ಮನೀಶ್ ಸಿಸೋಡಿಯಾ 
ದೇಶ

ಸಿಸೋಡಿಯಾಗಿಲ್ಲ ಜಾಮೀನು, ಆದರೆ ಅನಾರೋಗ್ಯ ಪೀಡಿತ ಪತ್ನಿ ಭೇಟಿಗೆ ಹೈಕೋರ್ಟ್ ಅಸ್ತು

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜೈಲು ಪಾಲಾಗಿರುವ ಎಎಪಿ ನಾಯಕ, ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಮಧ್ಯಂತರ ಜಾಮೀನು ನೀಡಲು ದೆಹಲಿ ಹೈಕೋರ್ಟ್ ಸೋಮವಾರ ನಿರಾಕರಿಸಿದೆ.

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜೈಲು ಪಾಲಾಗಿರುವ ಎಎಪಿ ನಾಯಕ, ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಮಧ್ಯಂತರ ಜಾಮೀನು ನೀಡಲು ದೆಹಲಿ ಹೈಕೋರ್ಟ್ ಸೋಮವಾರ ನಿರಾಕರಿಸಿದೆ. ಆದರೆ ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅವರು ಸಿಸೋಡಿಯಾ ಅವರಿಗೆ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಅನಾರೋಗ್ಯದಿಂದ ಬಳಲುತ್ತಿರುವ ಪತ್ನಿಯನ್ನು ಒಂದು ದಿನದ ಮಟ್ಟಿಗೆ ಭೇಟಿಯಾಗಲು ಅವಕಾಶ ನೀಡಿದ್ದಾರೆ.

ತಮ್ಮ ಅನಾರೋಗ್ಯ ಪೀಡಿತ ಪತ್ನಿಯನ್ನು ನೋಡಿಕೊಳ್ಳಲು ಆರು ವಾರಗಳ ಕಾಲ ತಾತ್ಕಾಲಿಕ ಜಾಮೀನು ಕೋರಿ ಸಿಸೋಡಿಯಾ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಈ ಪ್ರಕರಣ ಸಂಬಂಧ ನಿಯಮಿತ ಜಾಮೀನು ಕೋರಿ ಸಿಸೋಡಿಯಾ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ಬಾಕಿ ಇದೆ. 

ಮಾರ್ಚ್ 9 ರಂದು ಮನೀಶ್ ಸಿಸೋಡಿಯಾ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಸಾಕ್ಷ್ಯಾಧಾರಗಳನ್ನು ನಾಶ ಮಾಡುವ ಸಾಧ್ಯತೆ ಹಿನ್ನೆಲೆಯಲ್ಲಿ ಸಿಸೋಡಿಯಾ ಮಧ್ಯಂತರ ಜಾಮೀನು ಅರ್ಜಿಗೆ ಜಾರಿ ನಿರ್ದೇಶನಾಲಯ ವಿರೋಧಿಸಿತ್ತು. ಸಿಸೋಡಿಯಾ ಅವರ ಪತ್ನಿ ಕಳೆದ 20 ವರ್ಷಗಳಿಂದ ಇಂತಹ ವೈದ್ಯಕೀಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಇಡಿ ವಕೀಲರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT