ಒಡಿಶಾ ರೈಲು ದುರಂತದ ಚಿತ್ರ 
ದೇಶ

ಒಡಿಶಾ ರೈಲು ದುರಂತ: ನಿರ್ಲಕ್ಷ್ಯವೇ ಸಾವಿಗೆ ಕಾರಣ, ರೈಲ್ವೆ ಪೊಲೀಸರಿಂದ ಪ್ರಕರಣ ದಾಖಲು

ಒಡಿಶಾದ ಬಹನಾಗ ಬಳಿ ಸಂಭವಿಸಿದ ಭೀಕರ ರೈಲು ಅಪಘಾತದ ನಂತರ ನಿರ್ಲಕ್ಷ್ಯದಿಂದ ಸಾವು, ನೋವಿಗೆ ಕಾರಣವಾಗಿದ್ದಕ್ಕೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಸರ್ಕಾರಿ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಭುವನೇಶ್ವರ: ಒಡಿಶಾದ ಬಹನಾಗ ಬಳಿ ಸಂಭವಿಸಿದ ಭೀಕರ ರೈಲು ಅಪಘಾತದ ನಂತರ ನಿರ್ಲಕ್ಷ್ಯವೇ ಸಾವು, ನೋವಿಗೆ ಕಾರಣವಾಗಿದ್ದಕ್ಕೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಸರ್ಕಾರಿ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನಿರ್ದಿಷ್ಟ ರೈಲ್ವೇ ಉದ್ಯೋಗಿಗಳ ಅಪರಾಧವನ್ನು ಇನ್ನೂ ಪತ್ತೆ ಮಾಡಲಾಗಿಲ್ಲ. ತನಿಖೆ ಸಮಯದಲ್ಲಿ ಬಹಿರಂಗಪಡಿಸಲಾಗುವುದು ಎಂದು ಕಟಕ್‌ನಲ್ಲಿ ದಾಖಲಾಗಿರುವ ಪ್ರಥಮ ಮಾಹಿತಿ ವರದಿ ತಿಳಿಸಿದೆ.

ಐಪಿಸಿ ಸೆಕ್ಷನ್ 304-ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾಗುವುದು) ಸೆಕ್ಷನ್ 337 (ಇತರರ ಜೀವ ಮತ್ತು ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಕೃತ್ಯದಿಂದ ನೋವುಂಟುಮಾಡುವುದು) ಮತ್ತು 338 (ಘೋರ ಗಾಯವನ್ನುಂಟು ಮಾಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅಲ್ಲದೇ, ಸೆಕ್ಷನ್ 153 (ಉದ್ದೇಶಪೂರ್ವಕ ಲೋಪದಿಂದ ರೈಲ್ವೆಯಲ್ಲಿ ಪ್ರಯಾಣಿಸುವ ವ್ಯಕ್ತಿಗಳ ಸುರಕ್ಷತೆಗೆ ಅಪಾಯ ವನ್ನುಂಟುಮಾಡುವುದು), 154 (ನಿರ್ಲಕ್ಷ್ಯದ ಕ್ರಿಯೆ ಅಥವಾ ಲೋಪದಿಂದ ರೈಲ್ವೆಯಲ್ಲಿ ಪ್ರಯಾಣಿಸುವ ವ್ಯಕ್ತಿಗಳ ಸುರಕ್ಷತೆಗೆ ಅಪಾಯವನ್ನುಂಟುಮಾಡುವುದು) ಹಾಗೆಯೇ 175 (ವ್ಯಕ್ತಿಗಳ ಸುರಕ್ಷತೆಗೆ ಅಪಾಯವನ್ನುಂಟುಮಾಡುವುದು) ಮತ್ತು ರೈಲ್ವೆ ಕಾಯ್ದೆ 1989 ಅಡಿಯಲ್ಲೂ ಪ್ರಕರಣ ದಾಖಲಾಗಿದೆ.

ಮೇಲಿನ ಎಲ್ಲಾ ಆರೋಪಗಳ ಅಡಿಯಲ್ಲಿ ಅತ್ಯಧಿಕ ದಂಡದೊಂದಿಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ.  ಶುಕ್ರವಾರ ರಾತ್ರಿ ಬಾಲಸೋರ್‌ನ ಬಹನಾಗ ಬಜಾರ್ ನಿಲ್ದಾಣದಲ್ಲಿ ನಿಂತಿದ್ದ ಸರಕು ರೈಲಿಗೆ ಡಿಕ್ಕಿ ಹೊಡೆದು ಹಳಿ ತಪ್ಪಿದ್ದ  ಕೋರಮಂಡಲ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್  ಗೆ ಯಶವಂತಪುರ-ಹೌರಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದಾಗ ಕನಿಷ್ಠ 275 ಪ್ರಯಾಣಿಕರು ಸಾವನ್ನಪ್ಪಿದ್ದರು. ಸುಮಾರು 1,100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. 

ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಇಬ್ಬರು ಡಿಎಸ್ಪಿ ದರ್ಜೆಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಸರ್ಕಾರಿ ರೈಲ್ವೆ ಪೊಲೀಸ್ ಮೂಲಗಳು ತಿಳಿಸಿವೆ. ಪ್ರಕರಣದಲ್ಲಿ ಇತರರ ಪಾತ್ರ ಕಂಡುಬಂದರೆ ತನಿಖೆ ಇನ್ನಷ್ಟು ವಿಸ್ತರಗೊಳ್ಳಬಹುದು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

SCROLL FOR NEXT