ಕಳೆದ ಶುಕ್ರವಾರ ಅಪಘಾತ ಸಂಭವಿಸಿದ ನಂತರದ ದೃಶ್ಯ 
ದೇಶ

ಒಡಿಶಾ: ಅಪಘಾತದ 51 ಗಂಟೆಗಳ ನಂತರ ಬಾಲಸೋರ್ ನಲ್ಲಿ ರೈಲು ಸಂಚಾರ ಆರಂಭ; ಕೈ ಮುಗಿದ ಸಚಿವ ಅಶ್ವಿನ್ ವೈಷ್ಣವ್

ಕಳೆದ ಶುಕ್ರವಾರ ಮೂರು ರೈಲುಗಳ ಭೀಕರ ಅಪಘಾತದಿಂದಾಗಿ ಹಾನಿಗೊಳಗಾದ ಒಡಿಶಾದ ಬಾಲಸೋರ್‌ನ ಬಹನಾಗ ಗ್ರಾಮದ ಹಳಿಗಳ ಮೇಲೆ ಭಾರತೀಯ ರೈಲ್ವೆ ಇಲಾಖೆಯಿಂದ ಪ್ರಯಾಣಿಕರ ರೈಲು ಇಂದು ಸೋಮವಾರ 51 ಗಂಟೆಗಳ ಬಳಿಕ ಸಂಚಾರ ಪುನಾರಂಭವಾಗಿದೆ.

ಭುವನೇಶ್ವರ: ಕಳೆದ ಶುಕ್ರವಾರ ಮೂರು ರೈಲುಗಳ ಭೀಕರ ಅಪಘಾತದಿಂದಾಗಿ ಹಾನಿಗೊಳಗಾದ ಒಡಿಶಾದ ಬಾಲಸೋರ್‌ನ ಬಹನಾಗ ಗ್ರಾಮದ ಹಳಿಗಳ ಮೇಲೆ ಭಾರತೀಯ ರೈಲ್ವೆ ಇಲಾಖೆಯಿಂದ ಪ್ರಯಾಣಿಕರ ರೈಲು ಇಂದು ಸೋಮವಾರ 51 ಗಂಟೆಗಳ ಬಳಿಕ ಸಂಚಾರ ಪುನಾರಂಭವಾಗಿದೆ.

ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ರೈಲುಗಳ ಅಪಘಾತದಲ್ಲಿ 275 ಜನರು ಮೃತಪಟ್ಟಿದ್ದರು. 1,000 ಕ್ಕೂ ಹೆಚ್ಚು ಜನರು ಗಾಯಗೊಂಡರು, ಭಾರತೀಯ ರೈಲ್ವೆ ಸೋಮವಾರ ಅಪಘಾತ ಪೀಡಿತ ಮಾರ್ಗದ ಹಳಿಗಳ ಮೇಲೆ ಪ್ರಯಾಣಿಕ ರೈಲುಗಳ ಓಡಾಟವನ್ನು ಪುನರಾರಂಭಿಸಿದೆ.

ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ನಿನ್ನೆ ಗೂಡ್ಸ್ ರೈಲಿನ ಸಿಬ್ಬಂದಿಗೆ ಕೈ ಬೀಸಿ ಸುರಕ್ಷಿತ ಪ್ರಯಾಣಕ್ಕಾಗಿ ಪ್ರಾರ್ಥಿಸಿದರು. ಎರಡೂ ಹಳಿಗಳ ಸೇವೆಗಳನ್ನು ಪುನಃಸ್ಥಾಪಿಸಲಾಗಿದೆ. ಅಪಘಾತದ 51 ಗಂಟೆಗಳ ನಂತರ ಎರಡೂ ಮಾರ್ಗಗಳಲ್ಲಿ ಸಾಮಾನ್ಯ ರೈಲು ಸೇವೆಗಳನ್ನು ಈಗ ಪುನಾರಂಭ ಮಾಡಲಾಗಿದೆ ಎಂದು ಅಶ್ವಿನಿ ವೈಷ್ಣವ್ ಹೇಳಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಅಶ್ವಿನ್ ವೈಷ್ಣವ್, ವಿದ್ಯುನ್ಮಾನ ಇಂಟರ್ ಲಾಕಿಂಗ್ ಬದಲಾವಣೆಯಿಂದ ಅಪಘಾತ ಸಂಭವಿಸಿದೆ ಎಂದು ಹೇಳಿದರು.

ಇಲೆಕ್ಟ್ರಾನಿಕ್ ಇಂಟರ್‌ಲಾಕಿಂಗ್ ಎನ್ನುವುದು ಸಿಗ್ನಲ್ ಉಪಕರಣದ ಒಂದು ವ್ಯವಸ್ಥೆಯಾಗಿದ್ದು ಅದು ಹಳಿಗಳ ಜೋಡಣೆಯ ಮೂಲಕ ರೈಲುಗಳ ನಡುವೆ ಸಂಘರ್ಷದ ಚಲನೆಯನ್ನು ತಡೆಯುತ್ತದೆ. ಅಸಮರ್ಪಕ ಅನುಕ್ರಮದಲ್ಲಿ ಸಂಕೇತಗಳನ್ನು ಬದಲಾಯಿಸುವುದನ್ನು ತಡೆಯಲು ಇದು ಮೂಲಭೂತವಾಗಿ ಸುರಕ್ಷತಾ ಕ್ರಮವಾಗಿದೆ. ಮಾರ್ಗವು ಸುರಕ್ಷಿತವೆಂದು ಸಾಬೀತುಪಡಿಸದ ಹೊರತು ಯಾವುದೇ ರೈಲು ಮುಂದುವರಿಯಲು ಸಂಕೇತವನ್ನು ಪಡೆಯುವುದಿಲ್ಲ ಎಂಬುದು ಈ ವ್ಯವಸ್ಥೆಯಾಗಿದೆ. 

ಇನ್ನು 275 ಜನರ ಸಾವಿಗೆ ಕಾರಣವಾದ ಮತ್ತು 1000 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ರೈಲು ಅಪಘಾತದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (CBI) ವಹಿಸಲಾಗಿದೆ.

ಈ ಅಪಘಾತ ಸಂಭವಿಸಿದ ರೀತಿ, ಪರಿಸ್ಥಿತಿಗಳನ್ನು ನೋಡುವುದು ಮತ್ತು ಆಡಳಿತಾತ್ಮಕ ಮಾಹಿತಿಯ ಪ್ರಕಾರ. ರೈಲ್ವೆ ಮಂಡಳಿಯು ಸಿಬಿಐಗೆ ತನಿಖೆಯನ್ನು ಶಿಫಾರಸು ಮಾಡುತ್ತಿದೆ ಎಂದು ಅಶ್ವಿನ್ ವೈಷ್ಣವ್ ಹೇಳಿದ್ದಾರೆ.

ಮೊನ್ನೆ ಜೂನ್ 2ರಂದು ಸಾಯಂಕಾಲ 7 ಗಂಟೆ ಸುಮಾರಿಗೆ ದಕ್ಷಿಣ ಕೋಲ್ಕತ್ತಾದಿಂದ ಸುಮಾರು 250 ಕಿಲೋ ಮೀಟರ್ ದೂರದಲ್ಲಿ ಮತ್ತು ಭುವನೇಶ್ವರಿಂದ 170 ಕಿಲೋ ಮೀಟರ್ ದೂರದಲ್ಲಿರುವ ಬಾಲಸೋರೆ ಜಿಲ್ಲೆಯ ಬಹನಗ ಬಜಾರ್ ನಿಲ್ದಾಣದಲ್ಲಿ ಈ ದುರ್ಘಟನೆ ನಡೆದಿದೆ. ಬೆಂಗಳೂರು-ಹೌರಾ ಎಕ್ಸ್ ಪ್ರೆಸ್ ಮತ್ತು ಶಾಲಿಮಾರ್-ಚೆನ್ನೈ ಕೊರೊಮಂಡಲ್ ಎಕ್ಸ್ ಪ್ರೆಸ್ ಮತ್ತು ಗೂಡ್ಸ್ ರೈಲಿನ ನಡುವೆ ಅಪಘಾತ ಸಂಭವಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT