ಬಾಲಸೋರೆಯ ಬಹನಾಗ ಬಜಾರ್ ರೈಲು ನಿಲ್ದಾಣದ ಬಳಿ ಗೂಡ್ಸ್ ರೈಲು ಹೊರಟಾಗ ಕೈಬೀಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ 
ದೇಶ

'ನಮ್ಮ ಜವಾಬ್ದಾರಿ ಇನ್ನೂ ಮುಗಿದಿಲ್ಲ, ನಾಪತ್ತೆಯಾದವರ ಪತ್ತೆ ಹಚ್ಚುವುದು ಮುಖ್ಯವಾಗಿದೆ': ರೈಲ್ವೆ ಸಚಿವ ಅಶ್ವಿನ್ ವೈಷ್ಣವ್

ಜೂನ್ 2 ರಂದು ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಮೂರು ರೈಲುಗಳ ಭೀಕರ ಅಪಘಾತದ ನಂತರ ನಾಪತ್ತೆಯಾದವರ ಕುಟುಂಬ ಸದಸ್ಯರನ್ನು ಆದಷ್ಟು ಬೇಗ ಪತ್ತೆ ಮಾಡುವುದು ನಮ್ಮ ಗುರಿಯಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಬಾಲಸೋರ್(ಒಡಿಶಾ): ಜೂನ್ 2 ರಂದು ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಮೂರು ರೈಲುಗಳ ಭೀಕರ ಅಪಘಾತದ ನಂತರ ನಾಪತ್ತೆಯಾದವರ ಕುಟುಂಬ ಸದಸ್ಯರನ್ನು ಆದಷ್ಟು ಬೇಗ ಪತ್ತೆ ಮಾಡುವುದು ನಮ್ಮ ಗುರಿಯಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಅಪಘಾತವಾದ 51 ಗಂಟೆಗಳ ನಂತರ ಬಾಲಸೋರ್ ನ ಬಹನಾಗದಲ್ಲಿ ಪ್ರಯಾಣಿಕ ರೈಲು ಸಂಚಾರ ಪುನಾರಂಭಗೊಂಡ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾಪತ್ತೆಯಾದವರ ಕುಟುಂಬದ ಎಲ್ಲ ಸದಸ್ಯರನ್ನು ಆದಷ್ಟು ಬೇಗ ಪತ್ತೆ ಹಚ್ಚುವುದು ನಮ್ಮ ಉದ್ದೇಶವಾಗಿದೆ. ನಮ್ಮ ಜವಾಬ್ದಾರಿ ಇನ್ನೂ ಮುಗಿದಿಲ್ಲ ಎಂದು ಭಾವುಕರಾಗಿ ನುಡಿದರು. 

ಬಾಲಸೋರ್‌ನಲ್ಲಿ ಅಪಘಾತ ಸಂಭವಿಸಿದ ನಂತರ ನಿನ್ನೆ ಭಾನುವಾರ ರಾತ್ರಿ 10.40 ರ ಸುಮಾರಿಗೆ ತನ್ನ ಪ್ರಯಾಣವನ್ನು ಪ್ರಾರಂಭಿಸಿತು ರೈಲು ಅಪಘಾತದಲ್ಲಿ 275 ಜನರು ಬಲಿಯಾಗಿದ್ದರು. 

ಅಪಘಾತದ ನಂತರ ಕಲ್ಲಿದ್ದಲು ಸಾಗಿಸುವ ರೈಲು ವೈಜಾಗ್ ಬಂದರಿನಿಂದ ರೂರ್ಕೆಲಾ ಸ್ಟೀಲ್ ಪ್ಲಾಂಟ್ ಕಡೆಗೆ ಹೋದರೆ ಬೆಂಗಳೂರು-ಹೌರಾ ರೈಲು ಶುಕ್ರವಾರ ದುರಂತವನ್ನು ಎದುರಿಸಿದ ಅದೇ ಟ್ರ್ಯಾಕ್‌ನಲ್ಲಿ ಚಲಿಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT