ಸಾಂದರ್ಭಿಕ ಚಿತ್ರ 
ದೇಶ

ಮಾದಕವಸ್ತು ಸಾಗಿಸುತ್ತಿದ್ದ ಪಾಕಿಸ್ತಾನದ ಮತ್ತೊಂದು ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್!

ಪಂಜಾಬ್‌ನ ಅಮೃತಸರದ ವಾಘಾ-ಅಟ್ಟಾರಿ ಅಂತರರಾಷ್ಟ್ರೀಯ ಗಡಿ ಬಳಿ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಪಾಕಿಸ್ತಾನದ ಮತ್ತೊಂದು ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಹೊಡೆದುರುಳಿಸಿದೆ.

ನವದೆಹಲಿ: ಪಂಜಾಬ್‌ನ ಅಮೃತಸರದ ವಾಘಾ-ಅಟ್ಟಾರಿ ಅಂತರರಾಷ್ಟ್ರೀಯ ಗಡಿ ಬಳಿ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಪಾಕಿಸ್ತಾನದ ಮತ್ತೊಂದು ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಹೊಡೆದುರುಳಿಸಿದೆ.

ಅಮೃತಸರದ ರತ್ತನ್‌ಖುರ್ದ್ ಗ್ರಾಮದ ಬಳಿ ಭಾನುವಾರ ರಾತ್ರಿ 9.45 ರ ಸುಮಾರಿಗೆ ಬಿಎಸ್‌ಎಫ್ ಸಿಬ್ಬಂದಿ ಡ್ರೋನ್ ಅನ್ನು ಪತ್ತೆ ಮಾಡಿದರು.

ಬಿಎಸ್‌ಎಫ್ ಪಡೆಗಳು ತಕ್ಷಣವೇ ಡ್ರೋನ್ ಅನ್ನು ತಡೆಹಿಡಿಯಲು ಪ್ರತಿಕ್ರಿಯಿಸಿದವು ಮತ್ತು ಪಾಕ್ ಡ್ರೋನ್ ಅನ್ನು ಯಶಸ್ವಿಯಾಗಿ ಹೊಡೆದುರುಳಿಸಿದವು ಎಂದು ಬಿಎಸ್‌ಎಫ್ ಹೇಳಿಕೆಯಲ್ಲಿ ತಿಳಿಸಿದೆ.

ಈ ಪ್ರದೇಶದಲ್ಲಿ ಹುಡುಕಾಟ ನಡೆಸಿದ ನಂತರ, 'ಕಪ್ಪು ಬಣ್ಣದ ಡ್ರೋನ್ (ಕ್ವಾಡ್‌ಕಾಪ್ಟರ್, ಡಿಜೆಐ ಮ್ಯಾಟ್ರಿಸ್, 300 ಆರ್‌ಟಿಕೆ) ಜೊತೆಗೆ ಮೂರು ಪ್ಯಾಕೆಟ್ ಮಾದಕವಸ್ತು (ಹೆರಾಯಿನ್) ವನ್ನು ರತ್ತನಖುರ್ದ್ ಗ್ರಾಮದ ಕೃಷಿಭೂಮಿಯಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.

ವಶಪಡಿಸಿಕೊಂಡ ಹೆರಾಯಿನ್‌ನ ಒಟ್ಟು ತೂಕವು ಸುಮಾರು 3.2 ಕೆಜಿಯಷ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಡಿಯಲ್ಲಿ ಸದಾ ಎಚ್ಚರದಿಂದಿರುವ ಬಿಎಸ್‌ಎಫ್‌ನಿಂದ ಡ್ರೋನ್‌ಗಳ ಮೂಲಕ ಮಾದಕವಸ್ತುಗಳನ್ನು ಕಳ್ಳಸಾಗಣೆ ಮಾಡುವ ಪಾಕಿಸ್ತಾನದ ಮತ್ತೊಂದು ನೀಚ ಪ್ರಯತ್ನ ವಿಫಲವಾಗಿದೆ ಎಂದು ಪಡೆ ಹೇಳಿದೆ.

ಇದಕ್ಕೂ ಮುನ್ನ, ಅಮೃತಸರದ ಹೊರವಲಯದಲ್ಲಿ ಪಾಕಿಸ್ತಾನಿ ಡ್ರೋನ್‌ಗಳು ಬೀಳಿಸಿದ ಭಾರಿ ಪ್ರಮಾಣದ ಮಾದಕವಸ್ತುವನ್ನು ಶನಿವಾರ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಮತ್ತು ಪಂಜಾಬ್ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ವಶಪಡಿಸಿಕೊಳ್ಳಲಾಗಿದೆ.

ಶನಿವಾರ ಮುಂಜಾನೆ, ಭದ್ರತಾ ಪಡೆ ಮತ್ತು ಪಂಜಾಬ್ ಪೊಲೀಸರ ಜಂಟಿ ದಾಳಿಯಲ್ಲಿ ಅಮೃತಸರ ಜಿಲ್ಲೆಯ ರಾಯ್ ಗ್ರಾಮದ ಹೊರವಲಯದಲ್ಲಿ ಡ್ರೋನ್‌ಗಳ ಝೇಂಕರಿಸುವ ಮತ್ತು ಸರಕುಗಳನ್ನು ಬೀಳಿಸುವ ಶಬ್ದವನ್ನು ಕೇಳಿದೆ ಎಂದು ಬಿಎಸ್‌ಎಫ್ ಪ್ರಕಟಣೆಯಲ್ಲಿ ತಿಳಿಸಿದೆ.

ಅಧಿಕಾರಿಗಳ ಪ್ರಕಾರ, ವಶಪಡಿಸಿಕೊಂಡ ಶಂಕಿತ ಮಾದಕವಸ್ತುಗಳ (ಹೆರಾಯಿನ್) ಒಟ್ಟು ತೂಕ ಸುಮಾರು 5.5 ಕೆ.ಜಿ ಆಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT