ಎನ್ ಡಿಆರ್ ಎಫ್ ತಂಡ 
ದೇಶ

ಒಡಿಶಾ ರೈಲು ದುರಂತ: ರಕ್ಷಣಾ ಕಾರ್ಯಾಚರಣೆ ಪೂರ್ಣ, ಬೇಸ್ ಕ್ಯಾಂಪ್ ನತ್ತ NDRF ತಂಡಗಳು ವಾಪಸ್

275 ಮಂದಿಯ ಸಾವಿಗೆ ಕಾರಣವಾದ ಒಡಿಶಾ ರೈಲು ದುರಂತದಲ್ಲಿ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡ ಹಿನ್ನಲೆಯಲ್ಲಿ ಘಟನಾ ಪ್ರದೇಶದಲ್ಲಿದ್ದ ಎಲ್ಲಾ 9 NDRF ತಂಡಗಳು ತಮ್ಮ ತಮ್ಮ ಬೇಸ್ ಕ್ಯಾಂಪ್ ಗೆ ಮರಳಲಿವೆ.

ಬಾಲಾಸೋರ್: 275 ಮಂದಿಯ ಸಾವಿಗೆ ಕಾರಣವಾದ ಒಡಿಶಾ ರೈಲು ದುರಂತದಲ್ಲಿ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡ ಹಿನ್ನಲೆಯಲ್ಲಿ ಘಟನಾ ಪ್ರದೇಶದಲ್ಲಿದ್ದ ಎಲ್ಲಾ 9 NDRF ತಂಡಗಳು ತಮ್ಮ ತಮ್ಮ ಬೇಸ್ ಕ್ಯಾಂಪ್ ಗೆ ಮರಳಲಿವೆ.

ರೈಲು ಅಪಘಾತ ಸ್ಥಳದಲ್ಲಿದ್ದ ಎಲ್ಲಾ 9 ಎನ್‌ಡಿಆರ್‌ಎಫ್ ತಂಡಗಳನ್ನು ಹಿಂಪಡೆಯಲಾಗಿದ್ದು, ಎಲ್ಲ ಸಿಬ್ಬಂದಿಗಳು ಇದೀಗ ತಮ್ಮ ಬೇಸ್ ಕ್ಯಾಂಪ್ ಗೆ ಮರಳಲಿದ್ದಾರೆ. ತ್ರಿವಳಿ ರೈಲು ಅಪಘಾತದ ನಂತರ ಒಡಿಶಾದ ಬಾಲಸೋರ್‌ನಲ್ಲಿ ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಲಾಗಿದ್ದ ಎನ್‌ಡಿಆರ್‌ಎಫ್‌ನ ಎಲ್ಲಾ ಒಂಬತ್ತು ತಂಡಗಳನ್ನು ಹಿಂತೆಗೆದುಕೊಳ್ಳುವುದಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ಇನ್ಸ್‌ಪೆಕ್ಟರ್ ಜನರಲ್ ನರೇಂದ್ರ ಸಿಂಗ್ ಬುಂದೇಲಾ ಸೋಮವಾರ ಘೋಷಿಸಿದ್ದಾರೆ.

"ಮುಖ್ಯ ಮಾರ್ಗಗಳಲ್ಲಿ ರೈಲು ಸಂಚಾರವನ್ನು ಪುನಃಸ್ಥಾಪಿಸಲಾಗಿದೆ ಮತ್ತು ಪೂರ್ಣ ಕಾರ್ಯಾಚರಣೆಯ ನಂತರ ಎಲ್ಲವೂ ಸಹಜ ಸ್ಥಿತಿಗೆ ಮರಳಿದೆ. ಒಡಿಶಾದ ಬಾಲಸೋರ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ NDRF ನ ಎಲ್ಲಾ 9 ತಂಡಗಳನ್ನು ಹಿಂಪಡೆಯಲಾಗಿದೆ" ಎಂದು ನರೇಂದ್ರ ಸಿಂಗ್ ಬುಂದೇಲಾ ತಿಳಿಸಿದ್ದಾರೆ.

''ರೈಲು ಅಪಘಾತದಲ್ಲಿ ಮೂರು ರೈಲುಗಳ ಸಾಕಷ್ಟು ಕೋಚ್ ಗಳು ನೆಲಕ್ಕುರುಳಿದ್ದರಿಂದ ತಮ್ಮ ಈ ಕಾರ್ಯಾಚರಣೆ ಸಾಕಷ್ಟು ಸವಾಲಿನಿಂದ ಕೂಡಿತ್ತು.  ರೈಲುಗಳು ಅಪಘಾತಕ್ಕೀಡಾದ ರೀತಿಯಲ್ಲಿ, ಕೋಚ್‌ಗಳು ಹಳಿತಪ್ಪಿದವು ಮತ್ತು ಪಲ್ಟಿಯಾಗಿದ್ದವು. ನಾವು ಈ ಕೋಚ್‌ಗಳ ಒಳಗೆ ಪ್ರವೇಶಿಸಬೇಕಾಯಿತು, ಒಳಗೆ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ರಕ್ಷಿಸಬೇಕು ಮತ್ತು ಗಾಯಗೊಂಡವರಿಗೆ ವೈದ್ಯಕೀಯ ನೆರವು ನೀಡಬೇಕಾಯಿತು ಎಂದು ಹೇಳಿದ್ದಾರೆ.

ಇನ್ನು ವಿದ್ಯುನ್ಮಾನ ಇಂಟರ್‌ಲಾಕಿಂಗ್‌ನಲ್ಲಿ ಬದಲಾವಣೆ" ಯಿಂದ ಅಪಘಾತ ಸಂಭವಿಸಿದೆ ಎಂದು ಕೇಂದ್ರ ಸರ್ಕಾರ ಭಾನುವಾರ ಹೇಳಿದೆ. 275 ಜನರ ಪ್ರಾಣಹಾನಿ ಮತ್ತು 1000 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಒಡಿಶಾದ ದುರಂತ ರೈಲು ಅಪಘಾತದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸಲಾಗಿದೆ.

ಜೂನ್ 2 ರಂದು ಕೋಲ್ಕತ್ತಾದಿಂದ ದಕ್ಷಿಣಕ್ಕೆ 250 ಕಿಮೀ ಮತ್ತು ಭುವನೇಶ್ವರದಿಂದ 170 ಕಿಮೀ ಉತ್ತರಕ್ಕೆ ಬಾಲಸೋರ್ ಜಿಲ್ಲೆಯ ಬಹನಾಗ ಬಜಾರ್ ನಿಲ್ದಾಣದ ಬಳಿ ಈ ಘಟನೆ ಸಂಭವಿಸಿದೆ. ಇದು ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್ ಮತ್ತು ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲುಗಳ ನಡುವೆ ಅಪಘಾತ ಸಂಭವಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT