ರೈಲು ಅಪಘಾತದ ಸ್ಥಳ 
ದೇಶ

ಒಡಿಶಾ: ತ್ರಿವಳಿ ರೈಲು ದುರಂತ ಸಂಭವಿಸಿದ ಸ್ಥಳಕ್ಕೆ ಸಿಬಿಐ ತಂಡ ಭೇಟಿ, ತನಿಖೆ ಆರಂಭ

10 ಸದಸ್ಯರನ್ನೊಳಗೊಂಡ ಸಿಬಿಐ ತಂಡ ಸೋಮವಾರ ಬಾಲಸೋರ್ ರೈಲು ಅಪಘಾತ ಸ್ಥಳಕ್ಕೆ ಭೇಟಿ ನೀಡಿದ್ದು, ತ್ರಿವಳಿ ರೈಲು ಅಪಘಾತದ ತನಿಖೆಯನ್ನು ಪ್ರಾರಂಭಿಸಿದೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾಲಾಸೋರ್: 10 ಸದಸ್ಯರನ್ನೊಳಗೊಂಡ ಸಿಬಿಐ ತಂಡ ಸೋಮವಾರ ಬಾಲಸೋರ್ ರೈಲು ಅಪಘಾತ ಸ್ಥಳಕ್ಕೆ ಭೇಟಿ ನೀಡಿದ್ದು, ತ್ರಿವಳಿ ರೈಲು ಅಪಘಾತದ ತನಿಖೆಯನ್ನು ಪ್ರಾರಂಭಿಸಿದೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಿಬಿಐ ತನಿಖೆ ಪ್ರಾರಂಭವಾಗಿದೆ ಆದರೆ ವಿವರಗಳು ತಕ್ಷಣವೇ ತಿಳಿದು ಬಂದಿಲ್ಲ ಎಂದು  ಇಕೋಆರ್‌ನ ಖುರ್ದಾ ರಸ್ತೆ ವಿಭಾಗದ ಡಿಆರ್‌ಎಂ ರಿಂತೇಶ್ ರೇ ಅವರ ಮಾಹಿತಿಯ ಪ್ರಕಾರ ಅಪಘಾತದ ಕುರಿತು ಸಿಬಿಐ ತನಿಖೆಗೆ ರೈಲ್ವೆ ಮಂಡಳಿ ಭಾನುವಾರ ಶಿಫಾರಸು ಮಾಡಿತ್ತು.

ಇದಕ್ಕೂ ಮುನ್ನ ಅಪಘಾತ ಸ್ಥಳಕ್ಕೆ ಭೇಟಿ ನೀಡಿದ್ದ  ರೈಲ್ವೆ ಸುರಕ್ಷತಾ ಆಯುಕ್ತ ಶೈಲೇಶ್ ಕುಮಾರ್ ಪಾಠಕ್ ಬಹನಾಗಾ ಬಜಾರ್ ರೈಲು ನಿಲ್ದಾಣದ ನಿಯಂತ್ರಣ ಕೊಠಡಿ, ಸಿಗ್ನಲ್ ರೂಂ ಮತ್ತು ಸಿಗ್ನಲ್ ಪಾಯಿಂಟ್‌ಗೆ ತೆರಳಿ ಪರಿಶೀಲನೆ ನಡೆಸಿದರು.

ಇದಲ್ಲದೆ, ಬಾಲಸೋರ್‌ನ ಸರ್ಕಾರಿ ರೈಲ್ವೆ ಪೊಲೀಸರು ಜೂನ್ 3 ರಂದು ಭಾರತೀಯ ದಂಡ ಸಂಹಿತೆ ಮತ್ತು ರೈಲ್ವೆ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಅಪಘಾತದ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT