಭಾನುವಾರ ಕುಸಿದು ಬಿದ್ದಿದೆ. ಈ ಅಪಘಾತದ ಭಯಾನಕ ವಿಡಿಯೋವೊಂದು ವೈರಲ್ ಆಗಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟವಾಗಿಲ್ಲ, ಆದರೆ ಸೇತುವೆಯ ಕುಸಿತದಿಂದಾಗಿ ಸ್ಥಳೀಯರು ಭಯಭೀತರಾಗಿದ್ದಾರೆ. ಆದಾಗ್ಯೂ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ ಮತ್ತು ಹೊಣೆಗಾರರನ್ನು ಗುರುತಿಸುವಂತೆ ಸೂಚಿಸಿದ್ದಾರೆ.

ಖಗಾರಿಯಾ-ಆಗುವಾನಿ-ಸುಲ್ತಂಗಂಜ್ ನಡುವೆ ನಿರ್ಮಿಸಲಾಗಿದ್ದ ಸೇತುವೆ ಕುಸಿದಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಸ್ವಲ್ಪ ಸಮಯದಲ್ಲೇ ಇಡೀ ಸೇತುವೆ ಗಂಗಾ ನದಿಯಲ್ಲಿ ಮುಳುಗಿತು. ಅಚ್ಚರಿಯ ಸಂಗತಿ ಎಂದರೆ ಎರಡು ವರ್ಷಗಳ ಹಿಂದೆಯೂ ಈ ಸೇತುವೆಯ ಒಂದು ಭಾಗ ಕುಸಿದಿತ್ತು. 4 ವರ್ಷಗಳ ಹಿಂದೆ ಸಿಎಂ ನಿತೀಶ್ ಕುಮಾರ್ ಈ ಸೇತುವೆಗೆ ಶಂಕುಸ್ಥಾಪನೆ ಮಾಡಿದ್ದರು.

ಈ ಸೇತುವೆಯನ್ನು 1717 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಈ ನಿರ್ಮಾಣ ಹಂತದಲ್ಲಿರುವ ಸೇತುವೆಯ ಕೆಲವು ಭಾಗವು ಏಪ್ರಿಲ್‌ನಲ್ಲಿ ಚಂಡಮಾರುತದಿಂದಾಗಿ ಹಾನಿಗೊಳಗಾಗಿತ್ತು. ಖಗಾರಿಯಾ-ಅಗುವಾನಿ-ಸುಲ್ತಂಗಂಜ್ ನಡುವೆ ಗಂಗಾನದಿಯಲ್ಲಿ ನಿರ್ಮಿಸಲಾಗುತ್ತಿದ್ದ ಮಹಾಸೇತುವಿನ ಮಧ್ಯಭಾಗ ಕುಸಿದಿದೆ. ಸೇತುವೆಯ ಮೇಲಿನ ಭಾಗ ನದಿಯಲ್ಲಿ ಮುಳುಗಿದೆ.

ನಿರ್ಮಾಣ ಹಂತದಲ್ಲಿರುವ ಸೇತುವೆಯ ಸೂಪರ್ ಸ್ಟ್ರಕ್ಚರ್ ಕುಸಿದಿರುವುದು ವಿಡಿಯೋದಲ್ಲಿ ಗೋಚರಿಸುತ್ತಿದೆ. ಆದರೆ, ಸೇತುವೆ ಕುಸಿತಕ್ಕೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಸೇತುವೆಯ ಮೂರು ಪಿಲ್ಲರ್‌ಗಳ ಮೇಲೆ ನಿರ್ಮಿಸಿದ ಕಟ್ಟಡ ಕುಸಿದಿದೆ ಎಂದು ಹೇಳಲಾಗುತ್ತಿದೆ. ಭಾಗಲ್ಪುರದ ಸುಲ್ತಂಗಂಜ್‌ನಲ್ಲಿ ನಿರ್ಮಿಸಲಾಗುತ್ತಿರುವ ಈ ಸೇತುವೆಯು ಖಗಾರಿಯಾ ಮತ್ತು ಭಾಗಲ್‌ಪುರವನ್ನು ಸಂಪರ್ಕಿಸುತ್ತದೆ. ನಿರ್ಮಾಣ ಹಂತದ ಸೇತುವೆ ಕುಸಿದ ಘಟನೆ ಬೆಳಗ್ಗೆ 6 ಗಂಟೆ ಸುಮಾರಿಗೆ ನಡೆದಿದೆ ಎಂದು ಡಿಡಿಸಿ ಭಾಗಲ್‌ಪುರ ಕುಮಾರ್ ಅನುರಾಗ್ ತಿಳಿಸಿದ್ದಾರೆ. ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳೀಯ ಆಡಳಿತ ಸ್ಥಳದಲ್ಲಿದೆ. 'ಪುಲ್ ನಿರ್ಮಾಣ್ ನಿಗಮ್' ಅವರಿಂದ ವರದಿ ಕೇಳಿದ್ದೇವೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

ನಮಸ್ತೆ.. ಏನ್ರೀ ರಾಹುಲ್ ಹೇಗಿದ್ದೀರಾ? ; ಸಂಸತ್ ಭವನದ ಬಳಿ ಪ್ರಧಾನಿ ಮೋದಿ-Rahul Gandhi ಅಪರೂಪದ ಮುಖಾಮುಖಿ! Video

ಮಾತುಕತೆಗೂ ಮುನ್ನವೇ ಟೆಹ್ರಾನ್‌ಗೆ ದೊಡ್ಡ ಗೆಲುವು; ಫ್ರೀಜ್ ಮಾಡಲಾದ ಇರಾನ್ ಸ್ವತ್ತುಗಳ ಬಿಡುಗಡೆಗೆ ಅಮೆರಿಕ ಒಪ್ಪಿಗೆ!

SCROLL FOR NEXT