ಬಾಲಸೋರ್ ರೈಲು ಅಪಘಾತ ಸ್ಥಳ 
ದೇಶ

ಬಾಲಸೋರ್ನಲ್ಲಿ ಸಮರೋಪಾದಿಯಲ್ಲಿ ಸಾಗಿದ ಹಳಿ ದುರಸ್ತಿ ಕಾರ್ಯ: ವೈಮಾನಿಕ ದೃಶ್ಯ

ಒಡಿಶಾದ ಬಾಲಸೋರ್ನಲ್ಲಿ ಭೀಕರ ರೈಲು ಅಪಘಾತ ನಡೆದ ಸ್ಥಳದಲ್ಲಿ ಸಮರೋಪಾದಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದೆ.

ಬಾಲಸೋರ್(ಒಡಿಶಾ): ಒಡಿಶಾದ ಬಾಲಸೋರ್ನಲ್ಲಿ ಭೀಕರ ರೈಲು ಅಪಘಾತ ನಡೆದ ಸ್ಥಳದಲ್ಲಿ ಸಮರೋಪಾದಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದೆ. 

ಜೆಸಿಬಿ ಯಂತ್ರಗಳ ಮೂಲಕ ಅವಶೇಷಗಳನ್ನು ತೆರವು ಮಾಡುತ್ತಿರುವುದನ್ನು ಡ್ರೋಣ್ಕ್ಯಾಮರಾದಲ್ಲಿ ಸೆರೆಯಾದ ದೃಶ್ಯಗಳಲ್ಲಿ ನೋಡಬಹುದು. ಅವಶೇಷಗಳನ್ನು ಸಂಪೂರ್ಣ ತೆರವು ಮಾಡಿದ ಬಳಿಕ ಹಳಿಗಳ ಸ್ಥಿತಿಗತಿ ಬಗ್ಗೆ ಮಾಹಿತಿ ಸಿಗಲಿದೆ. 

ಭಾನುವಾರ ಸಂಜೆಯವರೆಗೆ ಅವಶೇಷಗಳ ತೆರವು ಕೆಲಸ ನಡೆಯಲಿದೆ. ಆ ಬಳಿಕ ಹಳಿಗಳನ್ನು ದುರಸ್ತಿ ಮಾಡಿ ಸೋಮವಾರ ಸಂಜೆ ಅಥವಾ ಮಂಗಳವಾರ ಮಾರ್ಗವನ್ನು ರೈಲುಗಳ ಸಂಚಾರಕ್ಕೆ ಮುಕ್ತಗೊಳಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. 

"ದುರಂತ ಸಂಭವಿಸಿದ ಸ್ಥಳದ ಮರುಸ್ಥಾಪನೆ ಕಾರ್ಯ ನಡೆಯುತ್ತಿದೆ. ಉರುಳಿಬಿದ್ದ ಬೋಗಿಗಳು ಮತ್ತು ಅವಶೇಷಗಳನ್ನು ತೆಗೆದುಹಾಕಲಾಗುತ್ತಿದೆ. ಸಂಪರ್ಕ ಹಳಿಗಳ ಕಾಮಗಾರಿಯೂ ನಡೆಯುತ್ತಿದ್ದು, ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ" ಎಂದು ರೈಲ್ವೆ ಇಲಾಖೆ ತಿಳಿಸಿದೆ. 

"ಅಪಘಾತಕ್ಕೀಡಾದ ಬೋಗಿಗಳನ್ನು ಮತ್ತು ಗೂಡ್ಸ್ ರೈಲಿನ ಎರಡು ಬೋಗಿಗಳನ್ನು ತೆಗೆದುಹಾಕಲಾಗಿದೆ. ಒಂದು ಕಡೆಯಿಂದ ಟ್ರ್ಯಾಕ್ ಸಂಪರ್ಕಿಸುವ ಕೆಲಸ ನಡೆಯುತ್ತಿದೆ" ಎಂದು ಸ್ಥಳದಲ್ಲಿ ನಡೆಯುತ್ತಿರುವ ದುರಸ್ತಿ ಕಾರ್ಯದ ಕುರಿತು ಆಗ್ನೇಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಆದಿತ್ಯ ಕುಮಾರ್ ಚೌಧರಿ ಮಾಹಿತಿ ನೀಡಿದರು. 

ಮತ್ತೊಂಡೆ, ಮೃತಪಟ್ಟ ವ್ಯಕ್ತಿಗಳ ಕುಟುಂಬದವರಿಗೆ ಒಡಿಶಾ ಸರ್ಕಾರ ತಲಾ 5 ಲಕ್ಷ ರೂಪಾಯಿ ಪರಿಹಾರಧನ ಘೋಷಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕಾವೇರಿ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭ, ಡಿಕೆಶಿ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT